ದುರ್ದೈವಿ

ಮಾಮರದ ತೋಪಿನಲಿ
ಚೆಂದಿರನ ಬೆಳಕಿನಲಿ
ಕೊಳದ ಸೋಪಾನದಲಿ
ಕುಳಿತಿರುವಳಿವಳಾರು?

ನೀರಿನಂಚಿಗೆ ಸರಿದು
ತೊಯ್ಸಿಹಳು ನಿರಿಗಳನು
ಕಾಲ್ಗಳನು ಚಾಚುವಳು
ಮುದುರುವಳು ಕ್ಷಣಕೊಮ್ಮೆ

ಉಬ್ಬಿಹುದು ಇವಳೆದುಯು
ನಿಟ್ಟುಸಿರ ಬಿಡುತಿಹಳು
ಜೀವದಾಶೆಯ ತೊರೆದು
ಕುಳಿತಿಹಳು ತನುಗಾತ್ರಿ

ದಾರಿಗರ ಅರಿವಿಲ್ಲ
ಪ್ರಾಣಿಗಳ ಭಯವಿಲ್ಲ
ಗಂಗೆಯನು ದಿಟ್ಟಿಸುತ
ಉಸಿರುತಿಹಳೇನನೋ

ಯೌವನದ ಶೋಭೆಯಲಿ
ತುಂಬಿ ತುಳುಕುವ ಮುಖವು
ಕಳೆಗುಂದಿ ಬಾಡಿಹುದು
ಕಂಬನಿಯ ತರುತಿಹಳು

ಜಗದ ಸುಖವನು ಬಿಟ್ಟು
ಬಂದಿಹಳು ದುರ್ದೈವಿ
ಏನಿಹುದೊ ಮನದಿಚ್ಛೆ
ಯಾರೇನು ಮಾಡಿದರೊ

ನಿಷ್ಕಳಂಕದ ಪ್ರೇಮ
ಸ್ಪೂರ್ತಿಯಲಿ ಬಂಧಿಸುತ
ಅಧರವನು ಚುಂಬಿಸುವ
ಗೆಳೆಯನೇನಾದನೋ

ತಾಳಲಾರೆವು ಹಸಿವ
ಏನ ಕೊಡುವೆಯೆ ಅಮ್ಮ
ಎನುತ ಪೀಡಿಸಿ ಸುಳಿವ
ಮಕ್ಕಳೇನಾದರೋ

ಜಗಕೆ ಒಡೆಯನು ಪರಮ
ಕರುಣಮೂರ್ತಿಯು ಎಂದು
ಜನರು ಹೊಗಳುತಲಿರುವ
ದೇವ ತಾನೆಲ್ಲಿಹನೊ

ಶೂನ್ಯ ಹೃದಯಳು ಇನ್ನು
ಮುಳುಗುವಳು ಕ್ಷಣದೊಳಗೆ
ಕಂಗಳನು ಮುಚ್ಚಿದಳು
ಎಚ್ಚರವ ತಪ್ಪಿದಳು

ಕಾಲಚಕ್ರವ ನೆಗೆದು
ಸ್ಥೂಲಕಾಯವ ಬಿಟ್ಟು
ಯಾರು ಅರಿಯದ ಸ್ಥಳಕೆ
ಹೊರಡುತಿದೆ ಇವಳಾತ್ಮ

ಹೋಗಿ ಬದಿಯಲಿ ಕುಳಿತು
ಮೈದಡವಿ ಕಣ್ಣೊರಸಿ
ಏಳು ತಂಗೀ ಎಂದು
ಸಂತೈಸಿ ಕರೆಯಲೇ?

ಪೋಗು! ನೀನಾರಿಲ್ಲಿ
ಬಂದುದೇತಕೆ? ಎಂದು
ಕ್ರೂರ ದೃಷ್ಟಿಯೊಳೆನ್ನ
ನೋಡಿಬಿಡುವಳೊ ಏನೊ!

ಆಗುವುದು ನಿಲ್ಲದದು
ಆಗದಿಹುದಾಗದದು
ಹೀಗೆಂದು ಜನಕಜೆಯು
ಸಾಗಿದಳು ಮುಂದೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಚುಟುಕುಗಳು
Next post ಮೊಸಳೆ ಕಣ್ಣೀರು

ಸಣ್ಣ ಕತೆ

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…