ಓ ಎನ್ನ ಸೋದರಿ !

ಓ ಎನ್ನ ಸೋದರಿ! ವೀರ ಭಾರತದ ನಾರಿ !
ಬಾ ಇಲ್ಲಿ ಹೊರಜಗಕೆ, ಶಾಂತಿ ಸಮತೆಯ ಎಡೆಗೆ
ಹೋಗುವಾ ನಾವೆಲ್ಲ ಗಗನ ಗಡಿಯ ಮೀರಿ
ಕರೆಯುತಿಹುದು ನೋಡಲ್ಲಿ ! ಬಾ ಭಾವಿನಾಡಿನೆಡೆಗೆ

ನಿನಗಂದರವರಾರು ಅಬಲೆ ನೀನಿರುವಿ ಎಂದು
ಅರಿಯಲಾರರೇ ಆದಿ ಅವತಾರ ಶಕ್ತಿ ಯಾರು ?
ಕೂರಸಿಗಳಾಟೋಪದಲಿ ಇದಿರಾದರಾರು ಅಂದು
ನಿನ್ನ ನೀ ತಿಳಿದು ಏಳು, ನಿನ್ನ ಆ ಹೃದಯವೆಮಗೆ ತೋರು

ಸಹನೆ ಸಹಕಾರ ಶಾಂತಿ ದೀಪ್ತಿಯ ಜ್ಯೋತಿ
ಹೃದಯ ತೈಲ ಹಾಕುತೆ ನಾಡದೀವಿಗೆ ಪ್ರಜ್ವಲಿಸಲಿ
ಎನ್ನ ಸೋದರಿ ನೀನು; ಕೂಡಿ ನಡೆ ಸುಮತಿ
ಭಾರತಾಂಬೆಯ ವೀರಮಕ್ಕಳ ಬಾಳು ಬೆಳಗಲಿ

ಮನೆಯ ಕೋಣೆಯ ಮರೆಯ ಸೆರೆಯಲ್ಲಿ !
ಒಲೆಯ ಮುಂದಣ ಝಳವೆ ನಿನ್ನದೋ ನೆಲೆಯು ?
ನಿನ್ನ ಕಲೆಯಲ್ಲಿ ಬಲಿಯಾಗಿಹುದೇನು ಅಲ್ಲಿ
ಓ ನಿಲ್ಲದಿರು ನಿಂತಲ್ಲಿ, ಕೇಳದೋ ಭಾರತಿಯ ಕರೆಯು !

ಮಿಂಚಿ ಮೇಲೇಳು; ನಿನ್ನ ಹೃದಯ ಹೇಳು
ನಿನ್ನೊಳಡಗಿದ ಸತ್ವ ಸತ್ಯದಾಗರವನರುಹು
ಮನವನಾವರಿಸಿಹ ಅಬಲತೆಯ ಶೀಳು
ನೀನಹುದು ಭಾವಿವಾಣಿಯ ನಾಂದಿ ಜೀವನ ಕುರುಹು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕನ್ನಡಮ್ಮ
Next post ಎಂಕು ಪಣಂಬೂರಿಗೆ

ಸಣ್ಣ ಕತೆ

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…

  • ವಲಯ

    ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

  • ಕರಿ ನಾಗರಗಳು

    ಚಿತ್ರ: ಆಂಬರ್‍ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್‌ ನೀರು ಹರಿಯುತ್ತಿದ್ದ… Read more…