ವಿಧಿ

ತಾರಣ ವರುಷದ ನಾಲ್ಕನೆ ಮಾಸದ
ಅಂತ್ಯದ ದಿನವದು ಮುಂಜಾನೆ
ಊರಿನ ಜನರಿಗೆ ಹೇಳಲು ತೀರದ
ಸಡಗರ ತುಂಬಿದೆ ಬಿಡುವಿಲ್ಲ

ದಾನವು ಧರ್ಮವು ದಾಸರ ಪದಗಳು
ಸ್ನಾನವು ಜಪಗಳು ನಡೆದಿಹುವು
ಏನಿದು ಎಂದರೆ ಬಾಲಕನೊಬ್ಬನು
ಕನ್ನಡಿಯೊಂದನು ತೋರಿದನು

ಮಸಿಯನು ಪೂಸಿದ ಮುರುಕಿನ ಕನ್ನಡಿ
ಕಂಗಳಿಗಿಟ್ಟನು ನೋಡೆಂದು
ನೀಲಿಯ ಭವನದಿ ಕಾಂತಿವಿಹೀನದ
ಸ್ವಾಮಿಯ ಕಂಡೆನು ಕಾತರದಿ

ಧಗಧಗಿಸುವ ಆ ಕಿರಣಗಳಿಲ್ಲದೆ
ಭಿನ್ನದ ಮೂರುತಿ ಕಾಣಿಸಿತು
‘ರಾಹುವೊ ಕೇತುವೊ ನುಂಗಿವೆ ಸೂರ್ಯನ
ತಿಳಿಯಿತೆ’ ಎಂದನು ಬಾಲಕನು

ಸೃಷ್ಟಿಯನೆಲ್ಲವ ಪಾಲನೆ ಮಾಡುವ
ಸೂರ್ಯನ ಪಾಡನು ನೋಡಿದೆನು
ತಿವಿದನು ಕವಿ ಹೃದಯವ ಆ ಭಾಸ್ಕರ
ಮಗಳೇ ವಿಧಿಯನು ನೋಡೆಂದು

ಏನಿದು ಅಚ್ಚರಿ ಓ ರವಿ ದೇವಾ
ನಿನಗೂ ವಿಧಿಯಾಜ್ಞೆಯು ಉಂಟೇ?
ಬಾನೊಳು ಧಗಿಸುವ ಮಿಹಿರನ ಕೂಡ
ಬಂಧಿಸಿ ಕೆಡಿಸಿತೆ ಆ ವಿಧಿಯು

ನೀನಿರುತಿಹ ಬಹುದೂರದ ಭವನವು
ಕಲ್ಮಷವಿಲ್ಲದ ಆಗಸವು
ನಿನ್ನೊಳು ತುಂಬಿದೆ ಜಗವನು ಬೆಳಗಿಸಿ
ನಿತ್ಯವು ನಡಸುವ ಸಾಹಸವು

ಭುವಿಯನೆ ಕುದಿಸುತ ಪ್ರಜ್ವಲಿಸುವ ಪ್ರಭು
ವಿಧಿಯನು ಗೆಲ್ಲಲು ಅಸದಳವೆ?
ಎದುರಿಸಿ ನಿನ್ನಾ ಜ್ವಾಲೆಯ ಝಳಪಿಸಿ
ಸಹಿಸದೆ ಪೋದೆಯ ಆ ವಿಧಿಯ?

ಆಗದು ಆಗದು ಎಂದಿಗು ಮಗಳೇ
ಸಾಹಸಿಯಾ ವಿಧಿ ಚಿರಜೀವಿ!
ಬಾಳಿನ ತಳಿರಿನ ಕುಡಿಗಳ ಚಿವುಟುತ
ಕಿಲಿ ಕಿಲಿ ನಗುವುದೆ ಅವನಾಟ!

ಸುಖದೊಳು ದುಃಖದ ಮೊಳಕೆಯ ನಾಟಿಸಿ
ಕಂಬನಿಗರಸುತ ಬೆಳಸುವನು
ರೋದನ ದನಿಯನು ಕೇಳುತ ಹರುಷದಿ
ಕರತಾಡನದಿಂ ಕುಣಿಯುವನು

ಇಂತಿರು ಅಂತಿರು ಎನ್ನುತ ಸೃಷ್ಟಿಯ
ನಿಯಮಿಸಿ ಆಜ್ಞೆಯ ವಿಧಿಸುವನು
ಯಂತ್ರ ವಸ್ತುಗಳಾಗಿಹೆವೆಲ್ಲರು
ಆ ವಿಧಿ ಶಾಸನದಡಿಯೊಳಗೆ

ಮಾನುಷ ಯತ್ನಕೆ, ಸೌಖ್ಯಕೆ ದೈವವು
ನಾನಾ ಘಾತವ ತಂದಂತೆ
ಬಾನೊಳು ಸುಳಿಯುತ ಸುಖಿಸವ ನನ್ನನು
ಕ್ರಾಂತಿಯು ಕ್ಷಣದೊಳು ಕೆಡಿಸಿಹುದು

ವಿಧಿ ನಿಯಮದ ಒಂದಾಜ್ಞೆಯು ಮೀರದೆ
ಸಲಿಸುತ ಬಂದಿದೆ ಯುಗ ಯುಗವು
ನಾವದನೆದುರಿಸಲಾಗದು ಅಮ್ಮಾ
ಜನಕಜೆ ಎಂದನು ದಿನಕರನು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಎರಡು ಹನಿಗಳು
Next post ಮಲ್ಲಿಗೆ

ಸಣ್ಣ ಕತೆ

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ದೇವರು

    ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. "ಪತಿಯೇ ದೇವರು"… Read more…

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…

  • ಶಾಕಿಂಗ್ ಪ್ರೇಮ ಪ್ರಕರಣ

    ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…

cheap jordans|wholesale air max|wholesale jordans|wholesale jewelry|wholesale jerseys