Home / ಕವನ / ಕವಿತೆ / ಬಸವಣ್ಣ

ಬಸವಣ್ಣ

ಹೃದಯ ಕಾಡಿನಲಿಹ ಹುಲಿಯ ನಾಡಿ ಮಿಡಿಸುತಲಿ
ಅಂತರಂಗದ ವೀಣೆ ನುಡಿಸ ಬಾ ಬಸವಣ್ಣ
ಕಾಡು ಈ ದೇಹದಲಿ ನಾಡ ಮೂಡಿಸುತ ತೀಡುತಲಿ
ಬೀಡು ಮಾಡ ಬಾ ಬೇಗ ಓ ನಮ್ಮೆಲ್ಲರಣ್ಣ !

ಹುಲಿತನದ ಛಲವಿದ್ದು ಇಲಿಯಾಗಿ ಇದ್ದಿಹೆವು
ಭಯದಿ ಮರೆತಿಹೆವು ನೈಜ ತೇಜವನ್ನು
ಮಿನುಗು ಮೆರಗಿನ ವರ್ಣ ವೈಚಿತ್ರ್ಯ ಮಾಯಪಾಶವು
ಗುಡುಗಿ ಘರ್ಜಿಸುತಿದೆ; ಬದುಕಲಾರೆವಿನ್ನು

ನಿನ್ನ ಸಾತ್ವಿಕತೆಯ ಓಜಸ್ಸು ಹೊಮ್ಮಿ ತೇಜಸ್ಸು ಮೂಡಿ
ಮುಗಿಲಿನಾಚೆಯ ರವಿಯು ಮುಂದಾದನು
ಹಿಂದೊಮ್ಮೆ ನಿನ್ನ ವಚನ ವೃಷ್ಟಿ ನಮ್ಮೊಡಲ ಕೂಡಿ
ಓಡಿಸಿತು ಕವಿದ ಕಾರ್ಮೋಡಗಳನು

ದಿವ್ಯ ಜ್ಯೋತಿಯ ಹೊಲವು ಶರಣ ಛಲವು
ಸತ್ವ ಸಾತ್ವಿಕತೆಯ ನಾಂದಿ ಬಲದ ಮಂದಿರ ಭೇರಿ
ಮುಗಿಲು ಇಲ್ಲದ ಗಗನ ತಿಂಗಳನ ಇರವು
ಮಾಯೆ ಹೊದ್ದದ ಮನವು ವಿಶ್ವಾತ್ಮಿ ಪರಮಾತ್ಮನಕೇರಿ

ಶರಣ ಚರಣದ ವರ್ಣ ಬಸವಣ್ಣ ಹೇಳಿ
ಭವವೇಶ ಪಾಶವನು ನಾಶಮಾಡೆಮ್ಮ ತಂದನಿಲ್ಲಿ
ಸವಿ ತಿರುಳ ವಿಷ ಒಡಲ ವೈಚಿತ್ರ ಹೇಳಿ
ನೈಜ ಜ್ಯೋತಿಯನಿತ್ತು ಬಾ ಇತ್ತ ಎಂದು ಕರೆದನಲ್ಲಿ

ಕಿರಿ ಹೃದಯ ಕಲ್ಮಿಷ ಘೋರ ಗವಿಯಲಿ
ನುಸುಳಿ ಬಂದೆಮ್ಮ ಕಿವಿಯೊಳುಸುರಿದ ವಚನವ
ಬಲ ಬಂಧನ ವ್ಯೂಹ ಝಾಡ್ಯದಲಿ
ಮೌಢ್ಯತೆಯ ಮುರಿದೊತ್ತಿ ಎತ್ತುವನೆನ್ನ ಬಸವ

ಹಗಲು ಶಖೆಯಾಗಿ ಇರುಳು ಭಯವಾಗಿ
ಮಾಗದಾ ಘಾಯ ಮಾಡಿಹುದು ಕಾಯಕಾಮಾಯ
ಮದ್ದು ಇನ್ನೆಲ್ಲಿ ? ಓ ಕಾಣದಾ ಯೋಗಿ
ಇಹುದು ಬಾರಲ್ಲಿ; ಬಸವ ನುಡಿಯಲ್ಲಿ ನೈಜ ಧೈಯ !

ಚುಕ್ಕೆ ಲತೆಯಾಗಿ, ರವಿಯ ಫಲವಾಗಿ
ಹೂವು ಚಂದಿರನಾಗಿ, ನೆಲನೀರು ಶಾಮ ಮುಗಿಲಾಗಿ
ಮಿನುಗು ಮರುಗು ಜೀವನವು ಮಿಂಚಾಗಿ
ಹೊಂಚಿ ಸಿಡಿಲನು ಹೊಡೆಯುವದದೋ ಮಾಯ ಕೂಗಿ

ರೇಗಿ ಎದ್ದಿಹ ರುಚಿಗೆ ನೀಗಿ ಬಿದ್ದಿದೆ ಶಕ್ತಿ
ಬಲವಾಗು ಬಾ ಮೊದಲು ಹೃದಯ ಹದವಾಗಿ ಮಾಡು
ಜನ್ಮ ಸಾರ್ಥಕತೆಯ ನೈಜ ಮುಕ್ತಿ
ಆ ಮಾರ್ಗ ಬಸವಣ್ಣ ನುಡಿದ ವಚನ ನೋಡು
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...