ದೇವಲೋಕದ ಹೂ

ದೇವಲೋಕದ ಹೂವು ಭೂಲೋಕಕಿಳಿದಂತೆ
ಭಾವವೆನ್ನೊಳಗೆ ಬಂತು
ಸಾವಿಗಂಜಲು ಬೇಡ ಪರರಿಗಳುಕಲು ಬೇಡ
ನೋವುಂಟೆ ಬಕುತರಿಗೆ? ಹಸುಳೆ ಕೇಳೆಂದು

ಸಾಲು ದೀವಿಗೆಯಂತೆ ತಾರೆ ನೆಲಕಿಳಿದಂತೆ
ಪೊಳೆವ ಮಾಣಿಕ್ಯದಂತೆ
ಕೋಲು ಮಿಂಚೊಡೆದಂತೆ ಫಕ್ಕನೇ ನಕ್ಕಂತೆ
ಬೆಳಕು ನೋಡೆಲೆ ಜೀವಿ ನಿನ್ನೊಳಗೆ ಎಂದು

ಕಲ್ಯಾಣ ಮಂಟಪದಿ ಕಳಶ ಕನ್ನಡಿ ಹಿಡಿದು
ಉಲ್ಲಾಸದಿಂದ ಸುಳಿದು
ಸಲ್ಲಿಸುತೆ ಸೇವೆಯನು ಗಡಿಯ ಸೇರುವೆ ನೀನು
ಇಲ್ಲೆ ಮಂಗಳವಿರಲು ತಡವೇತಕೆಂದು

ಮನಗಳನು ಶ್ರುತಿಮಾಡಿ ಮದವನೆಳೆದೀಡಾಡಿ
ಅನವರತ ಸ್ತುತಿಯ ಮಾಡಿ
ಸನಕಾದಿ ಮುನಿವರರು ಅಭಯಗಳ ಪಡೆದಿಹರು
ಜನಕಜೇ ಕೇಳೆಂದು ಏಳು ಏಳೆಂದು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಾರಡ್ಕ
Next post ಎಡ ಬಲ

ಸಣ್ಣ ಕತೆ

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

cheap jordans|wholesale air max|wholesale jordans|wholesale jewelry|wholesale jerseys