ದುರ್ದೈವಿ

ಮಾಮರದ ತೋಪಿನಲಿ
ಚೆಂದಿರನ ಬೆಳಕಿನಲಿ
ಕೊಳದ ಸೋಪಾನದಲಿ
ಕುಳಿತಿರುವಳಿವಳಾರು?

ನೀರಿನಂಚಿಗೆ ಸರಿದು
ತೊಯ್ಸಿಹಳು ನಿರಿಗಳನು
ಕಾಲ್ಗಳನು ಚಾಚುವಳು
ಮುದುರುವಳು ಕ್ಷಣಕೊಮ್ಮೆ

ಉಬ್ಬಿಹುದು ಇವಳೆದುಯು
ನಿಟ್ಟುಸಿರ ಬಿಡುತಿಹಳು
ಜೀವದಾಶೆಯ ತೊರೆದು
ಕುಳಿತಿಹಳು ತನುಗಾತ್ರಿ

ದಾರಿಗರ ಅರಿವಿಲ್ಲ
ಪ್ರಾಣಿಗಳ ಭಯವಿಲ್ಲ
ಗಂಗೆಯನು ದಿಟ್ಟಿಸುತ
ಉಸಿರುತಿಹಳೇನನೋ

ಯೌವನದ ಶೋಭೆಯಲಿ
ತುಂಬಿ ತುಳುಕುವ ಮುಖವು
ಕಳೆಗುಂದಿ ಬಾಡಿಹುದು
ಕಂಬನಿಯ ತರುತಿಹಳು

ಜಗದ ಸುಖವನು ಬಿಟ್ಟು
ಬಂದಿಹಳು ದುರ್ದೈವಿ
ಏನಿಹುದೊ ಮನದಿಚ್ಛೆ
ಯಾರೇನು ಮಾಡಿದರೊ

ನಿಷ್ಕಳಂಕದ ಪ್ರೇಮ
ಸ್ಪೂರ್ತಿಯಲಿ ಬಂಧಿಸುತ
ಅಧರವನು ಚುಂಬಿಸುವ
ಗೆಳೆಯನೇನಾದನೋ

ತಾಳಲಾರೆವು ಹಸಿವ
ಏನ ಕೊಡುವೆಯೆ ಅಮ್ಮ
ಎನುತ ಪೀಡಿಸಿ ಸುಳಿವ
ಮಕ್ಕಳೇನಾದರೋ

ಜಗಕೆ ಒಡೆಯನು ಪರಮ
ಕರುಣಮೂರ್ತಿಯು ಎಂದು
ಜನರು ಹೊಗಳುತಲಿರುವ
ದೇವ ತಾನೆಲ್ಲಿಹನೊ

ಶೂನ್ಯ ಹೃದಯಳು ಇನ್ನು
ಮುಳುಗುವಳು ಕ್ಷಣದೊಳಗೆ
ಕಂಗಳನು ಮುಚ್ಚಿದಳು
ಎಚ್ಚರವ ತಪ್ಪಿದಳು

ಕಾಲಚಕ್ರವ ನೆಗೆದು
ಸ್ಥೂಲಕಾಯವ ಬಿಟ್ಟು
ಯಾರು ಅರಿಯದ ಸ್ಥಳಕೆ
ಹೊರಡುತಿದೆ ಇವಳಾತ್ಮ

ಹೋಗಿ ಬದಿಯಲಿ ಕುಳಿತು
ಮೈದಡವಿ ಕಣ್ಣೊರಸಿ
ಏಳು ತಂಗೀ ಎಂದು
ಸಂತೈಸಿ ಕರೆಯಲೇ?

ಪೋಗು! ನೀನಾರಿಲ್ಲಿ
ಬಂದುದೇತಕೆ? ಎಂದು
ಕ್ರೂರ ದೃಷ್ಟಿಯೊಳೆನ್ನ
ನೋಡಿಬಿಡುವಳೊ ಏನೊ!

ಆಗುವುದು ನಿಲ್ಲದದು
ಆಗದಿಹುದಾಗದದು
ಹೀಗೆಂದು ಜನಕಜೆಯು
ಸಾಗಿದಳು ಮುಂದೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಚುಟುಕುಗಳು
Next post ಮೊಸಳೆ ಕಣ್ಣೀರು

ಸಣ್ಣ ಕತೆ

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

cheap jordans|wholesale air max|wholesale jordans|wholesale jewelry|wholesale jerseys