Home / ಕವನ / ಕವಿತೆ / ದುರ್ದೈವಿ

ದುರ್ದೈವಿ

ಮಾಮರದ ತೋಪಿನಲಿ
ಚೆಂದಿರನ ಬೆಳಕಿನಲಿ
ಕೊಳದ ಸೋಪಾನದಲಿ
ಕುಳಿತಿರುವಳಿವಳಾರು?

ನೀರಿನಂಚಿಗೆ ಸರಿದು
ತೊಯ್ಸಿಹಳು ನಿರಿಗಳನು
ಕಾಲ್ಗಳನು ಚಾಚುವಳು
ಮುದುರುವಳು ಕ್ಷಣಕೊಮ್ಮೆ

ಉಬ್ಬಿಹುದು ಇವಳೆದುಯು
ನಿಟ್ಟುಸಿರ ಬಿಡುತಿಹಳು
ಜೀವದಾಶೆಯ ತೊರೆದು
ಕುಳಿತಿಹಳು ತನುಗಾತ್ರಿ

ದಾರಿಗರ ಅರಿವಿಲ್ಲ
ಪ್ರಾಣಿಗಳ ಭಯವಿಲ್ಲ
ಗಂಗೆಯನು ದಿಟ್ಟಿಸುತ
ಉಸಿರುತಿಹಳೇನನೋ

ಯೌವನದ ಶೋಭೆಯಲಿ
ತುಂಬಿ ತುಳುಕುವ ಮುಖವು
ಕಳೆಗುಂದಿ ಬಾಡಿಹುದು
ಕಂಬನಿಯ ತರುತಿಹಳು

ಜಗದ ಸುಖವನು ಬಿಟ್ಟು
ಬಂದಿಹಳು ದುರ್ದೈವಿ
ಏನಿಹುದೊ ಮನದಿಚ್ಛೆ
ಯಾರೇನು ಮಾಡಿದರೊ

ನಿಷ್ಕಳಂಕದ ಪ್ರೇಮ
ಸ್ಪೂರ್ತಿಯಲಿ ಬಂಧಿಸುತ
ಅಧರವನು ಚುಂಬಿಸುವ
ಗೆಳೆಯನೇನಾದನೋ

ತಾಳಲಾರೆವು ಹಸಿವ
ಏನ ಕೊಡುವೆಯೆ ಅಮ್ಮ
ಎನುತ ಪೀಡಿಸಿ ಸುಳಿವ
ಮಕ್ಕಳೇನಾದರೋ

ಜಗಕೆ ಒಡೆಯನು ಪರಮ
ಕರುಣಮೂರ್ತಿಯು ಎಂದು
ಜನರು ಹೊಗಳುತಲಿರುವ
ದೇವ ತಾನೆಲ್ಲಿಹನೊ

ಶೂನ್ಯ ಹೃದಯಳು ಇನ್ನು
ಮುಳುಗುವಳು ಕ್ಷಣದೊಳಗೆ
ಕಂಗಳನು ಮುಚ್ಚಿದಳು
ಎಚ್ಚರವ ತಪ್ಪಿದಳು

ಕಾಲಚಕ್ರವ ನೆಗೆದು
ಸ್ಥೂಲಕಾಯವ ಬಿಟ್ಟು
ಯಾರು ಅರಿಯದ ಸ್ಥಳಕೆ
ಹೊರಡುತಿದೆ ಇವಳಾತ್ಮ

ಹೋಗಿ ಬದಿಯಲಿ ಕುಳಿತು
ಮೈದಡವಿ ಕಣ್ಣೊರಸಿ
ಏಳು ತಂಗೀ ಎಂದು
ಸಂತೈಸಿ ಕರೆಯಲೇ?

ಪೋಗು! ನೀನಾರಿಲ್ಲಿ
ಬಂದುದೇತಕೆ? ಎಂದು
ಕ್ರೂರ ದೃಷ್ಟಿಯೊಳೆನ್ನ
ನೋಡಿಬಿಡುವಳೊ ಏನೊ!

ಆಗುವುದು ನಿಲ್ಲದದು
ಆಗದಿಹುದಾಗದದು
ಹೀಗೆಂದು ಜನಕಜೆಯು
ಸಾಗಿದಳು ಮುಂದೆ
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...