ನಾರಿಯರ ವಿಸ್ತರಿಸಿ ಸಾರಶಾಸ್ತ್ರ ಪೂರವಿಸಿ

ನಾರಿಯರ ವಿಸ್ತರಿಸಿ ಸಾರಶಾಸ್ತ್ರ ಪೂರವಿಸಿ
ಪಾರಗಾಣಲಿಲ್ಲ ಪಾಪದ ಕುಂಡಾ
ಘೋರನರಕದಿ ನೀವು ಜಾರಿಬಿದ್ದು ಹೊರಳುವಾಗ್ಗೆ
ಸೇರದಾಯಿತು ಈ ಬ್ರಹ್ಮಾಂಡ
ಪಿಂಡ ರಕ್ತ ಮಾಂಸ ಚರ್ಮ ಹೇಸಿಕೆಯ ಕಾಣಲಾಗಿ
ಅದಕಂತೀರಿ ಬಾಳಿಯ ದಿಂಡಾ
ತೋಳ ತೋಡಿ ನಾಭಿ ಸುಳಿ ಹಾಳುಗುಂಡಿ
ಮೇಲು ಕುಚದುಂಡ ಹೆಂಡಿ ಹೊಲಸಿನ ಕೈಚಂಡಾ
ದೂರದಿಂದ ನೋಡಿದರೆ ವಾರಿಜಾಕ್ಷಿ ಅನ್ನುವದೆಲ್ಲ
ನೀರಗಣ್ಣು ಪಿಚ್ಚ ಹೊಲಸಿನ ರುಂಡಾ
ಧಾರುಣಿಯ ಕವಿಗಳೆಲ್ಲ ಗಾರುಗೊಂಡು
ಹೀರಿಕೊಂಡು ಚಲ್ಲುತದೆ ಬಹುದೂರ ಚಂಡ ಮುಂಡಾ
||ಇಳವು||
ಪರಿಗೂಳಿಸಿ ಪೃಥ್ವಿ ನವಖಂಡಾ
ಅರಿಯದಲೆ ಉಸುರಿದವ ಬಂಡಾ
ಸರಿಯಹುದೆ ಸಮಾಸದಿ ತಂಡಾ
ಅರಿಕಿಲ್ಲದಾಯಿತೆ ಉದ್ಧಂಡಾ
||ಏರು||
ಆರಿಗ್ಹೇಳಿದರೂ ಇದು ತೀರಲಿಲ್ಲ ತಿಳಿಬುದ್ಧಿ
ತೋರಿಕೊಡುವೆನು ವೇದದಿ ಪುಂಡಾ
ದಾರಿಕಾರರ ಮಾತಲ್ಲಾ ದೂರ ತಿಳಿ ಮನದೊಳು
ಮಾರಿರೂಪ ನಾರಿ ನರಕದ ತಂಡಾ || ೧ ||

ನಾಡಿಗಲ್ಲ ಅಧಿಕಾದ ರೂಢಿಯೊಳು ಮಲಹಣ
ನೋಡಿ ನೋಡಿ ಸ್ತ್ರೀಯೊಳು ಮೋಹವಿಟ್ಟು
ಬ್ಯಾಡರಾಕಿ ಸಿಂಗರಿಸಿ ಹಾಡಿಕೊಂಡು ಹಲಬುತ
ಪಾಡಗಾಣಲಿಲ್ಲ ಇದಕವಬ್ರಷ್ಟಾ

ನೋಡಿ ಪರಶಿವ ಅವನ
ಕೇಡು ನುಡಿ ಕೇಳಲಾಗಿ
ರೂಢಿ ತಳಕ್ಕೆ ದೂಡಿ ನೂಕಿಸಿ ಬಿಟ್ಟ
ಆಡಲೇನು ಇಂಥ ಕವಿತ
ಬೇಡವಾಯ್ತಣ್ಣ ಹರಗೆ
ಕಾಡ ಕುಲದೊಳುಹೋಗಿ ಕುಲಗೆಟ್ಟ
||ಇಳವು||
ಹಂಗಸರ ವರ್ಣಿಸುವ ಮೂರ್ಖಾ
ವರ್ಣಶಾಸ್ತ್ರದ ಸಿಂಗರದ ತರ್ಕಾ
ಪದದಲ್ಲಿ ಇವನಿಗೇನರ್ಕಾ
ಯಮರಾಜನ ಕೈಯೊಳಗಿರ್ಕಾ
||ಏರು||
ಹೆಣ್ಣು ಜಾತಿಯ ವಿಸ್ತರಿಸಿ
ಕಣ್ಣು ಕಾಣಲಿಲ್ಲ ಕವಿ
ಬಣ್ಣಗೆಟ್ಟು ಬೊಗಳುವ ಬಲುಭಂಡಾ
ಸಣ್ಣಸಿತು ವೇದಶಾಸ್ತ್ರ ಬಣ್ಣಿಸಲು ಸವನಲ್ಲಾ
ಪುಣ್ಯಗೊಡಲಿಲ್ಲ ಪೂರ್ವದ ಭಂಡಾ ||೨||

