ಗಂಡ

ಗಂಡನೆಂದರೆ ಪ್ರಾಣ ಗಂಡ-ಹೆಣ್ಣೆ ನೀ ಗಂಡನ ಕೂಡಿಕೊಂಡ್ಯ
ನೋಡು ಮಂಡೂಕ ಸರ್ಪದ ನೆಳಲಿಗೆ ಹೋದಂತೆ
ಬಂಡೀಗೆ ಬಸವನು ಶಿರಬಾಗಿಕೊಂಡಂತೆ!

ಹೆಸರಿಗೆ ಗಂಡ ಬಹುಚೆಂದ-ನಿನ್ನ ಸರ್ವಸ್ವವೇ ಅದುವೊಂದು
ನೋಡು ಹಸನಾದ ಪುರುಷನು ದೊರೆತರೆ ಆನಂದ
ಇಲ್ಲದಿದ್ದರೆ ಸದಾ ಸ್ವಾಮಿ ಗೋವಿಂದ!

ಗಂಡನ ಮನೆ ಸಗ್ಗ ನಿನಗೆ-ಮುನಿಯೆ ಗಂಡನೆ ಯಮರಾಯ ಕೊನೆಗೆ
ನಿನ್ನ ಮುಳುಗಿಪ ತೇಲಿಪ ಶಕ್ತಿಯುಂಟಾತಗೆ
ನೀನೊಂದು ವಿಕ್ರಯದೊಸ್ತುವು ಪುರುಷಗೆ!

ಮಲ್ಲಿಗೆ ಹರಳಂತೆ ನೀನು-ಬಳುಕಿ ಉಲ್ಲಾಸ ಪುಟ್ಟಿಸಲೇನು
ಭಳ್ಳಿರೆ ಭಾಪ್ಪುರೆ ಸಮರಿಲ್ಲವೆಂಬೋನು
ನಲ್ಲೆ ಬಾ ಮುತ್ತಿಡು ಧನ್ಯ ನಾನೆಂಬೋನು!

ಅಧಿಕಾರಿ ನಿನಗವನೊಬ್ಬ-ನಿರುತ ದುಡಿದರೆ ಅಶನದ ಹಬ್ಬ
ತಪ್ಪಿ ಬೇನೆ ಬೇಸರವಾಗಿ ಉಶ್ಶೆನ್ನಲಬ್ಬಬ್ಬ
ಏನಾಯ್ತ ಎಂದು ಗಂಟ್ಹಾಕುವ ಹುಬ್ಬ!

ಯುಕ್ತಿಯಿಂದಲಿ ಬಾಳು ನೀನು-ಸರ್ವಶಕ್ತನು ಪುರುಷನು
ತಪ್ಪಿದೆಯೆಂದರೆ ಕತ್ತನೆ ಮುರಿವೋನು (ತಾನವನು)
ಶಿಕಷ ರಕ್ಷಕ ನಿನ್ನ ದೈವವೆ ನಾಥನು!

ಎಚ್ಚರದಿಂದಿರು ಹೆಣ್ಣೆ-ಇಂತು ಬರೆದಿಹನು ಬ್ರಹ್ಮಣ್ಣ
ತಪ್ಪಿಸಲಳವುಂಟೆ ಸ್ತ್ರೀಪುರುಷರೊಡನಾಟ
ಲೀಲಾಮಾನುಷ ಭಕ್ತವತ್ಸಲನ ಆಟ!

ನಿರ್ಮಲವಾಗಿರಲಿ ಮನಸು-ಪತಿಯ ಚಿತ್ತವ ನೀನನುಸರಿಸು
ಕರ್ಮಾನುಸಾರದಿ ಫಲವುಂಟು ಈ ಜಗದಿ
ಧರ್ಮವ ಬಿಡದಿರು ಎಂಬಳು ಜನಕಜೆ!
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...