Home / ಕವನ / ಕವಿತೆ / ಸುಮ್ಮನಿರು ಸಾಕು

ಸುಮ್ಮನಿರು ಸಾಕು

ಅಂತರಂಗದ ಭಾವ ಮಸಗಿರಲಿ ಅಡಗಿರಲಿ
ಭ್ರಾಂತಿ ಇದು ಮರುಗದಿರು ಸುಮ್ಮನಿರು ತೆರೆ ಬರಲಿ!

ನಾಟಕದ ರಂಗವಿದು: ಪಾತ್ರಗಳ ವಹಿಸುತಿರು
ಶಾಂತಿಯಿಂ ನೀನೀಗ ಮೌನವನು ಅನುಸರಿಸು
ಹೆದರದಿರು ಕುದಿಯದಿರು ಹೇಡಿ ನೀನಾಗದಿರು
ಬಡಿಯುತಿಹ ಅಲೆಗಳಿಗೆ ಕಣ್ಮುಚ್ಚಿ ಸಿರಬಾಗು
ಕಡಲಿನಲೆಗಳು ನಿನ್ನನೆಲ್ಲಿಗೊಯ್ದರು ಸರಿಯೆ
ದೃಢವಾದ ಚಿತ್ತವನು ಬಿಡದೆ ಪಾಲಿಸು ನಿರುತ

ನೋಡಲ್ಲಿ ಶಿರವೆತ್ತಿ ಆಗಸವ ನೀನೊಮ್ಮೆ
ನೋಡಿದೆಯೆ ಆ ಸಿರಿಯ? ನಿಷ್ಕಲ್ಮಷದ ಪರಿಯ
ಬಾಳು ಸಾಕೆಂದಳುವ ಹೇಡಿಗಳ ಕಣ್ಣೊರಸಿ
ಅಭಯವನು ನೀಡುತಿಹ ಹಸ್ತದಂತಿದೆ ನಭವು
ಕೊನೆಯಿಲ್ಲ ಮೊದಲಿಲ್ಲ ಆಶೆಪಾಶಗಳಿಲ್ಲ
ಹರುಕಿಲ್ಲ ಮುರುಕಿಲ್ಲ ತಗ್ಗುದಿಣ್ಣೆಗಳಿಲ್ಲ
ಮಬ್ಬಿಲ್ಲ ಮಸುಕಿಲ್ಲ ನರಕಯಾತನೆ ಇಲ್ಲ
ಚಿರ ಶಾಂತಿಯಿಂ ತುಂಬಿ ತುಳುಕುತಿದೆ ಮುಗಿಲು

ಕಂಗಳಿಗೆ ಕಣ್ಣಾಗಿ ವಜ್ರಗಳ ಗಣಿಯಾಗಿ
ಜೀವನದ ಕುಸುಮದಾ ಚಂದಿರಗೆ ಮನೆಯಾಗಿ
ಪ್ರಜ್ವಲಿಸಿ ಶೋಭಿಸುವ ಭಾಸ್ಕರನ ಬೀಡಾಗಿ
ಆದರದಿ ವಿಶ್ವವನು ಪಾಲಿಸುವ ದೊರೆಯಾಗಿ
ರಸಿಕರಿಗೆ ರಸವಾಗಿ ಕವಿಗಳಿಗೆ ತವರಾಗಿ
ಮೇಘಗಳ ಧ್ವಜಪಟದಿ ಮೆರೆಯುತಿದೆ ಬಾನು

ಅದರಡಿಯೊಳಡಗಿರುವ ನಿನ್ನ ಭಾವವದೆಷ್ಟು?
ನೀನೆಷ್ಟು ಜನಕಜೇ! ಸುಮ್ಮನಿರು, ಸಾಕು ಸಾಕು!
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...