Home / ಕವನ / ಕವಿತೆ / ನಾರಿಯರ ವಿಸ್ತರಿಸಿ ಸಾರಶಾಸ್ತ್ರ ಪೂರವಿಸಿ

ನಾರಿಯರ ವಿಸ್ತರಿಸಿ ಸಾರಶಾಸ್ತ್ರ ಪೂರವಿಸಿ

ನಾರಿಯರ ವಿಸ್ತರಿಸಿ ಸಾರಶಾಸ್ತ್ರ ಪೂರವಿಸಿ
ಪಾರಗಾಣಲಿಲ್ಲ ಪಾಪದ ಕುಂಡಾ
ಘೋರನರಕದಿ ನೀವು ಜಾರಿಬಿದ್ದು ಹೊರಳುವಾಗ್ಗೆ
ಸೇರದಾಯಿತು ಈ ಬ್ರಹ್ಮಾಂಡ
ಪಿಂಡ ರಕ್ತ ಮಾಂಸ ಚರ್ಮ ಹೇಸಿಕೆಯ ಕಾಣಲಾಗಿ
ಅದಕಂತೀರಿ ಬಾಳಿಯ ದಿಂಡಾ
ತೋಳ ತೋಡಿ ನಾಭಿ ಸುಳಿ ಹಾಳುಗುಂಡಿ
ಮೇಲು ಕುಚದುಂಡ ಹೆಂಡಿ ಹೊಲಸಿನ ಕೈಚಂಡಾ
ದೂರದಿಂದ ನೋಡಿದರೆ ವಾರಿಜಾಕ್ಷಿ ಅನ್ನುವದೆಲ್ಲ
ನೀರಗಣ್ಣು ಪಿಚ್ಚ ಹೊಲಸಿನ ರುಂಡಾ
ಧಾರುಣಿಯ ಕವಿಗಳೆಲ್ಲ ಗಾರುಗೊಂಡು
ಹೀರಿಕೊಂಡು ಚಲ್ಲುತದೆ ಬಹುದೂರ ಚಂಡ ಮುಂಡಾ
||ಇಳವು||
ಪರಿಗೂಳಿಸಿ ಪೃಥ್ವಿ ನವಖಂಡಾ
ಅರಿಯದಲೆ ಉಸುರಿದವ ಬಂಡಾ
ಸರಿಯಹುದೆ ಸಮಾಸದಿ ತಂಡಾ
ಅರಿಕಿಲ್ಲದಾಯಿತೆ ಉದ್ಧಂಡಾ
||ಏರು||
ಆರಿಗ್ಹೇಳಿದರೂ ಇದು ತೀರಲಿಲ್ಲ ತಿಳಿಬುದ್ಧಿ
ತೋರಿಕೊಡುವೆನು ವೇದದಿ ಪುಂಡಾ
ದಾರಿಕಾರರ ಮಾತಲ್ಲಾ ದೂರ ತಿಳಿ ಮನದೊಳು
ಮಾರಿರೂಪ ನಾರಿ ನರಕದ ತಂಡಾ || ೧ ||

ನಾಡಿಗಲ್ಲ ಅಧಿಕಾದ ರೂಢಿಯೊಳು ಮಲಹಣ
ನೋಡಿ ನೋಡಿ ಸ್ತ್ರೀಯೊಳು ಮೋಹವಿಟ್ಟು
ಬ್ಯಾಡರಾಕಿ ಸಿಂಗರಿಸಿ ಹಾಡಿಕೊಂಡು ಹಲಬುತ
ಪಾಡಗಾಣಲಿಲ್ಲ ಇದಕವಬ್ರಷ್ಟಾ

