Home / ಕವನ / ಕವಿತೆ / ಬಂದಿತು ಬರಬಹುದು

ಬಂದಿತು ಬರಬಹುದು

ಬಂದಿತು ಬರಬಹುದು ಇದು ದುರ್ಮುಖಿ ಸಂವತ್ಸರಕೆ
ಚಂದ್ರಧರನು ಕೋಪತಾಳಿ ಈ ಭೂಮಿಗೆ || ಪ ||

ಬಂದು ಕಲ್ಕಿ‌ಅವತಾರ ಸೀಮಿಗೆ
ಮು೦ದುವರಿದು ಯಮರಾಜನ ಕೊಲೆಗಳ
ದ್ವಂದ್ವನೇತ್ರಕೆ ಕಷ್ಟತರಿಸುವ ||ಆ.ಪ.||

ಚಾರುತರಹ ಚೌಭಾಗ ದಕ್ಷಿಣ ಸುಸೂತ್ರ ಮಳಿ-ಬೆಳಿ
ಉತ್ತಮವೆನಿಸಿ ಉತ್ತರಕೆ ಕಡೆಮೊದಲು ತೂಗುತ
ಶ್ಯಾರ ವಿಜಾಪುರ ಉಕ್ಕಲಿ ದನಗಳ ನೋಡುತ
ಮನದೊಳು ಕಷ್ಟಗೊಳ್ಳುತ ಕಳವಳಗೊಳ್ಳುತ
ಘೋರವಾಗಿ ಮಹಾಮುಂಬೈಯೊಳು
ಏರಿಗಟ್ಟ ಯ೦ತ್ರದ ಗಿರಣಿಗಳು
ಮಾರಿಕಾಗಿ ಮೈ ಬಣ್ಣದ ಗುಳ್ಳೆಗಳಗೆ
ಕಳ್ಳಜನರು ನಷ್ಟಾದರು ಸಖಿಯೆ ||೧||

ಆರು ಮೂರು ಒಂಭತ್ತು ಲಕ್ಷ ಜನ
ತೀರುತ ಸಾರಿದ ಲಕ್ಷ ಮೂರರೊಳು
ಮೀರಿ ಉಳಿದರು ಸಾವಕಾರ ತಾ
ಘೋರವಾಗಿ ಬೆಳಗಾವಿಗೆ ಜಾಹೀರ ಮುಟ್ಟುತಾ
ಜನನ ಮರಣ ಸಂಖ್ಯೆ
ಜನರಿಗೆ ವಿಪರೀತ ತೋರುತಾ
ಸುಟ್ಟುಹೋತು ರಂಗಮಾಲು ಕುಂಬಾರದೊರಿ
ಎಂಟು ಲಕ್ಷದ್ದಿತ್ತಿ ಮಹಾಲಕರಿ
ಕೋಟಿ ಜಲ್ಮವ ದಾಟಿ
ಉಳವಿ ಶಿವಶರಣರಾಗಿ ಮರ್ತ್ಯಕ್ಕೆ ಶಿಕ್ಷಿಸುತಾ ||೨||

ಪ್ಯಾಟಿ ಪಟ್ಟಣಾ ಹುಬ್ಬಳ್ಳಿ ಜನರೊಡ ತಾ
ದನಕರ ಗೋಳಿಡುತಾ
ದುಡ್ಡಿಗೆ ಮೂರು ಮಾತಾಡುತಾ
ನೀಟವಾಗಿ ಮಲ್ಲಾಡ ಬೆಳವಲಕೆ ಓಡುತಾ
ಮೈಸೂರಸೀಮಿ ಸೇರಿ ಷಣ್ಮುಖ ಆವತಾರ ತೋರುತಾ
ಸಾಧಿಸುತ ವಿಳಂಬಿ ಸಂವತ್ಸರ ಕೂಡುತಾ
ಇಳೆಯೊಳು ಸಜ್ಜನರು ಕಳವಳಗೊಳ್ಳುತಾ ನಿಜಪಾಡುತಾ
ಸಾಧುಸಂತರು ಯಮನಾಲಯ ಮೀರಿ
ಬೋಧಿಸಿದರು ಪರಮಾತ್ಮನ ಲೀಲಾ
ಚೋದ್ಯವಾಯಿತು ಅಮರಾರಿಪುರುರಿಗೆ || ೩ ||

ವೀರ್ಯದೊಳು ವಿಕಾರಿ ಸಂವತ್ಸರ ಗಾವುದಕೆ ನಿಂದಿಸಿ
ಗಾರುಗೊಂಡು ಮನಿ ಮನಿ ಗಾವುದಕೆ ಹೊಂದಿಸಿ
ಸಾರಿ ಹೇಳತೇನಿ ಮೂರು ಸಂವತ್ಸರ ಕೂಡಿಸಿ
ಇದರೊಳು ತಪ್ಪು ಆದರೆ ಗುರುಗೋವಿಂದನ ಸಾಕ್ಷಿ
ಧರೆಯೊಳು ಶಿಶುನಾಳ ಗುರುಪುತ್ರ ಕವಿಗೆ
ಸರಿಯಾಯಿತು ಕಾಲಜ್ಞಾನ ಸೂಚನದ ಭವಿ
ಮರೆಯಲಾರೆ ಸಂಸಾರದ ಸವಿ
ಗುರುಮೂರ್ತಿ ಶಶಿಯಂಬುಜಮುಖಿಯೆ || ೪ ||
*****

 

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...