ಮೇಲು-ಕೀಳು

ಬೇವು ವಿಷವಾದೊಡೆ ಅದರ ನೆರಳು ವಿಷವೇ ?
ಮಾವು ರುಚಿಯಾದೊಡೇನದರ ನೆರಳು ರುಚಿಯೇ ?
ಕೀಳು ಹೊಲೆಯನೆನಲು ಹಿರಿಮೆಗೆ ಸಾವೇ ?
ಸಿರಿವ ಸಿರಿಯಾದೊಡೇ ಶೀಲದಲಿ ಸಿರಿಯೇ ?

ತಿನಲಾಗದು ಬಲುಕೀಳು ಹುಲ್ಲೆನಲು ಸಲ್ಲುವದೇ ?
ಬಿಡಲಾಗದು ಸಿಹಿ ಕಬ್ಬೆನಲದನೆ ಮೆಲಬಹುದೇ ?
ಹೊಲೆಯ ಹೊಲಸೆನಲು ಮಿಗಿದೆಲ್ಲ ಹಸನವಹುದೇ?
ಶ್ರೇಷ್ಟ ಕುಲಜರಿರಲು ಮಾನವ ಕರುಳ ಕಾಣಲರಿಯನೇ ?

ಕೆಸರೊಳುದಿಸಿದ ಕಮಲ ಸಲ್ಲದೇ ಆ ಈಶ್ವರಗೆ ?
ನಿಲುಕದಾಕಾಶ ಮಲ್ಲಿಗೆ ಏಸು ಲೇಸಾದರೆ ಏಕೆ ?
ಹೊಲೆಯ ಕೀಳೆನಲು ಮಾನವತೆಗೆ ಹೊರಗೆ ?
ಮರುಗದಾ ಅದಾವ ದೊರೆಯಾದೊಡೆ ಬೇಕೆ ಜಗಕ್ಕೆ ?

ಕೇರಿ ಹೊಲೆಯನಲು ಹೊಲೆಯನಾ ಹರಯಾರು ?
ಒಳ್ಳೆಯವರು ನಾವೆನಲು ನಮ್ಮನುದಿಸಿದವನಾರು ?
ಅವನಿಗಾರು ? ಎಮಗಾರು? ದೇವನೋ ನೂರಾರು ?
ಅರಿಯುವಾ ಮರೆಯದೇ ನಾವೆಲ ಮಾನವರು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬರ
Next post ಜೆಂಡರ್

ಸಣ್ಣ ಕತೆ

  • ತನ್ನೊಳಗಣ ಕಿಚ್ಚು

    ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…

  • ಎರಡು ಪರಿವಾರಗಳು

    ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…