Home / ಕವನ / ಕವಿತೆ / ಶ್ರೀ ಗುರುವರನ ಕರುಣವ ಪಡೆಯುತ

ಶ್ರೀ ಗುರುವರನ ಕರುಣವ ಪಡೆಯುತ

ಶ್ರೀ ಗುರುವರನ ಕರುಣವ ಪಡೆಯುತ
ಬೇಗದಿರಾಗರಚನೆಯಿಂದ ಕೊಂಡಾಡಿ
ಭೋಗಿಭೂಷಣನನ್ನು ಭಕ್ತಿಯಿಂ ವೂಜಿಸಿ ಸಾಗಿಸು ಸಂಸಾರವಾ || ಪ ||

ಸಂಸಾರದಿಂ ಸುವಿಚಾರ ಮಾರ್ಗವ ತಿಳಿದು
ಸಂಸಾರಶರಧಿಯ ನೀ ದಾಂಟು || ಆ, ಪ. ||

ನೋಡು ಕಲಿಯುಗದ್ಯೆದು ಸಾವಿರ ವಷ೯ಕ್ಕೆ
ಕೇಡೊದಗುವದು ವಿಕಾರಿಗೆ
ನಾಡೆಲ್ಲ ಕೈಗೂಡಿ ನರರಿಗೆ ಪ್ರಳಯವು
ಕಾಡು ಸೇರಿದರೂ ಬಿಡದಣ್ಣಾ || ೧ ||

ಉತ್ತರದಿಕ್ಕಿನೊಳ್ಹುಟ್ಟುವದದು ರೋಗ
ಅಷ್ಟದಿಕ್ಕನೆ ಸುತ್ತಿಕೊಳ್ಳುವದು
ಅತ್ಯಧಿಕ ಇಂಗ್ಲೀಷ ಸರಕಾರ ದೊರೆಗಳಾ
ಗೊತ್ತುಮಾಡುವರು ಪ್ಲೇಗುಯೆಂತೆಂದು ||೨||

ರೋಗದ ಸೂಚನೆ ಮೊದಲು ಇಲಿಗೆ ತಗಲಿ
ಮ್ಯಾಗಿಂದ ಮನೆಯೊಳು ಬಿದ್ದಿಳಿಯೆ
ಆಗ ಜನರಿಗಂಟಿ ಗಾಭರಿಗೊಳ್ಳುತ
ಹ್ಯಾಗೆಮಾಡಲಿ ದೇವಾಯೆನ್ನವರು ||೩||

ಜಗಪತಿ ಪ್ರಜಕೆಲ್ಲಕಪ್ಪಣೆ ಇತ್ತನು
ತಗಲಬಾರದು ರೋಗ ಒಬ್ಬರಿಗೆ
ಅಗಲಿಸಿ ಊರಬಿಡಿಸಿ ಹೊರಗ್ಹಾಕಿಸಿ
ಮಿಗಿಲಾದ ಕ್ವಾರಂಟು ಕಟ್ಟಿಸುವಾ ||೪||

ಹೊಲಮನಿ ದ್ರವ್ಯದ ಬಲು ಚಿಂತಿಯಿ೦ ಬಿಟ್ಟು
ಹಲಬುತಡವಿಯೊಳು ಗುಡಿಸಲದಿ
ಇಳೆ ಜನರಿರುತಿತೆ ಕಳತಸ್ಕರರು
ಕಲ್ಲು ಕವಣಿಯೊಳಿಟ್ಟಿಟ್ಟು ಹೊಡೆಯುವರು ||೫||

ಒಬ್ಬರೊಬ್ಬರ ಬದಕಂ ಒಬ್ಬರೊಬ್ಬರಿಗಾಗಿ
ಒಬ್ಬರೊಬ್ಬರ ಮುಟ್ಟದಾಗುವದು
ಸರ್ವದೇಶದೊಳು ಪರಿ ಪರಿ ಕಷ್ಟ-.
ಗಳ್ಹಬ್ಬುತಿಹವು ದಿಟ ತಿಳಿ ಮನವೆ ||೬||

ಯಾಕೆ ಈ ಪರಿ ಕಷ್ಟ ನರರಿಗಾವುವದನೆ
ಕಾಕುಜನದಪಾಪ ಹೆಚ್ಚುತಿರೆ
ಲೋಕನಾಥನು ಭೂಮಿಗ್ಯಾಕೆ ಭಾರವು ಎಂದು
ತಾ ಕಳುಹಿದ ಮೃತ್ಯುದೇವತೆಯ ||೭||

ಗುರುಹಿರಿಯರನೆಲ್ಲ ಜರಿಯುತ ಜ್ಞಾನದಿ
ಪರದ್ರವ್ಯ ಪರಸ್ತ್ರೀಯ ಕದ್ದೊಯುತಾ
ಸರಿ ನಮಗಾರೆಂದು ದುರುಳರು ಗವ೯ದಿ
ಮೆರದಾಡುತಿರುವರು ಲೋಕದಲಿ ||೮||

ಹೇಳಲು ಬಹಳುಂಟು ಸೂಕ್ಷ್ಮದಿ ತಿಳಿಸುವೆ
ತಾಳೆಳು ಭೂಕಾಂತೆ ಬಹುಭಾರವಾ
ತಾಳಿದ ಶೇಷನು ಸೀರಖಾನಿ ನಿಂತನು
ಹಾಳುದೇಗುಲ ಹೊಕ್ಕ ಶಿವ ತಾನು ||೯||

ಈ ತೆರ ದುಜ೯ನ ಪ್ರಾಂತದಿಂದಲಿ ಬಹು-
ಪಾತಕ ಹೆಚ್ಚಿತು ಕಲಿಯೊಳಗೆ
ತಾತಗುರುಗೋವಿಂದನನು ಮೊರೆಹೊಕ್ಕರೆ
ಆತನೆ ರಕ್ಷಿಪ ಕರುಣದಲಿ || ೧೦ ||
*****

 

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...