Home / ಕವನ / ಕವಿತೆ / ನಾರಿಯರ ವಿಸ್ತರಿಸಿ ಸಾರಶಾಸ್ತ್ರ ಪೂರವಿಸಿ

ನಾರಿಯರ ವಿಸ್ತರಿಸಿ ಸಾರಶಾಸ್ತ್ರ ಪೂರವಿಸಿ

ನಾರಿಯರ ವಿಸ್ತರಿಸಿ ಸಾರಶಾಸ್ತ್ರ ಪೂರವಿಸಿ
ಪಾರಗಾಣಲಿಲ್ಲ ಪಾಪದ ಕುಂಡಾ
ಘೋರನರಕದಿ ನೀವು ಜಾರಿಬಿದ್ದು ಹೊರಳುವಾಗ್ಗೆ
ಸೇರದಾಯಿತು ಈ ಬ್ರಹ್ಮಾಂಡ
ಪಿಂಡ ರಕ್ತ ಮಾಂಸ ಚರ್ಮ ಹೇಸಿಕೆಯ ಕಾಣಲಾಗಿ
ಅದಕಂತೀರಿ ಬಾಳಿಯ ದಿಂಡಾ
ತೋಳ ತೋಡಿ ನಾಭಿ ಸುಳಿ ಹಾಳುಗುಂಡಿ
ಮೇಲು ಕುಚದುಂಡ ಹೆಂಡಿ ಹೊಲಸಿನ ಕೈಚಂಡಾ
ದೂರದಿಂದ ನೋಡಿದರೆ ವಾರಿಜಾಕ್ಷಿ ಅನ್ನುವದೆಲ್ಲ
ನೀರಗಣ್ಣು ಪಿಚ್ಚ ಹೊಲಸಿನ ರುಂಡಾ
ಧಾರುಣಿಯ ಕವಿಗಳೆಲ್ಲ ಗಾರುಗೊಂಡು
ಹೀರಿಕೊಂಡು ಚಲ್ಲುತದೆ ಬಹುದೂರ ಚಂಡ ಮುಂಡಾ
||ಇಳವು||
ಪರಿಗೂಳಿಸಿ ಪೃಥ್ವಿ ನವಖಂಡಾ
ಅರಿಯದಲೆ ಉಸುರಿದವ ಬಂಡಾ
ಸರಿಯಹುದೆ ಸಮಾಸದಿ ತಂಡಾ
ಅರಿಕಿಲ್ಲದಾಯಿತೆ ಉದ್ಧಂಡಾ
||ಏರು||
ಆರಿಗ್ಹೇಳಿದರೂ ಇದು ತೀರಲಿಲ್ಲ ತಿಳಿಬುದ್ಧಿ
ತೋರಿಕೊಡುವೆನು ವೇದದಿ ಪುಂಡಾ
ದಾರಿಕಾರರ ಮಾತಲ್ಲಾ ದೂರ ತಿಳಿ ಮನದೊಳು
ಮಾರಿರೂಪ ನಾರಿ ನರಕದ ತಂಡಾ || ೧ ||

ನಾಡಿಗಲ್ಲ ಅಧಿಕಾದ ರೂಢಿಯೊಳು ಮಲಹಣ
ನೋಡಿ ನೋಡಿ ಸ್ತ್ರೀಯೊಳು ಮೋಹವಿಟ್ಟು
ಬ್ಯಾಡರಾಕಿ ಸಿಂಗರಿಸಿ ಹಾಡಿಕೊಂಡು ಹಲಬುತ
ಪಾಡಗಾಣಲಿಲ್ಲ ಇದಕವಬ್ರಷ್ಟಾ

