Home / ಕವನ / ಕವಿತೆ / ಸುಮ್ಮನಿರು ಸಾಕು

ಸುಮ್ಮನಿರು ಸಾಕು

ಅಂತರಂಗದ ಭಾವ ಮಸಗಿರಲಿ ಅಡಗಿರಲಿ
ಭ್ರಾಂತಿ ಇದು ಮರುಗದಿರು ಸುಮ್ಮನಿರು ತೆರೆ ಬರಲಿ!

ನಾಟಕದ ರಂಗವಿದು: ಪಾತ್ರಗಳ ವಹಿಸುತಿರು
ಶಾಂತಿಯಿಂ ನೀನೀಗ ಮೌನವನು ಅನುಸರಿಸು
ಹೆದರದಿರು ಕುದಿಯದಿರು ಹೇಡಿ ನೀನಾಗದಿರು
ಬಡಿಯುತಿಹ ಅಲೆಗಳಿಗೆ ಕಣ್ಮುಚ್ಚಿ ಸಿರಬಾಗು
ಕಡಲಿನಲೆಗಳು ನಿನ್ನನೆಲ್ಲಿಗೊಯ್ದರು ಸರಿಯೆ
ದೃಢವಾದ ಚಿತ್ತವನು ಬಿಡದೆ ಪಾಲಿಸು ನಿರುತ

ನೋಡಲ್ಲಿ ಶಿರವೆತ್ತಿ ಆಗಸವ ನೀನೊಮ್ಮೆ
ನೋಡಿದೆಯೆ ಆ ಸಿರಿಯ? ನಿಷ್ಕಲ್ಮಷದ ಪರಿಯ
ಬಾಳು ಸಾಕೆಂದಳುವ ಹೇಡಿಗಳ ಕಣ್ಣೊರಸಿ
ಅಭಯವನು ನೀಡುತಿಹ ಹಸ್ತದಂತಿದೆ ನಭವು
ಕೊನೆಯಿಲ್ಲ ಮೊದಲಿಲ್ಲ ಆಶೆಪಾಶಗಳಿಲ್ಲ
ಹರುಕಿಲ್ಲ ಮುರುಕಿಲ್ಲ ತಗ್ಗುದಿಣ್ಣೆಗಳಿಲ್ಲ
ಮಬ್ಬಿಲ್ಲ ಮಸುಕಿಲ್ಲ ನರಕಯಾತನೆ ಇಲ್ಲ
ಚಿರ ಶಾಂತಿಯಿಂ ತುಂಬಿ ತುಳುಕುತಿದೆ ಮುಗಿಲು

ಕಂಗಳಿಗೆ ಕಣ್ಣಾಗಿ ವಜ್ರಗಳ ಗಣಿಯಾಗಿ
ಜೀವನದ ಕುಸುಮದಾ ಚಂದಿರಗೆ ಮನೆಯಾಗಿ
ಪ್ರಜ್ವಲಿಸಿ ಶೋಭಿಸುವ ಭಾಸ್ಕರನ ಬೀಡಾಗಿ
ಆದರದಿ ವಿಶ್ವವನು ಪಾಲಿಸುವ ದೊರೆಯಾಗಿ
ರಸಿಕರಿಗೆ ರಸವಾಗಿ ಕವಿಗಳಿಗೆ ತವರಾಗಿ
ಮೇಘಗಳ ಧ್ವಜಪಟದಿ ಮೆರೆಯುತಿದೆ ಬಾನು

ಅದರಡಿಯೊಳಡಗಿರುವ ನಿನ್ನ ಭಾವವದೆಷ್ಟು?
ನೀನೆಷ್ಟು ಜನಕಜೇ! ಸುಮ್ಮನಿರು, ಸಾಕು ಸಾಕು!
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...