Home / ಕವನ / ಕವಿತೆ / ಜಿಟ್ಟಿಹುಳಗಳು ಎದ್ದಾವು ನೋಡು

ಜಿಟ್ಟಿಹುಳಗಳು ಎದ್ದಾವು ನೋಡು

ಜಿಟ್ಟಿಹುಳಗಳು ಎದ್ದಾವು ಇದು ನೋಡು
ಸೃಷ್ಟಿಪತಿ ಅರಸರಿಗೆಲ್ಲಾ ಕೇಡೋ
ಅಷ್ಟದಶಮಧ್ಯದಲಿ ಒಪ್ಪುವ ನೆಟ್ಟನಾದಿಭೂಮಿ ದಿಲ್ಲಿಗೆ
ಶ್ರೇಷ್ಠಕ್ರಿಸ್ತಾನಬಾದಶಹ ಪಟ್ಟಗಟ್ಟಲು ಕಂಡು ||ಪ||

ವಸುಮತಿಪತಿ ವರದಿಂ ಕುಮಾರ
ಈಶಾನ್ಯೆಂಬುವ ಪರಮನವತಾರಾ
ರೋಸಬಾದಶಾ ಇಂಗ್ಲೀಷಮತವನುದ್ಧರಿಸಲು
ಬಹುಧಾನ್ಯನ ಸಂವತ್ಸರಕೆ ಉತ್ತಮ ಬೇಸಿಗ ಬರಹವ ಕೇಳಿ ||೧||

ಕ್ಷೋಣಿಗೆ ಆಧಿಕಾರಕೊಟ್ಟು ಕಂಪನಿಗೆ
ರಾಣಿ ದೊರೆ ತಾನು ಕಟ್ಟಾಕಾನೂನಿಗೆ
ಜಾಣತನದಲಿ ಇಳಿಯನಾಳುತ ತಾನೇ ತಾನೇ‌ಆಗಿ ಕಲಿಯುಗ
ಪ್ರಾಣ ನಿರ್ಮಲಪಾದದಲಿ ಭೂ ಅಣಿದು ತಲ್ಲಣಿಸಕೆ ||೨||

ಮಜದಲಿ ಪೇಳುವೆ ಮೌಜಿನ ಮಾತು
ಮೂಜಗದೊಳು ಆತಿಕೌತುಕವಾತು
ರಾಜ್ಯದಲಿ ಯಾವತ್ತು ದೇಶದ ಪಾಳ್ಯಾಗಾರರು ಪರಮಡಿಸಿ ಮಹಾ-
ರಾಜ್ಯ ಕೋರ್ಟಿಗೆ ಒಯ್ದರೆಂಬುವ ಸುದ್ಧಿ ಕೇಳಿ ||೩||

ಧರ್ಮದಾತಾ ಶಿಶುವಿನಾಳಧೀಶಾ
ಊರ್ವಿ ಪಾಲಿಸಿದನು ಇಷ್ಟುದಿವಸಾ
ಕರ್ಮಕಟ್ಟಳೆ ತೀರಿಸಿ ಮೂವತ್ತು-
ವರ್ಷ ಮುಂದ ಹದಿನೈದು ಇರುತಿರೆ
ಮೊಗಲ ವಿಲಾಯತಿ ಪಟ್ಟಕ್ಕೆ ಕರ್ಮ ತಟ್ಟಲು ಕಂಡು ಜಿಟ್ಟಿಹುಳ ||೪||
*****

 

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...