ಮೇಲು-ಕೀಳು

ಬೇವು ವಿಷವಾದೊಡೆ ಅದರ ನೆರಳು ವಿಷವೇ ?
ಮಾವು ರುಚಿಯಾದೊಡೇನದರ ನೆರಳು ರುಚಿಯೇ ?
ಕೀಳು ಹೊಲೆಯನೆನಲು ಹಿರಿಮೆಗೆ ಸಾವೇ ?
ಸಿರಿವ ಸಿರಿಯಾದೊಡೇ ಶೀಲದಲಿ ಸಿರಿಯೇ ?

ತಿನಲಾಗದು ಬಲುಕೀಳು ಹುಲ್ಲೆನಲು ಸಲ್ಲುವದೇ ?
ಬಿಡಲಾಗದು ಸಿಹಿ ಕಬ್ಬೆನಲದನೆ ಮೆಲಬಹುದೇ ?
ಹೊಲೆಯ ಹೊಲಸೆನಲು ಮಿಗಿದೆಲ್ಲ ಹಸನವಹುದೇ?
ಶ್ರೇಷ್ಟ ಕುಲಜರಿರಲು ಮಾನವ ಕರುಳ ಕಾಣಲರಿಯನೇ ?

ಕೆಸರೊಳುದಿಸಿದ ಕಮಲ ಸಲ್ಲದೇ ಆ ಈಶ್ವರಗೆ ?
ನಿಲುಕದಾಕಾಶ ಮಲ್ಲಿಗೆ ಏಸು ಲೇಸಾದರೆ ಏಕೆ ?
ಹೊಲೆಯ ಕೀಳೆನಲು ಮಾನವತೆಗೆ ಹೊರಗೆ ?
ಮರುಗದಾ ಅದಾವ ದೊರೆಯಾದೊಡೆ ಬೇಕೆ ಜಗಕ್ಕೆ ?

ಕೇರಿ ಹೊಲೆಯನಲು ಹೊಲೆಯನಾ ಹರಯಾರು ?
ಒಳ್ಳೆಯವರು ನಾವೆನಲು ನಮ್ಮನುದಿಸಿದವನಾರು ?
ಅವನಿಗಾರು ? ಎಮಗಾರು? ದೇವನೋ ನೂರಾರು ?
ಅರಿಯುವಾ ಮರೆಯದೇ ನಾವೆಲ ಮಾನವರು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬರ
Next post ಜೆಂಡರ್

ಸಣ್ಣ ಕತೆ

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…