Home / ಕವನ / ಕವಿತೆ / ಸುಮ್ಮನಿರು ಸಾಕು

ಸುಮ್ಮನಿರು ಸಾಕು

ಅಂತರಂಗದ ಭಾವ ಮಸಗಿರಲಿ ಅಡಗಿರಲಿ
ಭ್ರಾಂತಿ ಇದು ಮರುಗದಿರು ಸುಮ್ಮನಿರು ತೆರೆ ಬರಲಿ!

ನಾಟಕದ ರಂಗವಿದು: ಪಾತ್ರಗಳ ವಹಿಸುತಿರು
ಶಾಂತಿಯಿಂ ನೀನೀಗ ಮೌನವನು ಅನುಸರಿಸು
ಹೆದರದಿರು ಕುದಿಯದಿರು ಹೇಡಿ ನೀನಾಗದಿರು
ಬಡಿಯುತಿಹ ಅಲೆಗಳಿಗೆ ಕಣ್ಮುಚ್ಚಿ ಸಿರಬಾಗು
ಕಡಲಿನಲೆಗಳು ನಿನ್ನನೆಲ್ಲಿಗೊಯ್ದರು ಸರಿಯೆ
ದೃಢವಾದ ಚಿತ್ತವನು ಬಿಡದೆ ಪಾಲಿಸು ನಿರುತ

ನೋಡಲ್ಲಿ ಶಿರವೆತ್ತಿ ಆಗಸವ ನೀನೊಮ್ಮೆ
ನೋಡಿದೆಯೆ ಆ ಸಿರಿಯ? ನಿಷ್ಕಲ್ಮಷದ ಪರಿಯ
ಬಾಳು ಸಾಕೆಂದಳುವ ಹೇಡಿಗಳ ಕಣ್ಣೊರಸಿ
ಅಭಯವನು ನೀಡುತಿಹ ಹಸ್ತದಂತಿದೆ ನಭವು
ಕೊನೆಯಿಲ್ಲ ಮೊದಲಿಲ್ಲ ಆಶೆಪಾಶಗಳಿಲ್ಲ
ಹರುಕಿಲ್ಲ ಮುರುಕಿಲ್ಲ ತಗ್ಗುದಿಣ್ಣೆಗಳಿಲ್ಲ
ಮಬ್ಬಿಲ್ಲ ಮಸುಕಿಲ್ಲ ನರಕಯಾತನೆ ಇಲ್ಲ
ಚಿರ ಶಾಂತಿಯಿಂ ತುಂಬಿ ತುಳುಕುತಿದೆ ಮುಗಿಲು

ಕಂಗಳಿಗೆ ಕಣ್ಣಾಗಿ ವಜ್ರಗಳ ಗಣಿಯಾಗಿ
ಜೀವನದ ಕುಸುಮದಾ ಚಂದಿರಗೆ ಮನೆಯಾಗಿ
ಪ್ರಜ್ವಲಿಸಿ ಶೋಭಿಸುವ ಭಾಸ್ಕರನ ಬೀಡಾಗಿ
ಆದರದಿ ವಿಶ್ವವನು ಪಾಲಿಸುವ ದೊರೆಯಾಗಿ
ರಸಿಕರಿಗೆ ರಸವಾಗಿ ಕವಿಗಳಿಗೆ ತವರಾಗಿ
ಮೇಘಗಳ ಧ್ವಜಪಟದಿ ಮೆರೆಯುತಿದೆ ಬಾನು

ಅದರಡಿಯೊಳಡಗಿರುವ ನಿನ್ನ ಭಾವವದೆಷ್ಟು?
ನೀನೆಷ್ಟು ಜನಕಜೇ! ಸುಮ್ಮನಿರು, ಸಾಕು ಸಾಕು!
*****

Tagged:

Leave a Reply

Your email address will not be published. Required fields are marked *

ಬಣಸಾಲೆ ಮುಂದಿನಿಂದ ಹೆಜ್ಜೆ ಹಾಕುವಾಗ ಹೊತ್ತು ಕಂತಿದ್ದು ಲಕ್ಷ್ಯಕ್ಕೆ ಬಂದಿರಲಿಲ್ಲ. ಆಚೀಚಿನ ಹನೆಮರದೆತ್ತರದ ತೇಗ-ಮಾವುಗಳ ಟಿಸಿಲುಗಳಲ್ಲಿ ಹಕ್ಕಿಗಳ ಗರಿ ಒದರುವ ಸರಪರ. ತಾರಕ ಸ್ವರದ ಮಕ್ಕಳಾಟ ವೀಕ್ಷಿಸುತ್ತಾ ರಸ್ತೇಲಿ ಬಿದ್ದಿದ್ದ ಸಣ್ಣ ಸಣ್ಣ ಕಲ್ಲುಗಳನ್ನು ಕಾಲಿನಿಂದ ಚಿಮ್ಮುತ್ತಾ...

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...