Home / ಕವನ / ಕವಿತೆ / ವಿಧಿ

ವಿಧಿ

ತಾರಣ ವರುಷದ ನಾಲ್ಕನೆ ಮಾಸದ
ಅಂತ್ಯದ ದಿನವದು ಮುಂಜಾನೆ
ಊರಿನ ಜನರಿಗೆ ಹೇಳಲು ತೀರದ
ಸಡಗರ ತುಂಬಿದೆ ಬಿಡುವಿಲ್ಲ

ದಾನವು ಧರ್ಮವು ದಾಸರ ಪದಗಳು
ಸ್ನಾನವು ಜಪಗಳು ನಡೆದಿಹುವು
ಏನಿದು ಎಂದರೆ ಬಾಲಕನೊಬ್ಬನು
ಕನ್ನಡಿಯೊಂದನು ತೋರಿದನು

ಮಸಿಯನು ಪೂಸಿದ ಮುರುಕಿನ ಕನ್ನಡಿ
ಕಂಗಳಿಗಿಟ್ಟನು ನೋಡೆಂದು
ನೀಲಿಯ ಭವನದಿ ಕಾಂತಿವಿಹೀನದ
ಸ್ವಾಮಿಯ ಕಂಡೆನು ಕಾತರದಿ

ಧಗಧಗಿಸುವ ಆ ಕಿರಣಗಳಿಲ್ಲದೆ
ಭಿನ್ನದ ಮೂರುತಿ ಕಾಣಿಸಿತು
‘ರಾಹುವೊ ಕೇತುವೊ ನುಂಗಿವೆ ಸೂರ್ಯನ
ತಿಳಿಯಿತೆ’ ಎಂದನು ಬಾಲಕನು

ಸೃಷ್ಟಿಯನೆಲ್ಲವ ಪಾಲನೆ ಮಾಡುವ
ಸೂರ್ಯನ ಪಾಡನು ನೋಡಿದೆನು
ತಿವಿದನು ಕವಿ ಹೃದಯವ ಆ ಭಾಸ್ಕರ
ಮಗಳೇ ವಿಧಿಯನು ನೋಡೆಂದು

ಏನಿದು ಅಚ್ಚರಿ ಓ ರವಿ ದೇವಾ
ನಿನಗೂ ವಿಧಿಯಾಜ್ಞೆಯು ಉಂಟೇ?
ಬಾನೊಳು ಧಗಿಸುವ ಮಿಹಿರನ ಕೂಡ
ಬಂಧಿಸಿ ಕೆಡಿಸಿತೆ ಆ ವಿಧಿಯು

ನೀನಿರುತಿಹ ಬಹುದೂರದ ಭವನವು
ಕಲ್ಮಷವಿಲ್ಲದ ಆಗಸವು
ನಿನ್ನೊಳು ತುಂಬಿದೆ ಜಗವನು ಬೆಳಗಿಸಿ
ನಿತ್ಯವು ನಡಸುವ ಸಾಹಸವು

ಭುವಿಯನೆ ಕುದಿಸುತ ಪ್ರಜ್ವಲಿಸುವ ಪ್ರಭು
ವಿಧಿಯನು ಗೆಲ್ಲಲು ಅಸದಳವೆ?
ಎದುರಿಸಿ ನಿನ್ನಾ ಜ್ವಾಲೆಯ ಝಳಪಿಸಿ
ಸಹಿಸದೆ ಪೋದೆಯ ಆ ವಿಧಿಯ?

ಆಗದು ಆಗದು ಎಂದಿಗು ಮಗಳೇ
ಸಾಹಸಿಯಾ ವಿಧಿ ಚಿರಜೀವಿ!
ಬಾಳಿನ ತಳಿರಿನ ಕುಡಿಗಳ ಚಿವುಟುತ
ಕಿಲಿ ಕಿಲಿ ನಗುವುದೆ ಅವನಾಟ!

ಸುಖದೊಳು ದುಃಖದ ಮೊಳಕೆಯ ನಾಟಿಸಿ
ಕಂಬನಿಗರಸುತ ಬೆಳಸುವನು
ರೋದನ ದನಿಯನು ಕೇಳುತ ಹರುಷದಿ
ಕರತಾಡನದಿಂ ಕುಣಿಯುವನು

ಇಂತಿರು ಅಂತಿರು ಎನ್ನುತ ಸೃಷ್ಟಿಯ
ನಿಯಮಿಸಿ ಆಜ್ಞೆಯ ವಿಧಿಸುವನು
ಯಂತ್ರ ವಸ್ತುಗಳಾಗಿಹೆವೆಲ್ಲರು
ಆ ವಿಧಿ ಶಾಸನದಡಿಯೊಳಗೆ

ಮಾನುಷ ಯತ್ನಕೆ, ಸೌಖ್ಯಕೆ ದೈವವು
ನಾನಾ ಘಾತವ ತಂದಂತೆ
ಬಾನೊಳು ಸುಳಿಯುತ ಸುಖಿಸವ ನನ್ನನು
ಕ್ರಾಂತಿಯು ಕ್ಷಣದೊಳು ಕೆಡಿಸಿಹುದು

ವಿಧಿ ನಿಯಮದ ಒಂದಾಜ್ಞೆಯು ಮೀರದೆ
ಸಲಿಸುತ ಬಂದಿದೆ ಯುಗ ಯುಗವು
ನಾವದನೆದುರಿಸಲಾಗದು ಅಮ್ಮಾ
ಜನಕಜೆ ಎಂದನು ದಿನಕರನು
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಕಿಶೋರ್‍ ಚಂದ್ರ