ಎಡ ಬಲ

ಎಡಬಲದಿ ನೀನಿರಲು ತೊಡಕುಗಳು ಎನಗುಂಟೆ?
ಬಿಡೆ ನಿನ್ನ ನಿಲ್ಲು ದೊರೆಯೇ
ಕಡು ಬಾಧೆಗಳು ಬಂದು ಹುಡುಕಿ ತಂದುವು ನಿನ್ನ
ಅಡಿಗೆರಗಿ ನುತಿಸುವೆನು ತಾಳು ಶ್ರೀ ಹರಿಯೆ

ಎನ್ನ ಒಳ ಹೊರಗೆಲ್ಲಾ ನಿನ್ನ ರಾಜ್ಯವೆ ನೋಡ
ಇನ್ನಾವ ಕೊರತೆ ಎನಗೆ
ಕಣ್ಣು ಸಾಲವೊ ನಿನ್ನ ಸೊಗಸು ನೋಡಲು ದೇವಾ
ಸನ್ನುತಾಂಗನೆ ಇದನು ಬಣ್ಣಿಸಲು ಅಳವೇ

ಜನನಿ ಬುವಿಯಾಗಿರಲು ಜನಕ ನೀನಿರುತಿರಲು
ಎಣೆಯುಂಟೆ ಈ ಭಾಗ್ಯಕೆ?
ಉಣಿಸಿ ಸಲಹುವಳಮ್ಮ ಜ್ಞಾನವೊಸಗುವೆ ನೀನು
ಜನಿಸುವೆನು ಮರಮರಳಿ ಘನರೂಪು ತಾಳಿ

ಸ್ನಿಗ್ಧಮಯವಾಗಿಹುದು ಮಧುವು ತುಳುಕುತಲಿಹುದು
ಮಧುರಭಾವಗಳು ತುಂಬಿ
ದಿಗ್ದಿಗಂತಕೆ ನುಗ್ಗಿ ಸೂರೆಗೊಂಬೆನು ಫಲವ
ಸಿದ್ಧವಾಗಿಹೆನಿನ್ನು ಜಯವು ಜನಕಜೆಗೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದೇವಲೋಕದ ಹೂ
Next post ಮಿಂಚುಳ್ಳಿ ಬೆಳಕಿಂಡಿ – ೬೨

ಸಣ್ಣ ಕತೆ

  • ಉಪ್ಪು

    ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ… Read more…

  • ಬಾಗಿಲು ತೆರೆದಿತ್ತು

    ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…