ಸುಮ್ಮನಿರು ಸಾಕು

ಅಂತರಂಗದ ಭಾವ ಮಸಗಿರಲಿ ಅಡಗಿರಲಿ
ಭ್ರಾಂತಿ ಇದು ಮರುಗದಿರು ಸುಮ್ಮನಿರು ತೆರೆ ಬರಲಿ!

ನಾಟಕದ ರಂಗವಿದು: ಪಾತ್ರಗಳ ವಹಿಸುತಿರು
ಶಾಂತಿಯಿಂ ನೀನೀಗ ಮೌನವನು ಅನುಸರಿಸು
ಹೆದರದಿರು ಕುದಿಯದಿರು ಹೇಡಿ ನೀನಾಗದಿರು
ಬಡಿಯುತಿಹ ಅಲೆಗಳಿಗೆ ಕಣ್ಮುಚ್ಚಿ ಸಿರಬಾಗು
ಕಡಲಿನಲೆಗಳು ನಿನ್ನನೆಲ್ಲಿಗೊಯ್ದರು ಸರಿಯೆ
ದೃಢವಾದ ಚಿತ್ತವನು ಬಿಡದೆ ಪಾಲಿಸು ನಿರುತ

ನೋಡಲ್ಲಿ ಶಿರವೆತ್ತಿ ಆಗಸವ ನೀನೊಮ್ಮೆ
ನೋಡಿದೆಯೆ ಆ ಸಿರಿಯ? ನಿಷ್ಕಲ್ಮಷದ ಪರಿಯ
ಬಾಳು ಸಾಕೆಂದಳುವ ಹೇಡಿಗಳ ಕಣ್ಣೊರಸಿ
ಅಭಯವನು ನೀಡುತಿಹ ಹಸ್ತದಂತಿದೆ ನಭವು
ಕೊನೆಯಿಲ್ಲ ಮೊದಲಿಲ್ಲ ಆಶೆಪಾಶಗಳಿಲ್ಲ
ಹರುಕಿಲ್ಲ ಮುರುಕಿಲ್ಲ ತಗ್ಗುದಿಣ್ಣೆಗಳಿಲ್ಲ
ಮಬ್ಬಿಲ್ಲ ಮಸುಕಿಲ್ಲ ನರಕಯಾತನೆ ಇಲ್ಲ
ಚಿರ ಶಾಂತಿಯಿಂ ತುಂಬಿ ತುಳುಕುತಿದೆ ಮುಗಿಲು

ಕಂಗಳಿಗೆ ಕಣ್ಣಾಗಿ ವಜ್ರಗಳ ಗಣಿಯಾಗಿ
ಜೀವನದ ಕುಸುಮದಾ ಚಂದಿರಗೆ ಮನೆಯಾಗಿ
ಪ್ರಜ್ವಲಿಸಿ ಶೋಭಿಸುವ ಭಾಸ್ಕರನ ಬೀಡಾಗಿ
ಆದರದಿ ವಿಶ್ವವನು ಪಾಲಿಸುವ ದೊರೆಯಾಗಿ
ರಸಿಕರಿಗೆ ರಸವಾಗಿ ಕವಿಗಳಿಗೆ ತವರಾಗಿ
ಮೇಘಗಳ ಧ್ವಜಪಟದಿ ಮೆರೆಯುತಿದೆ ಬಾನು

ಅದರಡಿಯೊಳಡಗಿರುವ ನಿನ್ನ ಭಾವವದೆಷ್ಟು?
ನೀನೆಷ್ಟು ಜನಕಜೇ! ಸುಮ್ಮನಿರು, ಸಾಕು ಸಾಕು!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕವಿತೆಯೆಂದರೆ…
Next post ಎಷ್ಟೊಂದು ಕಪ್ಪೆ

ಸಣ್ಣ ಕತೆ

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ವಿಷಚಕ್ರ

    "ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. "ನೋಡೇ-ನಾನು… Read more…

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…