Home / ಕವನ / ಕವಿತೆ / ವಿಧಿ

ವಿಧಿ

ತಾರಣ ವರುಷದ ನಾಲ್ಕನೆ ಮಾಸದ
ಅಂತ್ಯದ ದಿನವದು ಮುಂಜಾನೆ
ಊರಿನ ಜನರಿಗೆ ಹೇಳಲು ತೀರದ
ಸಡಗರ ತುಂಬಿದೆ ಬಿಡುವಿಲ್ಲ

ದಾನವು ಧರ್ಮವು ದಾಸರ ಪದಗಳು
ಸ್ನಾನವು ಜಪಗಳು ನಡೆದಿಹುವು
ಏನಿದು ಎಂದರೆ ಬಾಲಕನೊಬ್ಬನು
ಕನ್ನಡಿಯೊಂದನು ತೋರಿದನು

ಮಸಿಯನು ಪೂಸಿದ ಮುರುಕಿನ ಕನ್ನಡಿ
ಕಂಗಳಿಗಿಟ್ಟನು ನೋಡೆಂದು
ನೀಲಿಯ ಭವನದಿ ಕಾಂತಿವಿಹೀನದ
ಸ್ವಾಮಿಯ ಕಂಡೆನು ಕಾತರದಿ

ಧಗಧಗಿಸುವ ಆ ಕಿರಣಗಳಿಲ್ಲದೆ
ಭಿನ್ನದ ಮೂರುತಿ ಕಾಣಿಸಿತು
‘ರಾಹುವೊ ಕೇತುವೊ ನುಂಗಿವೆ ಸೂರ್ಯನ
ತಿಳಿಯಿತೆ’ ಎಂದನು ಬಾಲಕನು

ಸೃಷ್ಟಿಯನೆಲ್ಲವ ಪಾಲನೆ ಮಾಡುವ
ಸೂರ್ಯನ ಪಾಡನು ನೋಡಿದೆನು
ತಿವಿದನು ಕವಿ ಹೃದಯವ ಆ ಭಾಸ್ಕರ
ಮಗಳೇ ವಿಧಿಯನು ನೋಡೆಂದು

ಏನಿದು ಅಚ್ಚರಿ ಓ ರವಿ ದೇವಾ
ನಿನಗೂ ವಿಧಿಯಾಜ್ಞೆಯು ಉಂಟೇ?
ಬಾನೊಳು ಧಗಿಸುವ ಮಿಹಿರನ ಕೂಡ
ಬಂಧಿಸಿ ಕೆಡಿಸಿತೆ ಆ ವಿಧಿಯು

ನೀನಿರುತಿಹ ಬಹುದೂರದ ಭವನವು
ಕಲ್ಮಷವಿಲ್ಲದ ಆಗಸವು
ನಿನ್ನೊಳು ತುಂಬಿದೆ ಜಗವನು ಬೆಳಗಿಸಿ
ನಿತ್ಯವು ನಡಸುವ ಸಾಹಸವು

ಭುವಿಯನೆ ಕುದಿಸುತ ಪ್ರಜ್ವಲಿಸುವ ಪ್ರಭು
ವಿಧಿಯನು ಗೆಲ್ಲಲು ಅಸದಳವೆ?
ಎದುರಿಸಿ ನಿನ್ನಾ ಜ್ವಾಲೆಯ ಝಳಪಿಸಿ
ಸಹಿಸದೆ ಪೋದೆಯ ಆ ವಿಧಿಯ?

ಆಗದು ಆಗದು ಎಂದಿಗು ಮಗಳೇ
ಸಾಹಸಿಯಾ ವಿಧಿ ಚಿರಜೀವಿ!
ಬಾಳಿನ ತಳಿರಿನ ಕುಡಿಗಳ ಚಿವುಟುತ
ಕಿಲಿ ಕಿಲಿ ನಗುವುದೆ ಅವನಾಟ!

ಸುಖದೊಳು ದುಃಖದ ಮೊಳಕೆಯ ನಾಟಿಸಿ
ಕಂಬನಿಗರಸುತ ಬೆಳಸುವನು
ರೋದನ ದನಿಯನು ಕೇಳುತ ಹರುಷದಿ
ಕರತಾಡನದಿಂ ಕುಣಿಯುವನು

ಇಂತಿರು ಅಂತಿರು ಎನ್ನುತ ಸೃಷ್ಟಿಯ
ನಿಯಮಿಸಿ ಆಜ್ಞೆಯ ವಿಧಿಸುವನು
ಯಂತ್ರ ವಸ್ತುಗಳಾಗಿಹೆವೆಲ್ಲರು
ಆ ವಿಧಿ ಶಾಸನದಡಿಯೊಳಗೆ

ಮಾನುಷ ಯತ್ನಕೆ, ಸೌಖ್ಯಕೆ ದೈವವು
ನಾನಾ ಘಾತವ ತಂದಂತೆ
ಬಾನೊಳು ಸುಳಿಯುತ ಸುಖಿಸವ ನನ್ನನು
ಕ್ರಾಂತಿಯು ಕ್ಷಣದೊಳು ಕೆಡಿಸಿಹುದು

ವಿಧಿ ನಿಯಮದ ಒಂದಾಜ್ಞೆಯು ಮೀರದೆ
ಸಲಿಸುತ ಬಂದಿದೆ ಯುಗ ಯುಗವು
ನಾವದನೆದುರಿಸಲಾಗದು ಅಮ್ಮಾ
ಜನಕಜೆ ಎಂದನು ದಿನಕರನು
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...