ಗಂಡ

ಗಂಡನೆಂದರೆ ಪ್ರಾಣ ಗಂಡ-ಹೆಣ್ಣೆ ನೀ ಗಂಡನ ಕೂಡಿಕೊಂಡ್ಯ
ನೋಡು ಮಂಡೂಕ ಸರ್ಪದ ನೆಳಲಿಗೆ ಹೋದಂತೆ
ಬಂಡೀಗೆ ಬಸವನು ಶಿರಬಾಗಿಕೊಂಡಂತೆ!

ಹೆಸರಿಗೆ ಗಂಡ ಬಹುಚೆಂದ-ನಿನ್ನ ಸರ್ವಸ್ವವೇ ಅದುವೊಂದು
ನೋಡು ಹಸನಾದ ಪುರುಷನು ದೊರೆತರೆ ಆನಂದ
ಇಲ್ಲದಿದ್ದರೆ ಸದಾ ಸ್ವಾಮಿ ಗೋವಿಂದ!

ಗಂಡನ ಮನೆ ಸಗ್ಗ ನಿನಗೆ-ಮುನಿಯೆ ಗಂಡನೆ ಯಮರಾಯ ಕೊನೆಗೆ
ನಿನ್ನ ಮುಳುಗಿಪ ತೇಲಿಪ ಶಕ್ತಿಯುಂಟಾತಗೆ
ನೀನೊಂದು ವಿಕ್ರಯದೊಸ್ತುವು ಪುರುಷಗೆ!

ಮಲ್ಲಿಗೆ ಹರಳಂತೆ ನೀನು-ಬಳುಕಿ ಉಲ್ಲಾಸ ಪುಟ್ಟಿಸಲೇನು
ಭಳ್ಳಿರೆ ಭಾಪ್ಪುರೆ ಸಮರಿಲ್ಲವೆಂಬೋನು
ನಲ್ಲೆ ಬಾ ಮುತ್ತಿಡು ಧನ್ಯ ನಾನೆಂಬೋನು!

ಅಧಿಕಾರಿ ನಿನಗವನೊಬ್ಬ-ನಿರುತ ದುಡಿದರೆ ಅಶನದ ಹಬ್ಬ
ತಪ್ಪಿ ಬೇನೆ ಬೇಸರವಾಗಿ ಉಶ್ಶೆನ್ನಲಬ್ಬಬ್ಬ
ಏನಾಯ್ತ ಎಂದು ಗಂಟ್ಹಾಕುವ ಹುಬ್ಬ!

ಯುಕ್ತಿಯಿಂದಲಿ ಬಾಳು ನೀನು-ಸರ್ವಶಕ್ತನು ಪುರುಷನು
ತಪ್ಪಿದೆಯೆಂದರೆ ಕತ್ತನೆ ಮುರಿವೋನು (ತಾನವನು)
ಶಿಕಷ ರಕ್ಷಕ ನಿನ್ನ ದೈವವೆ ನಾಥನು!

ಎಚ್ಚರದಿಂದಿರು ಹೆಣ್ಣೆ-ಇಂತು ಬರೆದಿಹನು ಬ್ರಹ್ಮಣ್ಣ
ತಪ್ಪಿಸಲಳವುಂಟೆ ಸ್ತ್ರೀಪುರುಷರೊಡನಾಟ
ಲೀಲಾಮಾನುಷ ಭಕ್ತವತ್ಸಲನ ಆಟ!

ನಿರ್ಮಲವಾಗಿರಲಿ ಮನಸು-ಪತಿಯ ಚಿತ್ತವ ನೀನನುಸರಿಸು
ಕರ್ಮಾನುಸಾರದಿ ಫಲವುಂಟು ಈ ಜಗದಿ
ಧರ್ಮವ ಬಿಡದಿರು ಎಂಬಳು ಜನಕಜೆ!
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...