Home / ಕವನ / ಕವಿತೆ / ಬಸವಣ್ಣ

ಬಸವಣ್ಣ

ಹೃದಯ ಕಾಡಿನಲಿಹ ಹುಲಿಯ ನಾಡಿ ಮಿಡಿಸುತಲಿ
ಅಂತರಂಗದ ವೀಣೆ ನುಡಿಸ ಬಾ ಬಸವಣ್ಣ
ಕಾಡು ಈ ದೇಹದಲಿ ನಾಡ ಮೂಡಿಸುತ ತೀಡುತಲಿ
ಬೀಡು ಮಾಡ ಬಾ ಬೇಗ ಓ ನಮ್ಮೆಲ್ಲರಣ್ಣ !

ಹುಲಿತನದ ಛಲವಿದ್ದು ಇಲಿಯಾಗಿ ಇದ್ದಿಹೆವು
ಭಯದಿ ಮರೆತಿಹೆವು ನೈಜ ತೇಜವನ್ನು
ಮಿನುಗು ಮೆರಗಿನ ವರ್ಣ ವೈಚಿತ್ರ್ಯ ಮಾಯಪಾಶವು
ಗುಡುಗಿ ಘರ್ಜಿಸುತಿದೆ; ಬದುಕಲಾರೆವಿನ್ನು

ನಿನ್ನ ಸಾತ್ವಿಕತೆಯ ಓಜಸ್ಸು ಹೊಮ್ಮಿ ತೇಜಸ್ಸು ಮೂಡಿ
ಮುಗಿಲಿನಾಚೆಯ ರವಿಯು ಮುಂದಾದನು
ಹಿಂದೊಮ್ಮೆ ನಿನ್ನ ವಚನ ವೃಷ್ಟಿ ನಮ್ಮೊಡಲ ಕೂಡಿ
ಓಡಿಸಿತು ಕವಿದ ಕಾರ್ಮೋಡಗಳನು

ದಿವ್ಯ ಜ್ಯೋತಿಯ ಹೊಲವು ಶರಣ ಛಲವು
ಸತ್ವ ಸಾತ್ವಿಕತೆಯ ನಾಂದಿ ಬಲದ ಮಂದಿರ ಭೇರಿ
ಮುಗಿಲು ಇಲ್ಲದ ಗಗನ ತಿಂಗಳನ ಇರವು
ಮಾಯೆ ಹೊದ್ದದ ಮನವು ವಿಶ್ವಾತ್ಮಿ ಪರಮಾತ್ಮನಕೇರಿ

ಶರಣ ಚರಣದ ವರ್ಣ ಬಸವಣ್ಣ ಹೇಳಿ
ಭವವೇಶ ಪಾಶವನು ನಾಶಮಾಡೆಮ್ಮ ತಂದನಿಲ್ಲಿ
ಸವಿ ತಿರುಳ ವಿಷ ಒಡಲ ವೈಚಿತ್ರ ಹೇಳಿ
ನೈಜ ಜ್ಯೋತಿಯನಿತ್ತು ಬಾ ಇತ್ತ ಎಂದು ಕರೆದನಲ್ಲಿ

ಕಿರಿ ಹೃದಯ ಕಲ್ಮಿಷ ಘೋರ ಗವಿಯಲಿ
ನುಸುಳಿ ಬಂದೆಮ್ಮ ಕಿವಿಯೊಳುಸುರಿದ ವಚನವ
ಬಲ ಬಂಧನ ವ್ಯೂಹ ಝಾಡ್ಯದಲಿ
ಮೌಢ್ಯತೆಯ ಮುರಿದೊತ್ತಿ ಎತ್ತುವನೆನ್ನ ಬಸವ

ಹಗಲು ಶಖೆಯಾಗಿ ಇರುಳು ಭಯವಾಗಿ
ಮಾಗದಾ ಘಾಯ ಮಾಡಿಹುದು ಕಾಯಕಾಮಾಯ
ಮದ್ದು ಇನ್ನೆಲ್ಲಿ ? ಓ ಕಾಣದಾ ಯೋಗಿ
ಇಹುದು ಬಾರಲ್ಲಿ; ಬಸವ ನುಡಿಯಲ್ಲಿ ನೈಜ ಧೈಯ !

ಚುಕ್ಕೆ ಲತೆಯಾಗಿ, ರವಿಯ ಫಲವಾಗಿ
ಹೂವು ಚಂದಿರನಾಗಿ, ನೆಲನೀರು ಶಾಮ ಮುಗಿಲಾಗಿ
ಮಿನುಗು ಮರುಗು ಜೀವನವು ಮಿಂಚಾಗಿ
ಹೊಂಚಿ ಸಿಡಿಲನು ಹೊಡೆಯುವದದೋ ಮಾಯ ಕೂಗಿ

ರೇಗಿ ಎದ್ದಿಹ ರುಚಿಗೆ ನೀಗಿ ಬಿದ್ದಿದೆ ಶಕ್ತಿ
ಬಲವಾಗು ಬಾ ಮೊದಲು ಹೃದಯ ಹದವಾಗಿ ಮಾಡು
ಜನ್ಮ ಸಾರ್ಥಕತೆಯ ನೈಜ ಮುಕ್ತಿ
ಆ ಮಾರ್ಗ ಬಸವಣ್ಣ ನುಡಿದ ವಚನ ನೋಡು
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...