Home / ಕವನ / ಕವಿತೆ / ದುರ್ದೈವಿ

ದುರ್ದೈವಿ

ಮಾಮರದ ತೋಪಿನಲಿ
ಚೆಂದಿರನ ಬೆಳಕಿನಲಿ
ಕೊಳದ ಸೋಪಾನದಲಿ
ಕುಳಿತಿರುವಳಿವಳಾರು?

ನೀರಿನಂಚಿಗೆ ಸರಿದು
ತೊಯ್ಸಿಹಳು ನಿರಿಗಳನು
ಕಾಲ್ಗಳನು ಚಾಚುವಳು
ಮುದುರುವಳು ಕ್ಷಣಕೊಮ್ಮೆ

ಉಬ್ಬಿಹುದು ಇವಳೆದುಯು
ನಿಟ್ಟುಸಿರ ಬಿಡುತಿಹಳು
ಜೀವದಾಶೆಯ ತೊರೆದು
ಕುಳಿತಿಹಳು ತನುಗಾತ್ರಿ

ದಾರಿಗರ ಅರಿವಿಲ್ಲ
ಪ್ರಾಣಿಗಳ ಭಯವಿಲ್ಲ
ಗಂಗೆಯನು ದಿಟ್ಟಿಸುತ
ಉಸಿರುತಿಹಳೇನನೋ

ಯೌವನದ ಶೋಭೆಯಲಿ
ತುಂಬಿ ತುಳುಕುವ ಮುಖವು
ಕಳೆಗುಂದಿ ಬಾಡಿಹುದು
ಕಂಬನಿಯ ತರುತಿಹಳು

ಜಗದ ಸುಖವನು ಬಿಟ್ಟು
ಬಂದಿಹಳು ದುರ್ದೈವಿ
ಏನಿಹುದೊ ಮನದಿಚ್ಛೆ
ಯಾರೇನು ಮಾಡಿದರೊ

ನಿಷ್ಕಳಂಕದ ಪ್ರೇಮ
ಸ್ಪೂರ್ತಿಯಲಿ ಬಂಧಿಸುತ
ಅಧರವನು ಚುಂಬಿಸುವ
ಗೆಳೆಯನೇನಾದನೋ

ತಾಳಲಾರೆವು ಹಸಿವ
ಏನ ಕೊಡುವೆಯೆ ಅಮ್ಮ
ಎನುತ ಪೀಡಿಸಿ ಸುಳಿವ
ಮಕ್ಕಳೇನಾದರೋ

ಜಗಕೆ ಒಡೆಯನು ಪರಮ
ಕರುಣಮೂರ್ತಿಯು ಎಂದು
ಜನರು ಹೊಗಳುತಲಿರುವ
ದೇವ ತಾನೆಲ್ಲಿಹನೊ

ಶೂನ್ಯ ಹೃದಯಳು ಇನ್ನು
ಮುಳುಗುವಳು ಕ್ಷಣದೊಳಗೆ
ಕಂಗಳನು ಮುಚ್ಚಿದಳು
ಎಚ್ಚರವ ತಪ್ಪಿದಳು

ಕಾಲಚಕ್ರವ ನೆಗೆದು
ಸ್ಥೂಲಕಾಯವ ಬಿಟ್ಟು
ಯಾರು ಅರಿಯದ ಸ್ಥಳಕೆ
ಹೊರಡುತಿದೆ ಇವಳಾತ್ಮ

ಹೋಗಿ ಬದಿಯಲಿ ಕುಳಿತು
ಮೈದಡವಿ ಕಣ್ಣೊರಸಿ
ಏಳು ತಂಗೀ ಎಂದು
ಸಂತೈಸಿ ಕರೆಯಲೇ?

ಪೋಗು! ನೀನಾರಿಲ್ಲಿ
ಬಂದುದೇತಕೆ? ಎಂದು
ಕ್ರೂರ ದೃಷ್ಟಿಯೊಳೆನ್ನ
ನೋಡಿಬಿಡುವಳೊ ಏನೊ!

ಆಗುವುದು ನಿಲ್ಲದದು
ಆಗದಿಹುದಾಗದದು
ಹೀಗೆಂದು ಜನಕಜೆಯು
ಸಾಗಿದಳು ಮುಂದೆ
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...