Home / ಕವನ / ಕವಿತೆ / ಕಾಮ ಇಲ್ಲದ ಮುಂಚೆ

ಕಾಮ ಇಲ್ಲದ ಮುಂಚೆ

ಕಾಮ ಇಲ್ಲದ ಮುಂಚೆ ಕಾಮ ಆದಿಯಲ್ಲಿ
ಕಾಮಶಾಸ್ತ್ರ ಯಾವಲ್ಲಿತ್ತು
ಕಾಮ ಸುಟ್ಟು ಬಹು ಕಷ್ಟವಾಯಿತು
ರತಿದೇವಿಗೆ ಬಂದಿತು ಹೊತ್ತು
ಭೂಮಿಯೊಳಗ ಆತಿ ಕೌತುಕವಾಯಿತು
ಆ ಮಹಾದೇವರು ಬ್ಯಾಸತ್ತು
ನೇಮ ಹಿಡಿದು ಆ ಹೇಮಕೂಟದಲಿ
ತಾನು ರಹಿತ ಒಂಭತ್ತು ಹೇಮಕೂಟದಲಿ
ಉತ್ಕರಿಸುತ ನದಿ ಭೀಮನಾಂಗ ನೋಡಿ ಬಂದಿತು
ಕ್ಷೇಮದಿಂದ ಸಂಚಾರವು ತಿಳಿಯಲು
ಈ ಮಹಿಮೆ ಯಾರಿಗೆ ಗೊತ್ತು

||ಇಳವು||
ರತಿದೇವಿಯೆಂಬು ಐದು ಅಕ್ಷರಾ
ಮತಿಗೆಟ್ಟು ನಾನಾವಿಕಾರಾ
ಜತಿಗೂಡಿ ಮೆರೆವ ವಿಸ್ತಾರಾ
ಕ್ಷಿತಿಯೊಳಗೆ ಆತೋ ವಿಕಾರಾ
ಸತಿ ಪುರುಷರು ಇಬ್ಬರು ಜರಾ
ಪ್ರತಿಭೂಮಿ ಇರುವದು ಚಮತ್ಕಾರಾ

||ಏರು||
ವೀರ ಪುರುಷರು ವಿಧ್ವಂಸಕ ನೇತ್ರರು
ಸತಿ ಪುರುಷರು ಇಬ್ಬರು ಜತ್ತು
ಕಾಮ ಸುಟ್ಟು ಬಹು ಕಷ್ಟವಾಯಿತು
ರತಿದೇವಿಗೆ ಬಂದಿತು ಹೊತ್ತು ||೧||

ನಾಗಲಿಂಗ ಆಲಿಂಗನ ಕೊಟ್ಟರೆ
ಈಗ ಆತು ಪದ್ಮಿನಿಗೆ ಸುಖಭೋಗ
ವಿಷಯದಾಗ ಮುಖವಿಲ್ಲದೆ ಈ
ಹಸ್ತಿನಿಕಾಲೊಳು ಆತೋ ಸುಖಾ
ಈಗ ಪುರುಷಜಾತಿಗಳು ಮೋಹಿಸಿ
ಮಾನಿನಿಯರು ನೋಡತಾರೋ ಮುಖಾ
ರೋಗ ಬಲಿದು ಏಕಾಗಿ ಅಂದದಿ
ತೆಕ್ಕಿಯೊಳಗೆ ಅಪ್ಪುವದು ಜೋಕಾ
ಸಾರಮನಸ್ಸು ಸಂಯೋಗನಿದ್ರಿ ಕುಚದಾ
ಗಿರಿಯಲಿ ಮಲಗೋದು ಠೀಕಾ
ಮ್ಯಾಗಬಿದ್ದು ಮಾತಾಡಲು ಮನ್ಮಥಾ
ದಾಗರಿಸುತ ನಗುತಿಹನ್ಯಾಕೆ

||ಇಳವು||
ಸಾಗಲಿಕ್ಕೆ ಪಶ್ಚಿಮದ ಭಾಗ
ಅಲ್ಲೇ ಇಡಬೇಕು ಕೈ ಅದರೂಳಗಾ
ಚಾಗನ ಉತ್ತರದ ಲಾಗಾ
ಇರಬೇಕು ದಕ್ಷಿಣದ ತ್ಯಾಗಾ
ಸೋಗಿತಿ ಪೂರ್ವದ ಯೋಗಾ
ತೂಗ್ಯಾಡು ಅನಕಾ ಸಂಯೋಗಾ

||ಏರು||
ಆಗ ಹಿಡಿದು ಅಧರಾಮೃತ ಸವಿಯಲು
ಶ್ರೀ ಗಿರಿಯಲಿ ಉದರಿತ ಮುತ್ತು
ಕಾಮ ಸುಟ್ಟು ಕಷ್ಟವಾಯಿತು ||೨||

ಚಿತ್ತಿನಿ ಜಾತಿಗೆ ಹಸ್ತವು ಮೇಲು
ಹತ್ತಿಪ್ಪತ್ತು ಹಿಡಿ ಹನ್ನೊಂದು ಗೆರಿ
ಹಸ್ತಿನಿ ಮುಖಮಂಡಲ ಕಪೋಲಕ
ಮಸ್ತಕದೊಳಗಿನ ನೀರ ಕೆರಿ
ಉತ್ತಮ ಪದ್ಮಿನಿ ಮತ್ತ ನೋಡಲು
ಎತ್ತಿ ಕಣ್ಣು ಕೈಬೀಸಿ ಕರಿ
ಚಿತ್ತಜನಕರ ಹಸ್ತಿನಿ ಶಂಕಿನಿ
ಮುತ್ತಿಹೊಡೆದರು ಮಾಯಮಾಡಿ
ಮುತ್ತಿಗಾಯಿತಲ್ಲಾ ಮೈಸೂರು ಸೀಮೆಗೆ
ರತ್ನ ಮೇಲೆ ಶಿಶುಪೇಚು ಗರಿ
ಕುಸ್ತಿ ಇಟ್ಟು ಕರಮಸ್ತಕ ಮುಚ್ಚಲು
ಅಳಿಸಿಹೋಯಿತು ಅತಿಲ್ಕವರಿ

||ಇಳವು||
ವಿಸ್ತರವು ಕಾಮಶಾಸ್ತ್ರದಲಿ
ಚಿತ್ತಿರಬೇಕು ಸೂರತದ ಲೀಲಿ
ಗೊತ್ತಿಟ್ಟು ಪ್ರೀತಿ ಧರ್ಮದಲಿ
ಮುತ್ತಿನ ಜ್ಯೋತಿ ರತ್ನದಲಿ

|| ಏರು||
ಸತ್ಯ ಶಿಶುನಾಳಧೀಶನ ಸೇವಕ
ಮತ್ತೆ ಹೇಳಿದ ಮಾತಿನ ಗೊತ್ತು
ಕಾಮಸುಟ್ಟು ಕಷ್ಟವಾಯಿತು
ರತಿದೇವಿಗೆ ಬಂದೀತು ಹೊತ್ತು ||೩||
*****

 

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...