ನೋಡಿ ಪರಶಿವ ಅವನ
ಕೇಡು ನುಡಿ ಕೇಳಲಾಗಿ
ರೂಢಿ ತಳಕ್ಕೆ ದೂಡಿ ನೂಕಿಸಿ ಬಿಟ್ಟ
ಆಡಲೇನು ಇಂಥ ಕವಿತ
ಬೇಡವಾಯ್ತಣ್ಣ ಹರಗೆ
ಕಾಡ ಕುಲದೊಳುಹೋಗಿ ಕುಲಗೆಟ್ಟ
||ಇಳವು||
ಹಂಗಸರ ವರ್ಣಿಸುವ ಮೂರ್ಖಾ
ವರ್ಣಶಾಸ್ತ್ರದ ಸಿಂಗರದ ತರ್ಕಾ
ಪದದಲ್ಲಿ ಇವನಿಗೇನರ್ಕಾ
ಯಮರಾಜನ ಕೈಯೊಳಗಿರ್ಕಾ
||ಏರು||
ಹೆಣ್ಣು ಜಾತಿಯ ವಿಸ್ತರಿಸಿ
ಕಣ್ಣು ಕಾಣಲಿಲ್ಲ ಕವಿ
ಬಣ್ಣಗೆಟ್ಟು ಬೊಗಳುವ ಬಲುಭಂಡಾ
ಸಣ್ಣಸಿತು ವೇದಶಾಸ್ತ್ರ ಬಣ್ಣಿಸಲು ಸವನಲ್ಲಾ
ಪುಣ್ಯಗೊಡಲಿಲ್ಲ ಪೂರ್ವದ ಭಂಡಾ ||೨||

ಒಲ್ಲೆನೆಂದ್ರೆ ಮ್ಯಾಲೆಬಿದ್ದು
ಜುಲುಮೆಯಿಂದ ಜೋಲಿಹೊಡೆದು
ಕೆಡವಿಬಿಟ್ಟಳು ಕಟ್ಟಿಚಲ್ಲಿದ್ಹಾಂಗೆ
ಸೋಲದವರ‍್ಯಾರು ಹೆಣ್ಣ
ಜಾಲತನಕಣಿಯುಂಟೆ
ಹೇಳತಾರ ಕಂಡ ಹಿರಿಯರು ನಮಗೆ
ಕೇಳಿಕೊಂಡು ನಿನ್ನ ನಂಬಿ
ಬಾಳಮಂದಿ ಕೆಟ್ಟರ‍್ಹಿಂಗ
ತೋಳತಿರುವುತ ಎದ್ದು ಬರುವಾಗ್ಗೆ
ತಾಳಲಾರದೆ ಯತಿಗಳು ತಪಗೆಟ್ಟು ವೃತಗೆಟ್ಟು
ಆಲ್ಪರಿಯುತ ಬಳಲುವರ‍್ಹಿಂಗ
ಹಲವು ಶಾಸ್ತ್ರ ವೇದ ಮಂತ್ರ ಕಲಿತಂಥ ಕವಿಗಳ
ಜಾಳಮಾಡಿಬಿಟ್ಟಿತು ಜಗದಾಗ
ಜಲಜಾಕ್ಷಿ ಜಪಿಸುತ ಗಾಳದಾಗ ಕಲಹದೊಳು
ಚಾಳದಪ್ಪಿ ಬಿದ್ದ ಮೀನದ ಹಾಂಗೆ
||ಇಳವು||
ಮೂರುಲೋಕ ಕೆಟ್ಟವು ನಿನಗಾಗಿ
ಬೆನ್ನುಹತ್ತಿ ಬರುತಾವೇ ಭವರೋಗಿ
ಮ್ಯಾಳಗೊಂಡು ಮೆರಿತಿ ಮನಸಾಗಿ
ಸೋಲದಾಯ್ತು ವಿಷಯ ಸುಖಭೋಗಿ
||ಏರು||

ಕಾಳಕೂಟಕತ್ತಲೊಳು ಗೋಳಿಟ್ಟು ಕೂಗುತದೆ
ಹೇಳಲಾರೆ ನಾನು ಗಾಣದೆತ್ತಿನ ಹಾಗೆ
ಮೇಲುಗ್ರಾಮ ಶಿಶುನಾಳಧೀಶನನೊಲುಮೆ ಇರಲಿಕ್ಕೆ
ಬೀಳಬಾರದು ಹೆಂಗಸರ ಬಲಿಯೊಳಗೆ || ೩ ||
*****

 

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...