Home / ಕವನ / ಕವಿತೆ / ಜಿಟ್ಟಿಹುಳಗಳು ಎದ್ದಾವು ನೋಡು

ಜಿಟ್ಟಿಹುಳಗಳು ಎದ್ದಾವು ನೋಡು

ಜಿಟ್ಟಿಹುಳಗಳು ಎದ್ದಾವು ಇದು ನೋಡು
ಸೃಷ್ಟಿಪತಿ ಅರಸರಿಗೆಲ್ಲಾ ಕೇಡೋ
ಅಷ್ಟದಶಮಧ್ಯದಲಿ ಒಪ್ಪುವ ನೆಟ್ಟನಾದಿಭೂಮಿ ದಿಲ್ಲಿಗೆ
ಶ್ರೇಷ್ಠಕ್ರಿಸ್ತಾನಬಾದಶಹ ಪಟ್ಟಗಟ್ಟಲು ಕಂಡು ||ಪ||

ವಸುಮತಿಪತಿ ವರದಿಂ ಕುಮಾರ
ಈಶಾನ್ಯೆಂಬುವ ಪರಮನವತಾರಾ
ರೋಸಬಾದಶಾ ಇಂಗ್ಲೀಷಮತವನುದ್ಧರಿಸಲು
ಬಹುಧಾನ್ಯನ ಸಂವತ್ಸರಕೆ ಉತ್ತಮ ಬೇಸಿಗ ಬರಹವ ಕೇಳಿ ||೧||

ಕ್ಷೋಣಿಗೆ ಆಧಿಕಾರಕೊಟ್ಟು ಕಂಪನಿಗೆ
ರಾಣಿ ದೊರೆ ತಾನು ಕಟ್ಟಾಕಾನೂನಿಗೆ
ಜಾಣತನದಲಿ ಇಳಿಯನಾಳುತ ತಾನೇ ತಾನೇ‌ಆಗಿ ಕಲಿಯುಗ
ಪ್ರಾಣ ನಿರ್ಮಲಪಾದದಲಿ ಭೂ ಅಣಿದು ತಲ್ಲಣಿಸಕೆ ||೨||

ಮಜದಲಿ ಪೇಳುವೆ ಮೌಜಿನ ಮಾತು
ಮೂಜಗದೊಳು ಆತಿಕೌತುಕವಾತು
ರಾಜ್ಯದಲಿ ಯಾವತ್ತು ದೇಶದ ಪಾಳ್ಯಾಗಾರರು ಪರಮಡಿಸಿ ಮಹಾ-
ರಾಜ್ಯ ಕೋರ್ಟಿಗೆ ಒಯ್ದರೆಂಬುವ ಸುದ್ಧಿ ಕೇಳಿ ||೩||

ಧರ್ಮದಾತಾ ಶಿಶುವಿನಾಳಧೀಶಾ
ಊರ್ವಿ ಪಾಲಿಸಿದನು ಇಷ್ಟುದಿವಸಾ
ಕರ್ಮಕಟ್ಟಳೆ ತೀರಿಸಿ ಮೂವತ್ತು-
ವರ್ಷ ಮುಂದ ಹದಿನೈದು ಇರುತಿರೆ
ಮೊಗಲ ವಿಲಾಯತಿ ಪಟ್ಟಕ್ಕೆ ಕರ್ಮ ತಟ್ಟಲು ಕಂಡು ಜಿಟ್ಟಿಹುಳ ||೪||
*****

 

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...