ದುಷ್ಟರು

ದುಷ್ಟರನು ಬಹುದೂರವಿರಿಸಯ್ಯ ಹರಿಯೆ
ಇಷ್ಟಾರ್ಥಗಳನೆನಗೆ ಕೊಡದಿರಲು ಸರಿಯೆ

ಎನ್ನ ಒಳಗಡಗಿರುವ ಕಳ್ಳರಿಗೆ ಸೋತಿಹೆನು
ನಿನ್ನ ಧ್ಯಾನವನೆನಗೆ ದಕ್ಕಗೊಡರಿವರು
ಕಣ್ಣು ಬಡಿಯುವ ಕ್ಷಣಕೆ ನಿನ್ನ ಮರೆಸುತಲಿಹರು
ಇನ್ನಾವ ಬಗೆಯೊಳಗೆ ಧನ್ಯಳಾಗುವೆನೊ

ವಿಷಮಯದ ಮೋಹವನು ಸವಿಮಾಡಿ ಉಣಿಸುವರು
ಹಸಿವ ತೀರಿಸುವಂತೆ ನಟನೆ ಮಾಡುವರು
ವಿಷಮಸ್ಥಿತಿಗೆನ್ನೆಳೆದು ಕ್ರೋಧವನು ತುಂಬುವರು
ಮಸೆಯುತಿಹರೆನ್ನೊಳಗೆ ಮಾತ್ಸರ್‍ಯ ಮದವ

ಕಂಡುಕಂಡುದನೆಲ್ಲ ಕೊಂಡು ತಾ ಎಂಬುವರು
ಉಂಡು ತಣಿಯರು ಒಮ್ಮೆ ದುರುಳ ಚಂಚಲರು
ಖಂಡಿಸಲು ಛೀ ಎಂದು ದಳ್ಳುರಿಯನುಗಿಯುವರು
ದಂಡನೆಗೆ ಮೀರಿಹರು ಎನ್ನ ಕಾಡುವರು

ಕಡಿವಾಣವಿಲ್ಲದೆಯೆ ನಡಸುವರು ಅಂಧಳನು
ಎಡವಿದರು ಸರಿ ಎಂದು ಬೆನ್ನ ಚಪ್ಪರಿಸಿ
ತುಡುಗರನು ಸದೆಬಡಿದು ಎತ್ತಿಕೋ ನಿನ್ನೆಡೆಗೆ
ಒಡೆಯ ಸಾರಥಿಯಾಗೊ ನಿನ್ನ ಜನಕಜೆಗೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದಾರಿ
Next post ಮಿಂಚುಳ್ಳಿ ಬೆಳಕಿಂಡಿ – ೬೪

ಸಣ್ಣ ಕತೆ

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ಉಪ್ಪು

    ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ… Read more…

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

  • ಒಂದು ಹಿಡಿ ಪ್ರೀತಿ

    ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…