Home / ಕವನ / ಕವಿತೆ / ಬಸವಣ್ಣ

ಬಸವಣ್ಣ

ಹೃದಯ ಕಾಡಿನಲಿಹ ಹುಲಿಯ ನಾಡಿ ಮಿಡಿಸುತಲಿ
ಅಂತರಂಗದ ವೀಣೆ ನುಡಿಸ ಬಾ ಬಸವಣ್ಣ
ಕಾಡು ಈ ದೇಹದಲಿ ನಾಡ ಮೂಡಿಸುತ ತೀಡುತಲಿ
ಬೀಡು ಮಾಡ ಬಾ ಬೇಗ ಓ ನಮ್ಮೆಲ್ಲರಣ್ಣ !

ಹುಲಿತನದ ಛಲವಿದ್ದು ಇಲಿಯಾಗಿ ಇದ್ದಿಹೆವು
ಭಯದಿ ಮರೆತಿಹೆವು ನೈಜ ತೇಜವನ್ನು
ಮಿನುಗು ಮೆರಗಿನ ವರ್ಣ ವೈಚಿತ್ರ್ಯ ಮಾಯಪಾಶವು
ಗುಡುಗಿ ಘರ್ಜಿಸುತಿದೆ; ಬದುಕಲಾರೆವಿನ್ನು

ನಿನ್ನ ಸಾತ್ವಿಕತೆಯ ಓಜಸ್ಸು ಹೊಮ್ಮಿ ತೇಜಸ್ಸು ಮೂಡಿ
ಮುಗಿಲಿನಾಚೆಯ ರವಿಯು ಮುಂದಾದನು
ಹಿಂದೊಮ್ಮೆ ನಿನ್ನ ವಚನ ವೃಷ್ಟಿ ನಮ್ಮೊಡಲ ಕೂಡಿ
ಓಡಿಸಿತು ಕವಿದ ಕಾರ್ಮೋಡಗಳನು

ದಿವ್ಯ ಜ್ಯೋತಿಯ ಹೊಲವು ಶರಣ ಛಲವು
ಸತ್ವ ಸಾತ್ವಿಕತೆಯ ನಾಂದಿ ಬಲದ ಮಂದಿರ ಭೇರಿ
ಮುಗಿಲು ಇಲ್ಲದ ಗಗನ ತಿಂಗಳನ ಇರವು
ಮಾಯೆ ಹೊದ್ದದ ಮನವು ವಿಶ್ವಾತ್ಮಿ ಪರಮಾತ್ಮನಕೇರಿ

ಶರಣ ಚರಣದ ವರ್ಣ ಬಸವಣ್ಣ ಹೇಳಿ
ಭವವೇಶ ಪಾಶವನು ನಾಶಮಾಡೆಮ್ಮ ತಂದನಿಲ್ಲಿ
ಸವಿ ತಿರುಳ ವಿಷ ಒಡಲ ವೈಚಿತ್ರ ಹೇಳಿ
ನೈಜ ಜ್ಯೋತಿಯನಿತ್ತು ಬಾ ಇತ್ತ ಎಂದು ಕರೆದನಲ್ಲಿ

ಕಿರಿ ಹೃದಯ ಕಲ್ಮಿಷ ಘೋರ ಗವಿಯಲಿ
ನುಸುಳಿ ಬಂದೆಮ್ಮ ಕಿವಿಯೊಳುಸುರಿದ ವಚನವ
ಬಲ ಬಂಧನ ವ್ಯೂಹ ಝಾಡ್ಯದಲಿ
ಮೌಢ್ಯತೆಯ ಮುರಿದೊತ್ತಿ ಎತ್ತುವನೆನ್ನ ಬಸವ

ಹಗಲು ಶಖೆಯಾಗಿ ಇರುಳು ಭಯವಾಗಿ
ಮಾಗದಾ ಘಾಯ ಮಾಡಿಹುದು ಕಾಯಕಾಮಾಯ
ಮದ್ದು ಇನ್ನೆಲ್ಲಿ ? ಓ ಕಾಣದಾ ಯೋಗಿ
ಇಹುದು ಬಾರಲ್ಲಿ; ಬಸವ ನುಡಿಯಲ್ಲಿ ನೈಜ ಧೈಯ !

ಚುಕ್ಕೆ ಲತೆಯಾಗಿ, ರವಿಯ ಫಲವಾಗಿ
ಹೂವು ಚಂದಿರನಾಗಿ, ನೆಲನೀರು ಶಾಮ ಮುಗಿಲಾಗಿ
ಮಿನುಗು ಮರುಗು ಜೀವನವು ಮಿಂಚಾಗಿ
ಹೊಂಚಿ ಸಿಡಿಲನು ಹೊಡೆಯುವದದೋ ಮಾಯ ಕೂಗಿ

ರೇಗಿ ಎದ್ದಿಹ ರುಚಿಗೆ ನೀಗಿ ಬಿದ್ದಿದೆ ಶಕ್ತಿ
ಬಲವಾಗು ಬಾ ಮೊದಲು ಹೃದಯ ಹದವಾಗಿ ಮಾಡು
ಜನ್ಮ ಸಾರ್ಥಕತೆಯ ನೈಜ ಮುಕ್ತಿ
ಆ ಮಾರ್ಗ ಬಸವಣ್ಣ ನುಡಿದ ವಚನ ನೋಡು
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...