ಒಲ್ಲೆನೆಂದ್ರೆ ಮ್ಯಾಲೆಬಿದ್ದು
ಜುಲುಮೆಯಿಂದ ಜೋಲಿಹೊಡೆದು
ಕೆಡವಿಬಿಟ್ಟಳು ಕಟ್ಟಿಚಲ್ಲಿದ್ಹಾಂಗೆ
ಸೋಲದವರ‍್ಯಾರು ಹೆಣ್ಣ
ಜಾಲತನಕಣಿಯುಂಟೆ
ಹೇಳತಾರ ಕಂಡ ಹಿರಿಯರು ನಮಗೆ
ಕೇಳಿಕೊಂಡು ನಿನ್ನ ನಂಬಿ
ಬಾಳಮಂದಿ ಕೆಟ್ಟರ‍್ಹಿಂಗ
ತೋಳತಿರುವುತ ಎದ್ದು ಬರುವಾಗ್ಗೆ
ತಾಳಲಾರದೆ ಯತಿಗಳು ತಪಗೆಟ್ಟು ವೃತಗೆಟ್ಟು
ಆಲ್ಪರಿಯುತ ಬಳಲುವರ‍್ಹಿಂಗ
ಹಲವು ಶಾಸ್ತ್ರ ವೇದ ಮಂತ್ರ ಕಲಿತಂಥ ಕವಿಗಳ
ಜಾಳಮಾಡಿಬಿಟ್ಟಿತು ಜಗದಾಗ
ಜಲಜಾಕ್ಷಿ ಜಪಿಸುತ ಗಾಳದಾಗ ಕಲಹದೊಳು
ಚಾಳದಪ್ಪಿ ಬಿದ್ದ ಮೀನದ ಹಾಂಗೆ
||ಇಳವು||
ಮೂರುಲೋಕ ಕೆಟ್ಟವು ನಿನಗಾಗಿ
ಬೆನ್ನುಹತ್ತಿ ಬರುತಾವೇ ಭವರೋಗಿ
ಮ್ಯಾಳಗೊಂಡು ಮೆರಿತಿ ಮನಸಾಗಿ
ಸೋಲದಾಯ್ತು ವಿಷಯ ಸುಖಭೋಗಿ
||ಏರು||

ಕಾಳಕೂಟಕತ್ತಲೊಳು ಗೋಳಿಟ್ಟು ಕೂಗುತದೆ
ಹೇಳಲಾರೆ ನಾನು ಗಾಣದೆತ್ತಿನ ಹಾಗೆ
ಮೇಲುಗ್ರಾಮ ಶಿಶುನಾಳಧೀಶನನೊಲುಮೆ ಇರಲಿಕ್ಕೆ
ಬೀಳಬಾರದು ಹೆಂಗಸರ ಬಲಿಯೊಳಗೆ || ೩ ||
*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಲ್ಲುಗಡಗಿಯ ಒಳಗೆ ಹಕ್ಕಿ
Next post ಧನ್ಯವಾಯಿತು ಹುಟ್ಟು ಸಾವಿನಲ್ಲಿ

ಸಣ್ಣ ಕತೆ

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

  • ಬಿರುಕು

    ಚಂಪಾ ಹಾಲು ತುಂಬಿದ ಲೋಟ ಕೈಯಲ್ಲಿ ಹಿಡಿದು ಒಳಗೆ ಬಂದಳು. ಎಂದಿನಂತೆ ಮೇಜಿನ ಮೇಲಿಟ್ಟು ಮಾತಿಲ್ಲದೆ ಹೊರಟು ಹೋಗುತ್ತಿದ್ದ ಅವಳು ಹೊರಡುವ ಸೂಚನೆಯನ್ನೇ ತೋರದಿದ್ದಾಗ ಮೂರ್‍ತಿ ಬೆಚ್ಚಿ… Read more…

cheap jordans|wholesale air max|wholesale jordans|wholesale jewelry|wholesale jerseys