ನೋಡಿ ಪರಶಿವ ಅವನ
ಕೇಡು ನುಡಿ ಕೇಳಲಾಗಿ
ರೂಢಿ ತಳಕ್ಕೆ ದೂಡಿ ನೂಕಿಸಿ ಬಿಟ್ಟ
ಆಡಲೇನು ಇಂಥ ಕವಿತ
ಬೇಡವಾಯ್ತಣ್ಣ ಹರಗೆ
ಕಾಡ ಕುಲದೊಳುಹೋಗಿ ಕುಲಗೆಟ್ಟ
||ಇಳವು||
ಹಂಗಸರ ವರ್ಣಿಸುವ ಮೂರ್ಖಾ
ವರ್ಣಶಾಸ್ತ್ರದ ಸಿಂಗರದ ತರ್ಕಾ
ಪದದಲ್ಲಿ ಇವನಿಗೇನರ್ಕಾ
ಯಮರಾಜನ ಕೈಯೊಳಗಿರ್ಕಾ
||ಏರು||
ಹೆಣ್ಣು ಜಾತಿಯ ವಿಸ್ತರಿಸಿ
ಕಣ್ಣು ಕಾಣಲಿಲ್ಲ ಕವಿ
ಬಣ್ಣಗೆಟ್ಟು ಬೊಗಳುವ ಬಲುಭಂಡಾ
ಸಣ್ಣಸಿತು ವೇದಶಾಸ್ತ್ರ ಬಣ್ಣಿಸಲು ಸವನಲ್ಲಾ
ಪುಣ್ಯಗೊಡಲಿಲ್ಲ ಪೂರ್ವದ ಭಂಡಾ ||೨||

ಒಲ್ಲೆನೆಂದ್ರೆ ಮ್ಯಾಲೆಬಿದ್ದು
ಜುಲುಮೆಯಿಂದ ಜೋಲಿಹೊಡೆದು
ಕೆಡವಿಬಿಟ್ಟಳು ಕಟ್ಟಿಚಲ್ಲಿದ್ಹಾಂಗೆ
ಸೋಲದವರ‍್ಯಾರು ಹೆಣ್ಣ
ಜಾಲತನಕಣಿಯುಂಟೆ
ಹೇಳತಾರ ಕಂಡ ಹಿರಿಯರು ನಮಗೆ
ಕೇಳಿಕೊಂಡು ನಿನ್ನ ನಂಬಿ
ಬಾಳಮಂದಿ ಕೆಟ್ಟರ‍್ಹಿಂಗ
ತೋಳತಿರುವುತ ಎದ್ದು ಬರುವಾಗ್ಗೆ
ತಾಳಲಾರದೆ ಯತಿಗಳು ತಪಗೆಟ್ಟು ವೃತಗೆಟ್ಟು
ಆಲ್ಪರಿಯುತ ಬಳಲುವರ‍್ಹಿಂಗ
ಹಲವು ಶಾಸ್ತ್ರ ವೇದ ಮಂತ್ರ ಕಲಿತಂಥ ಕವಿಗಳ
ಜಾಳಮಾಡಿಬಿಟ್ಟಿತು ಜಗದಾಗ
ಜಲಜಾಕ್ಷಿ ಜಪಿಸುತ ಗಾಳದಾಗ ಕಲಹದೊಳು
ಚಾಳದಪ್ಪಿ ಬಿದ್ದ ಮೀನದ ಹಾಂಗೆ
||ಇಳವು||
ಮೂರುಲೋಕ ಕೆಟ್ಟವು ನಿನಗಾಗಿ
ಬೆನ್ನುಹತ್ತಿ ಬರುತಾವೇ ಭವರೋಗಿ
ಮ್ಯಾಳಗೊಂಡು ಮೆರಿತಿ ಮನಸಾಗಿ
ಸೋಲದಾಯ್ತು ವಿಷಯ ಸುಖಭೋಗಿ
||ಏರು||

ಕಾಳಕೂಟಕತ್ತಲೊಳು ಗೋಳಿಟ್ಟು ಕೂಗುತದೆ
ಹೇಳಲಾರೆ ನಾನು ಗಾಣದೆತ್ತಿನ ಹಾಗೆ
ಮೇಲುಗ್ರಾಮ ಶಿಶುನಾಳಧೀಶನನೊಲುಮೆ ಇರಲಿಕ್ಕೆ
ಬೀಳಬಾರದು ಹೆಂಗಸರ ಬಲಿಯೊಳಗೆ || ೩ ||
*****

 

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...