Home / ಕವನ / ಕವಿತೆ / ಬಂದಿತು ಬರಬಹುದು

ಬಂದಿತು ಬರಬಹುದು

ಬಂದಿತು ಬರಬಹುದು ಇದು ದುರ್ಮುಖಿ ಸಂವತ್ಸರಕೆ
ಚಂದ್ರಧರನು ಕೋಪತಾಳಿ ಈ ಭೂಮಿಗೆ || ಪ ||

ಬಂದು ಕಲ್ಕಿ‌ಅವತಾರ ಸೀಮಿಗೆ
ಮು೦ದುವರಿದು ಯಮರಾಜನ ಕೊಲೆಗಳ
ದ್ವಂದ್ವನೇತ್ರಕೆ ಕಷ್ಟತರಿಸುವ ||ಆ.ಪ.||

ಚಾರುತರಹ ಚೌಭಾಗ ದಕ್ಷಿಣ ಸುಸೂತ್ರ ಮಳಿ-ಬೆಳಿ
ಉತ್ತಮವೆನಿಸಿ ಉತ್ತರಕೆ ಕಡೆಮೊದಲು ತೂಗುತ
ಶ್ಯಾರ ವಿಜಾಪುರ ಉಕ್ಕಲಿ ದನಗಳ ನೋಡುತ
ಮನದೊಳು ಕಷ್ಟಗೊಳ್ಳುತ ಕಳವಳಗೊಳ್ಳುತ
ಘೋರವಾಗಿ ಮಹಾಮುಂಬೈಯೊಳು
ಏರಿಗಟ್ಟ ಯ೦ತ್ರದ ಗಿರಣಿಗಳು
ಮಾರಿಕಾಗಿ ಮೈ ಬಣ್ಣದ ಗುಳ್ಳೆಗಳಗೆ
ಕಳ್ಳಜನರು ನಷ್ಟಾದರು ಸಖಿಯೆ ||೧||

ಆರು ಮೂರು ಒಂಭತ್ತು ಲಕ್ಷ ಜನ
ತೀರುತ ಸಾರಿದ ಲಕ್ಷ ಮೂರರೊಳು
ಮೀರಿ ಉಳಿದರು ಸಾವಕಾರ ತಾ
ಘೋರವಾಗಿ ಬೆಳಗಾವಿಗೆ ಜಾಹೀರ ಮುಟ್ಟುತಾ
ಜನನ ಮರಣ ಸಂಖ್ಯೆ
ಜನರಿಗೆ ವಿಪರೀತ ತೋರುತಾ
ಸುಟ್ಟುಹೋತು ರಂಗಮಾಲು ಕುಂಬಾರದೊರಿ
ಎಂಟು ಲಕ್ಷದ್ದಿತ್ತಿ ಮಹಾಲಕರಿ
ಕೋಟಿ ಜಲ್ಮವ ದಾಟಿ
ಉಳವಿ ಶಿವಶರಣರಾಗಿ ಮರ್ತ್ಯಕ್ಕೆ ಶಿಕ್ಷಿಸುತಾ ||೨||

ಪ್ಯಾಟಿ ಪಟ್ಟಣಾ ಹುಬ್ಬಳ್ಳಿ ಜನರೊಡ ತಾ
ದನಕರ ಗೋಳಿಡುತಾ
ದುಡ್ಡಿಗೆ ಮೂರು ಮಾತಾಡುತಾ
ನೀಟವಾಗಿ ಮಲ್ಲಾಡ ಬೆಳವಲಕೆ ಓಡುತಾ
ಮೈಸೂರಸೀಮಿ ಸೇರಿ ಷಣ್ಮುಖ ಆವತಾರ ತೋರುತಾ
ಸಾಧಿಸುತ ವಿಳಂಬಿ ಸಂವತ್ಸರ ಕೂಡುತಾ
ಇಳೆಯೊಳು ಸಜ್ಜನರು ಕಳವಳಗೊಳ್ಳುತಾ ನಿಜಪಾಡುತಾ
ಸಾಧುಸಂತರು ಯಮನಾಲಯ ಮೀರಿ
ಬೋಧಿಸಿದರು ಪರಮಾತ್ಮನ ಲೀಲಾ
ಚೋದ್ಯವಾಯಿತು ಅಮರಾರಿಪುರುರಿಗೆ || ೩ ||

ವೀರ್ಯದೊಳು ವಿಕಾರಿ ಸಂವತ್ಸರ ಗಾವುದಕೆ ನಿಂದಿಸಿ
ಗಾರುಗೊಂಡು ಮನಿ ಮನಿ ಗಾವುದಕೆ ಹೊಂದಿಸಿ
ಸಾರಿ ಹೇಳತೇನಿ ಮೂರು ಸಂವತ್ಸರ ಕೂಡಿಸಿ
ಇದರೊಳು ತಪ್ಪು ಆದರೆ ಗುರುಗೋವಿಂದನ ಸಾಕ್ಷಿ
ಧರೆಯೊಳು ಶಿಶುನಾಳ ಗುರುಪುತ್ರ ಕವಿಗೆ
ಸರಿಯಾಯಿತು ಕಾಲಜ್ಞಾನ ಸೂಚನದ ಭವಿ
ಮರೆಯಲಾರೆ ಸಂಸಾರದ ಸವಿ
ಗುರುಮೂರ್ತಿ ಶಶಿಯಂಬುಜಮುಖಿಯೆ || ೪ ||
*****

 

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...