ಎಡ ಬಲ

ಎಡಬಲದಿ ನೀನಿರಲು ತೊಡಕುಗಳು ಎನಗುಂಟೆ?
ಬಿಡೆ ನಿನ್ನ ನಿಲ್ಲು ದೊರೆಯೇ
ಕಡು ಬಾಧೆಗಳು ಬಂದು ಹುಡುಕಿ ತಂದುವು ನಿನ್ನ
ಅಡಿಗೆರಗಿ ನುತಿಸುವೆನು ತಾಳು ಶ್ರೀ ಹರಿಯೆ

ಎನ್ನ ಒಳ ಹೊರಗೆಲ್ಲಾ ನಿನ್ನ ರಾಜ್ಯವೆ ನೋಡ
ಇನ್ನಾವ ಕೊರತೆ ಎನಗೆ
ಕಣ್ಣು ಸಾಲವೊ ನಿನ್ನ ಸೊಗಸು ನೋಡಲು ದೇವಾ
ಸನ್ನುತಾಂಗನೆ ಇದನು ಬಣ್ಣಿಸಲು ಅಳವೇ

ಜನನಿ ಬುವಿಯಾಗಿರಲು ಜನಕ ನೀನಿರುತಿರಲು
ಎಣೆಯುಂಟೆ ಈ ಭಾಗ್ಯಕೆ?
ಉಣಿಸಿ ಸಲಹುವಳಮ್ಮ ಜ್ಞಾನವೊಸಗುವೆ ನೀನು
ಜನಿಸುವೆನು ಮರಮರಳಿ ಘನರೂಪು ತಾಳಿ

ಸ್ನಿಗ್ಧಮಯವಾಗಿಹುದು ಮಧುವು ತುಳುಕುತಲಿಹುದು
ಮಧುರಭಾವಗಳು ತುಂಬಿ
ದಿಗ್ದಿಗಂತಕೆ ನುಗ್ಗಿ ಸೂರೆಗೊಂಬೆನು ಫಲವ
ಸಿದ್ಧವಾಗಿಹೆನಿನ್ನು ಜಯವು ಜನಕಜೆಗೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದೇವಲೋಕದ ಹೂ
Next post ಮಿಂಚುಳ್ಳಿ ಬೆಳಕಿಂಡಿ – ೬೨

ಸಣ್ಣ ಕತೆ

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ರಣಹದ್ದುಗಳು

    ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…

  • ಶಾಕಿಂಗ್ ಪ್ರೇಮ ಪ್ರಕರಣ

    ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…

cheap jordans|wholesale air max|wholesale jordans|wholesale jewelry|wholesale jerseys