ಹಾವು ತುಳಿದೆನೇ ಮಾನಿನಿ

ಹಾವು ತುಳಿದೆನೇ ಮಾನಿನಿ
ಹಾವು ತುಳಿದೆನೇ ||ಪ||

ಹಾವು ತುಳಿದು ಹಾರಿ ನಿಂತೆ
ಜೀವ ಕಳವಳಿಸಿತು ಗೆಳತಿ
ದೇಹತ್ರಯದ ಸ್ಮೃತಿಯು ತಪ್ಪಿ
ದೇವಾ ನೀನೆ ಗತಿಯು ಎಂದು ||೧||

ಹರಿಗೆ ಹಾಸಿಗೆಯಾದ ಹಾವು
ಹರನ ತೋಳಿನೊಳಿರುವ ಹಾವು
ಧರೆಯ ಹೊತ್ತು ಮೆರೆವ ಹಾವಿನ
ಶಿರವ ಮೆಟ್ಟಿ ಶಿವನ ದಯದಿ ||೨||

ಭೋಧಾನಂದವಾಗಿ ಬರಲು
ದಾರಿಯೊಳಗೆ ಮಲಗಿ ಇರಲು
ಪಾದದಿಂದ ಪೊಡವಿಗೊತ್ತಿ
ನಾದಗೊಳಿಸಿತು ನಿಜದಿ ನೋಡಿ ||೩||

ಕರಡಗಿ ಊರ ಹೊರಗೆ
ದಾರಿಕಟ್ಟಿ ತರುಬಿದಂಥ
ಘೋರತರದ ಉರಗ ಅದರ
ಕ್ವಾರಿಹಲ್ಲು ಮುರಿದ ತೆರದಿ ||೪||

ಸತ್ಯ ಶಿಶುನಾಳಧೀಶನ
ಉತ್ತಮ ಸೇವಕನಿಗೆ
ಕತ್ತಲೊಳು ಬಂದು ಕಾಲಿಗೆ
ಸುತ್ತಿಕೊಂಡಿತು ಸಣ್ಣನಾಗರ ||೫||

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದೀಪದ ಕಂಬ – ೪ (ಜೀವನ ಚಿತ್ರ)
Next post ಹಾವು ಕಂಡಿರೇನಮ್ಮಯ್ಯಾ

ಸಣ್ಣ ಕತೆ

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ಹುಟ್ಟು

    ಶಾದಿ ಮಹಲ್‌ನ ಒಳ ಆವರಣದಲ್ಲಿ ದೊಡ್ಡ ಹಾಲ್‌ನಲ್ಲಿ ಹೆಂಗಸರೆಲ್ಲಾ ಸೇರಿದ್ದರು. ಹೊರಗಡೆ ಹಾಕಿದ್ದ ಶಾಮಿಯಾನದಲ್ಲಿ ಗಂಡಸರು ನೆರೆದಿದ್ದರು. ಒಂದು ಕಡೆಯ ಎತ್ತರವಾದ ವೇದಿಕೆಯ ಮೇಲೆ ಮದುವೆ ಗಂಡು,… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…