Home / ಕವನ / ಕವಿತೆ / ಸುಮ್ಮನಿರು ಸಾಕು

ಸುಮ್ಮನಿರು ಸಾಕು

ಅಂತರಂಗದ ಭಾವ ಮಸಗಿರಲಿ ಅಡಗಿರಲಿ
ಭ್ರಾಂತಿ ಇದು ಮರುಗದಿರು ಸುಮ್ಮನಿರು ತೆರೆ ಬರಲಿ!

ನಾಟಕದ ರಂಗವಿದು: ಪಾತ್ರಗಳ ವಹಿಸುತಿರು
ಶಾಂತಿಯಿಂ ನೀನೀಗ ಮೌನವನು ಅನುಸರಿಸು
ಹೆದರದಿರು ಕುದಿಯದಿರು ಹೇಡಿ ನೀನಾಗದಿರು
ಬಡಿಯುತಿಹ ಅಲೆಗಳಿಗೆ ಕಣ್ಮುಚ್ಚಿ ಸಿರಬಾಗು
ಕಡಲಿನಲೆಗಳು ನಿನ್ನನೆಲ್ಲಿಗೊಯ್ದರು ಸರಿಯೆ
ದೃಢವಾದ ಚಿತ್ತವನು ಬಿಡದೆ ಪಾಲಿಸು ನಿರುತ

ನೋಡಲ್ಲಿ ಶಿರವೆತ್ತಿ ಆಗಸವ ನೀನೊಮ್ಮೆ
ನೋಡಿದೆಯೆ ಆ ಸಿರಿಯ? ನಿಷ್ಕಲ್ಮಷದ ಪರಿಯ
ಬಾಳು ಸಾಕೆಂದಳುವ ಹೇಡಿಗಳ ಕಣ್ಣೊರಸಿ
ಅಭಯವನು ನೀಡುತಿಹ ಹಸ್ತದಂತಿದೆ ನಭವು
ಕೊನೆಯಿಲ್ಲ ಮೊದಲಿಲ್ಲ ಆಶೆಪಾಶಗಳಿಲ್ಲ
ಹರುಕಿಲ್ಲ ಮುರುಕಿಲ್ಲ ತಗ್ಗುದಿಣ್ಣೆಗಳಿಲ್ಲ
ಮಬ್ಬಿಲ್ಲ ಮಸುಕಿಲ್ಲ ನರಕಯಾತನೆ ಇಲ್ಲ
ಚಿರ ಶಾಂತಿಯಿಂ ತುಂಬಿ ತುಳುಕುತಿದೆ ಮುಗಿಲು

ಕಂಗಳಿಗೆ ಕಣ್ಣಾಗಿ ವಜ್ರಗಳ ಗಣಿಯಾಗಿ
ಜೀವನದ ಕುಸುಮದಾ ಚಂದಿರಗೆ ಮನೆಯಾಗಿ
ಪ್ರಜ್ವಲಿಸಿ ಶೋಭಿಸುವ ಭಾಸ್ಕರನ ಬೀಡಾಗಿ
ಆದರದಿ ವಿಶ್ವವನು ಪಾಲಿಸುವ ದೊರೆಯಾಗಿ
ರಸಿಕರಿಗೆ ರಸವಾಗಿ ಕವಿಗಳಿಗೆ ತವರಾಗಿ
ಮೇಘಗಳ ಧ್ವಜಪಟದಿ ಮೆರೆಯುತಿದೆ ಬಾನು

ಅದರಡಿಯೊಳಡಗಿರುವ ನಿನ್ನ ಭಾವವದೆಷ್ಟು?
ನೀನೆಷ್ಟು ಜನಕಜೇ! ಸುಮ್ಮನಿರು, ಸಾಕು ಸಾಕು!
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...