Home / ಕವನ / ಕವಿತೆ / ಓ ಎನ್ನ ಸೋದರಿ !

ಓ ಎನ್ನ ಸೋದರಿ !

ಓ ಎನ್ನ ಸೋದರಿ! ವೀರ ಭಾರತದ ನಾರಿ !
ಬಾ ಇಲ್ಲಿ ಹೊರಜಗಕೆ, ಶಾಂತಿ ಸಮತೆಯ ಎಡೆಗೆ
ಹೋಗುವಾ ನಾವೆಲ್ಲ ಗಗನ ಗಡಿಯ ಮೀರಿ
ಕರೆಯುತಿಹುದು ನೋಡಲ್ಲಿ ! ಬಾ ಭಾವಿನಾಡಿನೆಡೆಗೆ

ನಿನಗಂದರವರಾರು ಅಬಲೆ ನೀನಿರುವಿ ಎಂದು
ಅರಿಯಲಾರರೇ ಆದಿ ಅವತಾರ ಶಕ್ತಿ ಯಾರು ?
ಕೂರಸಿಗಳಾಟೋಪದಲಿ ಇದಿರಾದರಾರು ಅಂದು
ನಿನ್ನ ನೀ ತಿಳಿದು ಏಳು, ನಿನ್ನ ಆ ಹೃದಯವೆಮಗೆ ತೋರು

ಸಹನೆ ಸಹಕಾರ ಶಾಂತಿ ದೀಪ್ತಿಯ ಜ್ಯೋತಿ
ಹೃದಯ ತೈಲ ಹಾಕುತೆ ನಾಡದೀವಿಗೆ ಪ್ರಜ್ವಲಿಸಲಿ
ಎನ್ನ ಸೋದರಿ ನೀನು; ಕೂಡಿ ನಡೆ ಸುಮತಿ
ಭಾರತಾಂಬೆಯ ವೀರಮಕ್ಕಳ ಬಾಳು ಬೆಳಗಲಿ

ಮನೆಯ ಕೋಣೆಯ ಮರೆಯ ಸೆರೆಯಲ್ಲಿ !
ಒಲೆಯ ಮುಂದಣ ಝಳವೆ ನಿನ್ನದೋ ನೆಲೆಯು ?
ನಿನ್ನ ಕಲೆಯಲ್ಲಿ ಬಲಿಯಾಗಿಹುದೇನು ಅಲ್ಲಿ
ಓ ನಿಲ್ಲದಿರು ನಿಂತಲ್ಲಿ, ಕೇಳದೋ ಭಾರತಿಯ ಕರೆಯು !

ಮಿಂಚಿ ಮೇಲೇಳು; ನಿನ್ನ ಹೃದಯ ಹೇಳು
ನಿನ್ನೊಳಡಗಿದ ಸತ್ವ ಸತ್ಯದಾಗರವನರುಹು
ಮನವನಾವರಿಸಿಹ ಅಬಲತೆಯ ಶೀಳು
ನೀನಹುದು ಭಾವಿವಾಣಿಯ ನಾಂದಿ ಜೀವನ ಕುರುಹು
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...