Home / ಕವನ / ಕವಿತೆ / ವಿಧಿ

ವಿಧಿ

ತಾರಣ ವರುಷದ ನಾಲ್ಕನೆ ಮಾಸದ
ಅಂತ್ಯದ ದಿನವದು ಮುಂಜಾನೆ
ಊರಿನ ಜನರಿಗೆ ಹೇಳಲು ತೀರದ
ಸಡಗರ ತುಂಬಿದೆ ಬಿಡುವಿಲ್ಲ

ದಾನವು ಧರ್ಮವು ದಾಸರ ಪದಗಳು
ಸ್ನಾನವು ಜಪಗಳು ನಡೆದಿಹುವು
ಏನಿದು ಎಂದರೆ ಬಾಲಕನೊಬ್ಬನು
ಕನ್ನಡಿಯೊಂದನು ತೋರಿದನು

ಮಸಿಯನು ಪೂಸಿದ ಮುರುಕಿನ ಕನ್ನಡಿ
ಕಂಗಳಿಗಿಟ್ಟನು ನೋಡೆಂದು
ನೀಲಿಯ ಭವನದಿ ಕಾಂತಿವಿಹೀನದ
ಸ್ವಾಮಿಯ ಕಂಡೆನು ಕಾತರದಿ

ಧಗಧಗಿಸುವ ಆ ಕಿರಣಗಳಿಲ್ಲದೆ
ಭಿನ್ನದ ಮೂರುತಿ ಕಾಣಿಸಿತು
‘ರಾಹುವೊ ಕೇತುವೊ ನುಂಗಿವೆ ಸೂರ್ಯನ
ತಿಳಿಯಿತೆ’ ಎಂದನು ಬಾಲಕನು

ಸೃಷ್ಟಿಯನೆಲ್ಲವ ಪಾಲನೆ ಮಾಡುವ
ಸೂರ್ಯನ ಪಾಡನು ನೋಡಿದೆನು
ತಿವಿದನು ಕವಿ ಹೃದಯವ ಆ ಭಾಸ್ಕರ
ಮಗಳೇ ವಿಧಿಯನು ನೋಡೆಂದು

ಏನಿದು ಅಚ್ಚರಿ ಓ ರವಿ ದೇವಾ
ನಿನಗೂ ವಿಧಿಯಾಜ್ಞೆಯು ಉಂಟೇ?
ಬಾನೊಳು ಧಗಿಸುವ ಮಿಹಿರನ ಕೂಡ
ಬಂಧಿಸಿ ಕೆಡಿಸಿತೆ ಆ ವಿಧಿಯು

ನೀನಿರುತಿಹ ಬಹುದೂರದ ಭವನವು
ಕಲ್ಮಷವಿಲ್ಲದ ಆಗಸವು
ನಿನ್ನೊಳು ತುಂಬಿದೆ ಜಗವನು ಬೆಳಗಿಸಿ
ನಿತ್ಯವು ನಡಸುವ ಸಾಹಸವು

ಭುವಿಯನೆ ಕುದಿಸುತ ಪ್ರಜ್ವಲಿಸುವ ಪ್ರಭು
ವಿಧಿಯನು ಗೆಲ್ಲಲು ಅಸದಳವೆ?
ಎದುರಿಸಿ ನಿನ್ನಾ ಜ್ವಾಲೆಯ ಝಳಪಿಸಿ
ಸಹಿಸದೆ ಪೋದೆಯ ಆ ವಿಧಿಯ?

ಆಗದು ಆಗದು ಎಂದಿಗು ಮಗಳೇ
ಸಾಹಸಿಯಾ ವಿಧಿ ಚಿರಜೀವಿ!
ಬಾಳಿನ ತಳಿರಿನ ಕುಡಿಗಳ ಚಿವುಟುತ
ಕಿಲಿ ಕಿಲಿ ನಗುವುದೆ ಅವನಾಟ!

ಸುಖದೊಳು ದುಃಖದ ಮೊಳಕೆಯ ನಾಟಿಸಿ
ಕಂಬನಿಗರಸುತ ಬೆಳಸುವನು
ರೋದನ ದನಿಯನು ಕೇಳುತ ಹರುಷದಿ
ಕರತಾಡನದಿಂ ಕುಣಿಯುವನು

ಇಂತಿರು ಅಂತಿರು ಎನ್ನುತ ಸೃಷ್ಟಿಯ
ನಿಯಮಿಸಿ ಆಜ್ಞೆಯ ವಿಧಿಸುವನು
ಯಂತ್ರ ವಸ್ತುಗಳಾಗಿಹೆವೆಲ್ಲರು
ಆ ವಿಧಿ ಶಾಸನದಡಿಯೊಳಗೆ

ಮಾನುಷ ಯತ್ನಕೆ, ಸೌಖ್ಯಕೆ ದೈವವು
ನಾನಾ ಘಾತವ ತಂದಂತೆ
ಬಾನೊಳು ಸುಳಿಯುತ ಸುಖಿಸವ ನನ್ನನು
ಕ್ರಾಂತಿಯು ಕ್ಷಣದೊಳು ಕೆಡಿಸಿಹುದು

ವಿಧಿ ನಿಯಮದ ಒಂದಾಜ್ಞೆಯು ಮೀರದೆ
ಸಲಿಸುತ ಬಂದಿದೆ ಯುಗ ಯುಗವು
ನಾವದನೆದುರಿಸಲಾಗದು ಅಮ್ಮಾ
ಜನಕಜೆ ಎಂದನು ದಿನಕರನು
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...