Home / ಕವನ / ಕವಿತೆ / ಶ್ರೀ ಗುರುವರನ ಕರುಣವ ಪಡೆಯುತ

ಶ್ರೀ ಗುರುವರನ ಕರುಣವ ಪಡೆಯುತ

ಶ್ರೀ ಗುರುವರನ ಕರುಣವ ಪಡೆಯುತ
ಬೇಗದಿರಾಗರಚನೆಯಿಂದ ಕೊಂಡಾಡಿ
ಭೋಗಿಭೂಷಣನನ್ನು ಭಕ್ತಿಯಿಂ ವೂಜಿಸಿ ಸಾಗಿಸು ಸಂಸಾರವಾ || ಪ ||

ಸಂಸಾರದಿಂ ಸುವಿಚಾರ ಮಾರ್ಗವ ತಿಳಿದು
ಸಂಸಾರಶರಧಿಯ ನೀ ದಾಂಟು || ಆ, ಪ. ||

ನೋಡು ಕಲಿಯುಗದ್ಯೆದು ಸಾವಿರ ವಷ೯ಕ್ಕೆ
ಕೇಡೊದಗುವದು ವಿಕಾರಿಗೆ
ನಾಡೆಲ್ಲ ಕೈಗೂಡಿ ನರರಿಗೆ ಪ್ರಳಯವು
ಕಾಡು ಸೇರಿದರೂ ಬಿಡದಣ್ಣಾ || ೧ ||

ಉತ್ತರದಿಕ್ಕಿನೊಳ್ಹುಟ್ಟುವದದು ರೋಗ
ಅಷ್ಟದಿಕ್ಕನೆ ಸುತ್ತಿಕೊಳ್ಳುವದು
ಅತ್ಯಧಿಕ ಇಂಗ್ಲೀಷ ಸರಕಾರ ದೊರೆಗಳಾ
ಗೊತ್ತುಮಾಡುವರು ಪ್ಲೇಗುಯೆಂತೆಂದು ||೨||

ರೋಗದ ಸೂಚನೆ ಮೊದಲು ಇಲಿಗೆ ತಗಲಿ
ಮ್ಯಾಗಿಂದ ಮನೆಯೊಳು ಬಿದ್ದಿಳಿಯೆ
ಆಗ ಜನರಿಗಂಟಿ ಗಾಭರಿಗೊಳ್ಳುತ
ಹ್ಯಾಗೆಮಾಡಲಿ ದೇವಾಯೆನ್ನವರು ||೩||

ಜಗಪತಿ ಪ್ರಜಕೆಲ್ಲಕಪ್ಪಣೆ ಇತ್ತನು
ತಗಲಬಾರದು ರೋಗ ಒಬ್ಬರಿಗೆ
ಅಗಲಿಸಿ ಊರಬಿಡಿಸಿ ಹೊರಗ್ಹಾಕಿಸಿ
ಮಿಗಿಲಾದ ಕ್ವಾರಂಟು ಕಟ್ಟಿಸುವಾ ||೪||

ಹೊಲಮನಿ ದ್ರವ್ಯದ ಬಲು ಚಿಂತಿಯಿ೦ ಬಿಟ್ಟು
ಹಲಬುತಡವಿಯೊಳು ಗುಡಿಸಲದಿ
ಇಳೆ ಜನರಿರುತಿತೆ ಕಳತಸ್ಕರರು
ಕಲ್ಲು ಕವಣಿಯೊಳಿಟ್ಟಿಟ್ಟು ಹೊಡೆಯುವರು ||೫||

ಒಬ್ಬರೊಬ್ಬರ ಬದಕಂ ಒಬ್ಬರೊಬ್ಬರಿಗಾಗಿ
ಒಬ್ಬರೊಬ್ಬರ ಮುಟ್ಟದಾಗುವದು
ಸರ್ವದೇಶದೊಳು ಪರಿ ಪರಿ ಕಷ್ಟ-.
ಗಳ್ಹಬ್ಬುತಿಹವು ದಿಟ ತಿಳಿ ಮನವೆ ||೬||

ಯಾಕೆ ಈ ಪರಿ ಕಷ್ಟ ನರರಿಗಾವುವದನೆ
ಕಾಕುಜನದಪಾಪ ಹೆಚ್ಚುತಿರೆ
ಲೋಕನಾಥನು ಭೂಮಿಗ್ಯಾಕೆ ಭಾರವು ಎಂದು
ತಾ ಕಳುಹಿದ ಮೃತ್ಯುದೇವತೆಯ ||೭||

ಗುರುಹಿರಿಯರನೆಲ್ಲ ಜರಿಯುತ ಜ್ಞಾನದಿ
ಪರದ್ರವ್ಯ ಪರಸ್ತ್ರೀಯ ಕದ್ದೊಯುತಾ
ಸರಿ ನಮಗಾರೆಂದು ದುರುಳರು ಗವ೯ದಿ
ಮೆರದಾಡುತಿರುವರು ಲೋಕದಲಿ ||೮||

ಹೇಳಲು ಬಹಳುಂಟು ಸೂಕ್ಷ್ಮದಿ ತಿಳಿಸುವೆ
ತಾಳೆಳು ಭೂಕಾಂತೆ ಬಹುಭಾರವಾ
ತಾಳಿದ ಶೇಷನು ಸೀರಖಾನಿ ನಿಂತನು
ಹಾಳುದೇಗುಲ ಹೊಕ್ಕ ಶಿವ ತಾನು ||೯||

ಈ ತೆರ ದುಜ೯ನ ಪ್ರಾಂತದಿಂದಲಿ ಬಹು-
ಪಾತಕ ಹೆಚ್ಚಿತು ಕಲಿಯೊಳಗೆ
ತಾತಗುರುಗೋವಿಂದನನು ಮೊರೆಹೊಕ್ಕರೆ
ಆತನೆ ರಕ್ಷಿಪ ಕರುಣದಲಿ || ೧೦ ||
*****

 

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...