Home / ಕವನ / ಕವಿತೆ / ಚಂಡ ಶಾಸನ

ಚಂಡ ಶಾಸನ

ಕಸಕಿಂತ ಕಡೆಯಾಯ್ತೆ
ಹೆಣ್ಣು ಜನ್ಮವು ನಿನಗೆ
ಈ ಭಾರ ಹೊರಿಸುವುದಕೆ

ಲಂಚಕೋರನು ನೀನು
ವಂಚನೆಯ ಮಾಡಿರುವೆ
ಮೃದುತನದ ಸ್ತ್ರೀವರ್ಗಕೆ

ಗಿಡವೆಂದು ಬಗೆದೆಯೋ
ಹೆಣ್ಣು ಜನ್ಮದ ಒಡಲ
ಫಲಗಳನು ಸೃಜಿಸುವುದಕೆ

ಕವಣೆ ಕಲ್ಲೋ ನಿನ್ನ
ಮಾನಸವು ಎಲೆ ದೇವ
ಈ ಕ್ರಮವೆ ಸ್ತ್ರೀವರ್ಗಕೆ?

ಪುಷ್ಪ ಸೃಷ್ಟಿಯನೇನೊ
ಸುಲಭದಿಂ ನೀ ಗೈದೆ
ಅಲ್ಲಿ ಕನಿಕರವು ಬಂತೆ?

ಕುಸುಮಕಿಂತಲು ಮೃದುವು
ಹೆಣ್ಣು ಜನ್ಮವು ಎಂಬ
ಅರಿವೆ ನಿನಗಿಲ್ಲವಾಯ್ತೆ?

ಏನ್ನುಡಿದು ಫಲವೇನು?
ನ್ಯಾಯವಿಲ್ಲದ ಬಳಿಕ
ತೀರುವುದೆ ಈ ಪ್ರಶ್ನೆಯು

ನೀನೆ ಕಾಣದ ಮುನ್ನ
ನಾವು ಮಾಡುವುದೇನು
ಇನ್ನೆಲ್ಲಿ ವಿಶ್ರಾಂತಿಯು?

ಅದಕಾಗಿ ಬಿತ್ತಿದೆಯೊ
ನಿರ್ಗುಣದ ಸುದ್ದಿಯನು
ವನಿತೆಯರಿಗಳುಕಿ ನೀನು

ಅಲ್ಲದೊಡೆ ನೀನೆಮ್ಮ
ಸಂಧಿಯನು ಬಯಸಿದೊಡೆ
ಈ ಸೃಷ್ಟಿ ಉಳಿವುದೇನು?

ಇರಲಿರಲಿ ಈ ಭಾರ-
ಕಳುಕುವರು ನಾವಲ್ಲ
ಅರ್ಜುನನ ಒಕ್ಕಲಲ್ಲ!

ನೆರವಾಗಿ ನಿಂತಿಹೆವು
ಅನುಗಾಲ ನಿನಕೃತಿಗೆ
ಸೋಲಿಗಿಲ್ಲೆಡೆಯಿಲ್ಲವು!

ಕಾಲ ಚಕ್ರವ ಮೆಟ್ಟಿ
ಅಭಿಮಾನಗಳ ತೊರೆದು
ಲೆಕ್ಕಿಸದೆ ಸಾವು ನೋವ

ನಿನ್ನ ಬೆಳಸನು ಅಪ್ಪಿ
ತೊಟ್ಟಿಲೊಳು ಲಾಲಿಸುತ
ಜೋಗುಟ್ಟುತಿಹೆವು ನಾವು

ಬಹುಕಾಲದೆಜಮಾನ
ಬಹುದೊಡ್ಡ ಕೃಷಿಗಾರ
ತೀರದಾರಂಬಗಾರ

ನಿನ್ನ ಗೆಯ್ಮೆಗೆ ಹೆಣ್ಣು
ನೇಗಿಲಿಲ್ಲದ ಮೇಲೆ
ಉಂಟೆ ಈ ಸತ್ಯಸಾರ!

ಅಂತಿರಲಿ ನೀನೇನೊ
ಮುಕ್ತಿದಾಯಕನೆಂಬ
ಸುದ್ದಿ ಹಬ್ಬಿಹುದು ಇಲ್ಲಿ

ದೊಡ್ಡವರ ಮಾತುಗಳೆ
ಸಾಕ್ಷಿಯಾಗಿಹವೆಮಗೆ
ಗ್ರಂಥ ಶೋಧನೆಗಳಲ್ಲಿ!

ವನಿತೆಯರು ಕಾಣುತಿಹ
ಪಾರಮಾರ್ಥಿಕವೆಂಬ
ದೃಷ್ಟಾಂತ ತಾ ಮುಕ್ತಿಯೆ?

ಕಾಯಗಳ ಬಿಟ್ಟೊಡನೆ
ಸಗ್ಗ ದೊರೆಯುವುದೆಂಬ
ಕಥೆಯೊಳುಂಟೇ ಮುಕ್ತಿಯು?

ಹೆಣ್ತನದಿ ತುಂಬಿರುವ
ಮುಕ್ತಿಪಥವೇ ಸಾಕು
ಮತ್ತೊಂದ ಬಯಸಲೇಕೆ?

ಆನಂದ ಒಳಹೊರಗೆ
ತುಂಬಿರಲಿ ಎಂದಿಹಳು
ಜನಕಜೆಯು ಸ್ತ್ರೀವರ್ಗಕೆ!
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...