Home / ಕವನ / ಕವಿತೆ / ವಿಧಿ

ವಿಧಿ

ತಾರಣ ವರುಷದ ನಾಲ್ಕನೆ ಮಾಸದ
ಅಂತ್ಯದ ದಿನವದು ಮುಂಜಾನೆ
ಊರಿನ ಜನರಿಗೆ ಹೇಳಲು ತೀರದ
ಸಡಗರ ತುಂಬಿದೆ ಬಿಡುವಿಲ್ಲ

ದಾನವು ಧರ್ಮವು ದಾಸರ ಪದಗಳು
ಸ್ನಾನವು ಜಪಗಳು ನಡೆದಿಹುವು
ಏನಿದು ಎಂದರೆ ಬಾಲಕನೊಬ್ಬನು
ಕನ್ನಡಿಯೊಂದನು ತೋರಿದನು

ಮಸಿಯನು ಪೂಸಿದ ಮುರುಕಿನ ಕನ್ನಡಿ
ಕಂಗಳಿಗಿಟ್ಟನು ನೋಡೆಂದು
ನೀಲಿಯ ಭವನದಿ ಕಾಂತಿವಿಹೀನದ
ಸ್ವಾಮಿಯ ಕಂಡೆನು ಕಾತರದಿ

ಧಗಧಗಿಸುವ ಆ ಕಿರಣಗಳಿಲ್ಲದೆ
ಭಿನ್ನದ ಮೂರುತಿ ಕಾಣಿಸಿತು
‘ರಾಹುವೊ ಕೇತುವೊ ನುಂಗಿವೆ ಸೂರ್ಯನ
ತಿಳಿಯಿತೆ’ ಎಂದನು ಬಾಲಕನು

ಸೃಷ್ಟಿಯನೆಲ್ಲವ ಪಾಲನೆ ಮಾಡುವ
ಸೂರ್ಯನ ಪಾಡನು ನೋಡಿದೆನು
ತಿವಿದನು ಕವಿ ಹೃದಯವ ಆ ಭಾಸ್ಕರ
ಮಗಳೇ ವಿಧಿಯನು ನೋಡೆಂದು

ಏನಿದು ಅಚ್ಚರಿ ಓ ರವಿ ದೇವಾ
ನಿನಗೂ ವಿಧಿಯಾಜ್ಞೆಯು ಉಂಟೇ?
ಬಾನೊಳು ಧಗಿಸುವ ಮಿಹಿರನ ಕೂಡ
ಬಂಧಿಸಿ ಕೆಡಿಸಿತೆ ಆ ವಿಧಿಯು

ನೀನಿರುತಿಹ ಬಹುದೂರದ ಭವನವು
ಕಲ್ಮಷವಿಲ್ಲದ ಆಗಸವು
ನಿನ್ನೊಳು ತುಂಬಿದೆ ಜಗವನು ಬೆಳಗಿಸಿ
ನಿತ್ಯವು ನಡಸುವ ಸಾಹಸವು

ಭುವಿಯನೆ ಕುದಿಸುತ ಪ್ರಜ್ವಲಿಸುವ ಪ್ರಭು
ವಿಧಿಯನು ಗೆಲ್ಲಲು ಅಸದಳವೆ?
ಎದುರಿಸಿ ನಿನ್ನಾ ಜ್ವಾಲೆಯ ಝಳಪಿಸಿ
ಸಹಿಸದೆ ಪೋದೆಯ ಆ ವಿಧಿಯ?

ಆಗದು ಆಗದು ಎಂದಿಗು ಮಗಳೇ
ಸಾಹಸಿಯಾ ವಿಧಿ ಚಿರಜೀವಿ!
ಬಾಳಿನ ತಳಿರಿನ ಕುಡಿಗಳ ಚಿವುಟುತ
ಕಿಲಿ ಕಿಲಿ ನಗುವುದೆ ಅವನಾಟ!

ಸುಖದೊಳು ದುಃಖದ ಮೊಳಕೆಯ ನಾಟಿಸಿ
ಕಂಬನಿಗರಸುತ ಬೆಳಸುವನು
ರೋದನ ದನಿಯನು ಕೇಳುತ ಹರುಷದಿ
ಕರತಾಡನದಿಂ ಕುಣಿಯುವನು

ಇಂತಿರು ಅಂತಿರು ಎನ್ನುತ ಸೃಷ್ಟಿಯ
ನಿಯಮಿಸಿ ಆಜ್ಞೆಯ ವಿಧಿಸುವನು
ಯಂತ್ರ ವಸ್ತುಗಳಾಗಿಹೆವೆಲ್ಲರು
ಆ ವಿಧಿ ಶಾಸನದಡಿಯೊಳಗೆ

ಮಾನುಷ ಯತ್ನಕೆ, ಸೌಖ್ಯಕೆ ದೈವವು
ನಾನಾ ಘಾತವ ತಂದಂತೆ
ಬಾನೊಳು ಸುಳಿಯುತ ಸುಖಿಸವ ನನ್ನನು
ಕ್ರಾಂತಿಯು ಕ್ಷಣದೊಳು ಕೆಡಿಸಿಹುದು

ವಿಧಿ ನಿಯಮದ ಒಂದಾಜ್ಞೆಯು ಮೀರದೆ
ಸಲಿಸುತ ಬಂದಿದೆ ಯುಗ ಯುಗವು
ನಾವದನೆದುರಿಸಲಾಗದು ಅಮ್ಮಾ
ಜನಕಜೆ ಎಂದನು ದಿನಕರನು
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...