Home / ಕವನ / ಕವಿತೆ / ಚಂಡ ಶಾಸನ

ಚಂಡ ಶಾಸನ

ಕಸಕಿಂತ ಕಡೆಯಾಯ್ತೆ
ಹೆಣ್ಣು ಜನ್ಮವು ನಿನಗೆ
ಈ ಭಾರ ಹೊರಿಸುವುದಕೆ

ಲಂಚಕೋರನು ನೀನು
ವಂಚನೆಯ ಮಾಡಿರುವೆ
ಮೃದುತನದ ಸ್ತ್ರೀವರ್ಗಕೆ

ಗಿಡವೆಂದು ಬಗೆದೆಯೋ
ಹೆಣ್ಣು ಜನ್ಮದ ಒಡಲ
ಫಲಗಳನು ಸೃಜಿಸುವುದಕೆ

ಕವಣೆ ಕಲ್ಲೋ ನಿನ್ನ
ಮಾನಸವು ಎಲೆ ದೇವ
ಈ ಕ್ರಮವೆ ಸ್ತ್ರೀವರ್ಗಕೆ?

ಪುಷ್ಪ ಸೃಷ್ಟಿಯನೇನೊ
ಸುಲಭದಿಂ ನೀ ಗೈದೆ
ಅಲ್ಲಿ ಕನಿಕರವು ಬಂತೆ?

ಕುಸುಮಕಿಂತಲು ಮೃದುವು
ಹೆಣ್ಣು ಜನ್ಮವು ಎಂಬ
ಅರಿವೆ ನಿನಗಿಲ್ಲವಾಯ್ತೆ?

ಏನ್ನುಡಿದು ಫಲವೇನು?
ನ್ಯಾಯವಿಲ್ಲದ ಬಳಿಕ
ತೀರುವುದೆ ಈ ಪ್ರಶ್ನೆಯು

ನೀನೆ ಕಾಣದ ಮುನ್ನ
ನಾವು ಮಾಡುವುದೇನು
ಇನ್ನೆಲ್ಲಿ ವಿಶ್ರಾಂತಿಯು?

ಅದಕಾಗಿ ಬಿತ್ತಿದೆಯೊ
ನಿರ್ಗುಣದ ಸುದ್ದಿಯನು
ವನಿತೆಯರಿಗಳುಕಿ ನೀನು

ಅಲ್ಲದೊಡೆ ನೀನೆಮ್ಮ
ಸಂಧಿಯನು ಬಯಸಿದೊಡೆ
ಈ ಸೃಷ್ಟಿ ಉಳಿವುದೇನು?

ಇರಲಿರಲಿ ಈ ಭಾರ-
ಕಳುಕುವರು ನಾವಲ್ಲ
ಅರ್ಜುನನ ಒಕ್ಕಲಲ್ಲ!

ನೆರವಾಗಿ ನಿಂತಿಹೆವು
ಅನುಗಾಲ ನಿನಕೃತಿಗೆ
ಸೋಲಿಗಿಲ್ಲೆಡೆಯಿಲ್ಲವು!

ಕಾಲ ಚಕ್ರವ ಮೆಟ್ಟಿ
ಅಭಿಮಾನಗಳ ತೊರೆದು
ಲೆಕ್ಕಿಸದೆ ಸಾವು ನೋವ

ನಿನ್ನ ಬೆಳಸನು ಅಪ್ಪಿ
ತೊಟ್ಟಿಲೊಳು ಲಾಲಿಸುತ
ಜೋಗುಟ್ಟುತಿಹೆವು ನಾವು

ಬಹುಕಾಲದೆಜಮಾನ
ಬಹುದೊಡ್ಡ ಕೃಷಿಗಾರ
ತೀರದಾರಂಬಗಾರ

ನಿನ್ನ ಗೆಯ್ಮೆಗೆ ಹೆಣ್ಣು
ನೇಗಿಲಿಲ್ಲದ ಮೇಲೆ
ಉಂಟೆ ಈ ಸತ್ಯಸಾರ!

ಅಂತಿರಲಿ ನೀನೇನೊ
ಮುಕ್ತಿದಾಯಕನೆಂಬ
ಸುದ್ದಿ ಹಬ್ಬಿಹುದು ಇಲ್ಲಿ

ದೊಡ್ಡವರ ಮಾತುಗಳೆ
ಸಾಕ್ಷಿಯಾಗಿಹವೆಮಗೆ
ಗ್ರಂಥ ಶೋಧನೆಗಳಲ್ಲಿ!

ವನಿತೆಯರು ಕಾಣುತಿಹ
ಪಾರಮಾರ್ಥಿಕವೆಂಬ
ದೃಷ್ಟಾಂತ ತಾ ಮುಕ್ತಿಯೆ?

ಕಾಯಗಳ ಬಿಟ್ಟೊಡನೆ
ಸಗ್ಗ ದೊರೆಯುವುದೆಂಬ
ಕಥೆಯೊಳುಂಟೇ ಮುಕ್ತಿಯು?

ಹೆಣ್ತನದಿ ತುಂಬಿರುವ
ಮುಕ್ತಿಪಥವೇ ಸಾಕು
ಮತ್ತೊಂದ ಬಯಸಲೇಕೆ?

ಆನಂದ ಒಳಹೊರಗೆ
ತುಂಬಿರಲಿ ಎಂದಿಹಳು
ಜನಕಜೆಯು ಸ್ತ್ರೀವರ್ಗಕೆ!
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...