ದುರ್ದೈವಿ

ಮಾಮರದ ತೋಪಿನಲಿ
ಚೆಂದಿರನ ಬೆಳಕಿನಲಿ
ಕೊಳದ ಸೋಪಾನದಲಿ
ಕುಳಿತಿರುವಳಿವಳಾರು?

ನೀರಿನಂಚಿಗೆ ಸರಿದು
ತೊಯ್ಸಿಹಳು ನಿರಿಗಳನು
ಕಾಲ್ಗಳನು ಚಾಚುವಳು
ಮುದುರುವಳು ಕ್ಷಣಕೊಮ್ಮೆ

ಉಬ್ಬಿಹುದು ಇವಳೆದುಯು
ನಿಟ್ಟುಸಿರ ಬಿಡುತಿಹಳು
ಜೀವದಾಶೆಯ ತೊರೆದು
ಕುಳಿತಿಹಳು ತನುಗಾತ್ರಿ

ದಾರಿಗರ ಅರಿವಿಲ್ಲ
ಪ್ರಾಣಿಗಳ ಭಯವಿಲ್ಲ
ಗಂಗೆಯನು ದಿಟ್ಟಿಸುತ
ಉಸಿರುತಿಹಳೇನನೋ

ಯೌವನದ ಶೋಭೆಯಲಿ
ತುಂಬಿ ತುಳುಕುವ ಮುಖವು
ಕಳೆಗುಂದಿ ಬಾಡಿಹುದು
ಕಂಬನಿಯ ತರುತಿಹಳು

ಜಗದ ಸುಖವನು ಬಿಟ್ಟು
ಬಂದಿಹಳು ದುರ್ದೈವಿ
ಏನಿಹುದೊ ಮನದಿಚ್ಛೆ
ಯಾರೇನು ಮಾಡಿದರೊ

ನಿಷ್ಕಳಂಕದ ಪ್ರೇಮ
ಸ್ಪೂರ್ತಿಯಲಿ ಬಂಧಿಸುತ
ಅಧರವನು ಚುಂಬಿಸುವ
ಗೆಳೆಯನೇನಾದನೋ

ತಾಳಲಾರೆವು ಹಸಿವ
ಏನ ಕೊಡುವೆಯೆ ಅಮ್ಮ
ಎನುತ ಪೀಡಿಸಿ ಸುಳಿವ
ಮಕ್ಕಳೇನಾದರೋ

ಜಗಕೆ ಒಡೆಯನು ಪರಮ
ಕರುಣಮೂರ್ತಿಯು ಎಂದು
ಜನರು ಹೊಗಳುತಲಿರುವ
ದೇವ ತಾನೆಲ್ಲಿಹನೊ

ಶೂನ್ಯ ಹೃದಯಳು ಇನ್ನು
ಮುಳುಗುವಳು ಕ್ಷಣದೊಳಗೆ
ಕಂಗಳನು ಮುಚ್ಚಿದಳು
ಎಚ್ಚರವ ತಪ್ಪಿದಳು

ಕಾಲಚಕ್ರವ ನೆಗೆದು
ಸ್ಥೂಲಕಾಯವ ಬಿಟ್ಟು
ಯಾರು ಅರಿಯದ ಸ್ಥಳಕೆ
ಹೊರಡುತಿದೆ ಇವಳಾತ್ಮ

ಹೋಗಿ ಬದಿಯಲಿ ಕುಳಿತು
ಮೈದಡವಿ ಕಣ್ಣೊರಸಿ
ಏಳು ತಂಗೀ ಎಂದು
ಸಂತೈಸಿ ಕರೆಯಲೇ?

ಪೋಗು! ನೀನಾರಿಲ್ಲಿ
ಬಂದುದೇತಕೆ? ಎಂದು
ಕ್ರೂರ ದೃಷ್ಟಿಯೊಳೆನ್ನ
ನೋಡಿಬಿಡುವಳೊ ಏನೊ!

ಆಗುವುದು ನಿಲ್ಲದದು
ಆಗದಿಹುದಾಗದದು
ಹೀಗೆಂದು ಜನಕಜೆಯು
ಸಾಗಿದಳು ಮುಂದೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಚುಟುಕುಗಳು
Next post ಮೊಸಳೆ ಕಣ್ಣೀರು

ಸಣ್ಣ ಕತೆ

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ಬೆಟ್ಟಿ

    ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…

  • ಒಂದು ಹಿಡಿ ಪ್ರೀತಿ

    ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…

cheap jordans|wholesale air max|wholesale jordans|wholesale jewelry|wholesale jerseys