Home / ಕವನ / ಕವಿತೆ / ಕಾಮ ಇಲ್ಲದ ಮುಂಚೆ

ಕಾಮ ಇಲ್ಲದ ಮುಂಚೆ

ಕಾಮ ಇಲ್ಲದ ಮುಂಚೆ ಕಾಮ ಆದಿಯಲ್ಲಿ
ಕಾಮಶಾಸ್ತ್ರ ಯಾವಲ್ಲಿತ್ತು
ಕಾಮ ಸುಟ್ಟು ಬಹು ಕಷ್ಟವಾಯಿತು
ರತಿದೇವಿಗೆ ಬಂದಿತು ಹೊತ್ತು
ಭೂಮಿಯೊಳಗ ಆತಿ ಕೌತುಕವಾಯಿತು
ಆ ಮಹಾದೇವರು ಬ್ಯಾಸತ್ತು
ನೇಮ ಹಿಡಿದು ಆ ಹೇಮಕೂಟದಲಿ
ತಾನು ರಹಿತ ಒಂಭತ್ತು ಹೇಮಕೂಟದಲಿ
ಉತ್ಕರಿಸುತ ನದಿ ಭೀಮನಾಂಗ ನೋಡಿ ಬಂದಿತು
ಕ್ಷೇಮದಿಂದ ಸಂಚಾರವು ತಿಳಿಯಲು
ಈ ಮಹಿಮೆ ಯಾರಿಗೆ ಗೊತ್ತು

||ಇಳವು||
ರತಿದೇವಿಯೆಂಬು ಐದು ಅಕ್ಷರಾ
ಮತಿಗೆಟ್ಟು ನಾನಾವಿಕಾರಾ
ಜತಿಗೂಡಿ ಮೆರೆವ ವಿಸ್ತಾರಾ
ಕ್ಷಿತಿಯೊಳಗೆ ಆತೋ ವಿಕಾರಾ
ಸತಿ ಪುರುಷರು ಇಬ್ಬರು ಜರಾ
ಪ್ರತಿಭೂಮಿ ಇರುವದು ಚಮತ್ಕಾರಾ

||ಏರು||
ವೀರ ಪುರುಷರು ವಿಧ್ವಂಸಕ ನೇತ್ರರು
ಸತಿ ಪುರುಷರು ಇಬ್ಬರು ಜತ್ತು
ಕಾಮ ಸುಟ್ಟು ಬಹು ಕಷ್ಟವಾಯಿತು
ರತಿದೇವಿಗೆ ಬಂದಿತು ಹೊತ್ತು ||೧||

ನಾಗಲಿಂಗ ಆಲಿಂಗನ ಕೊಟ್ಟರೆ
ಈಗ ಆತು ಪದ್ಮಿನಿಗೆ ಸುಖಭೋಗ
ವಿಷಯದಾಗ ಮುಖವಿಲ್ಲದೆ ಈ
ಹಸ್ತಿನಿಕಾಲೊಳು ಆತೋ ಸುಖಾ
ಈಗ ಪುರುಷಜಾತಿಗಳು ಮೋಹಿಸಿ
ಮಾನಿನಿಯರು ನೋಡತಾರೋ ಮುಖಾ
ರೋಗ ಬಲಿದು ಏಕಾಗಿ ಅಂದದಿ
ತೆಕ್ಕಿಯೊಳಗೆ ಅಪ್ಪುವದು ಜೋಕಾ
ಸಾರಮನಸ್ಸು ಸಂಯೋಗನಿದ್ರಿ ಕುಚದಾ
ಗಿರಿಯಲಿ ಮಲಗೋದು ಠೀಕಾ
ಮ್ಯಾಗಬಿದ್ದು ಮಾತಾಡಲು ಮನ್ಮಥಾ
ದಾಗರಿಸುತ ನಗುತಿಹನ್ಯಾಕೆ

||ಇಳವು||
ಸಾಗಲಿಕ್ಕೆ ಪಶ್ಚಿಮದ ಭಾಗ
ಅಲ್ಲೇ ಇಡಬೇಕು ಕೈ ಅದರೂಳಗಾ
ಚಾಗನ ಉತ್ತರದ ಲಾಗಾ
ಇರಬೇಕು ದಕ್ಷಿಣದ ತ್ಯಾಗಾ
ಸೋಗಿತಿ ಪೂರ್ವದ ಯೋಗಾ
ತೂಗ್ಯಾಡು ಅನಕಾ ಸಂಯೋಗಾ

||ಏರು||
ಆಗ ಹಿಡಿದು ಅಧರಾಮೃತ ಸವಿಯಲು
ಶ್ರೀ ಗಿರಿಯಲಿ ಉದರಿತ ಮುತ್ತು
ಕಾಮ ಸುಟ್ಟು ಕಷ್ಟವಾಯಿತು ||೨||

ಚಿತ್ತಿನಿ ಜಾತಿಗೆ ಹಸ್ತವು ಮೇಲು
ಹತ್ತಿಪ್ಪತ್ತು ಹಿಡಿ ಹನ್ನೊಂದು ಗೆರಿ
ಹಸ್ತಿನಿ ಮುಖಮಂಡಲ ಕಪೋಲಕ
ಮಸ್ತಕದೊಳಗಿನ ನೀರ ಕೆರಿ
ಉತ್ತಮ ಪದ್ಮಿನಿ ಮತ್ತ ನೋಡಲು
ಎತ್ತಿ ಕಣ್ಣು ಕೈಬೀಸಿ ಕರಿ
ಚಿತ್ತಜನಕರ ಹಸ್ತಿನಿ ಶಂಕಿನಿ
ಮುತ್ತಿಹೊಡೆದರು ಮಾಯಮಾಡಿ
ಮುತ್ತಿಗಾಯಿತಲ್ಲಾ ಮೈಸೂರು ಸೀಮೆಗೆ
ರತ್ನ ಮೇಲೆ ಶಿಶುಪೇಚು ಗರಿ
ಕುಸ್ತಿ ಇಟ್ಟು ಕರಮಸ್ತಕ ಮುಚ್ಚಲು
ಅಳಿಸಿಹೋಯಿತು ಅತಿಲ್ಕವರಿ

||ಇಳವು||
ವಿಸ್ತರವು ಕಾಮಶಾಸ್ತ್ರದಲಿ
ಚಿತ್ತಿರಬೇಕು ಸೂರತದ ಲೀಲಿ
ಗೊತ್ತಿಟ್ಟು ಪ್ರೀತಿ ಧರ್ಮದಲಿ
ಮುತ್ತಿನ ಜ್ಯೋತಿ ರತ್ನದಲಿ

|| ಏರು||
ಸತ್ಯ ಶಿಶುನಾಳಧೀಶನ ಸೇವಕ
ಮತ್ತೆ ಹೇಳಿದ ಮಾತಿನ ಗೊತ್ತು
ಕಾಮಸುಟ್ಟು ಕಷ್ಟವಾಯಿತು
ರತಿದೇವಿಗೆ ಬಂದೀತು ಹೊತ್ತು ||೩||
*****

 

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...