Home / ಕವನ / ಕವಿತೆ / ಕಾಮ ಇಲ್ಲದ ಮುಂಚೆ

ಕಾಮ ಇಲ್ಲದ ಮುಂಚೆ

ಕಾಮ ಇಲ್ಲದ ಮುಂಚೆ ಕಾಮ ಆದಿಯಲ್ಲಿ
ಕಾಮಶಾಸ್ತ್ರ ಯಾವಲ್ಲಿತ್ತು
ಕಾಮ ಸುಟ್ಟು ಬಹು ಕಷ್ಟವಾಯಿತು
ರತಿದೇವಿಗೆ ಬಂದಿತು ಹೊತ್ತು
ಭೂಮಿಯೊಳಗ ಆತಿ ಕೌತುಕವಾಯಿತು
ಆ ಮಹಾದೇವರು ಬ್ಯಾಸತ್ತು
ನೇಮ ಹಿಡಿದು ಆ ಹೇಮಕೂಟದಲಿ
ತಾನು ರಹಿತ ಒಂಭತ್ತು ಹೇಮಕೂಟದಲಿ
ಉತ್ಕರಿಸುತ ನದಿ ಭೀಮನಾಂಗ ನೋಡಿ ಬಂದಿತು
ಕ್ಷೇಮದಿಂದ ಸಂಚಾರವು ತಿಳಿಯಲು
ಈ ಮಹಿಮೆ ಯಾರಿಗೆ ಗೊತ್ತು

||ಇಳವು||
ರತಿದೇವಿಯೆಂಬು ಐದು ಅಕ್ಷರಾ
ಮತಿಗೆಟ್ಟು ನಾನಾವಿಕಾರಾ
ಜತಿಗೂಡಿ ಮೆರೆವ ವಿಸ್ತಾರಾ
ಕ್ಷಿತಿಯೊಳಗೆ ಆತೋ ವಿಕಾರಾ
ಸತಿ ಪುರುಷರು ಇಬ್ಬರು ಜರಾ
ಪ್ರತಿಭೂಮಿ ಇರುವದು ಚಮತ್ಕಾರಾ

||ಏರು||
ವೀರ ಪುರುಷರು ವಿಧ್ವಂಸಕ ನೇತ್ರರು
ಸತಿ ಪುರುಷರು ಇಬ್ಬರು ಜತ್ತು
ಕಾಮ ಸುಟ್ಟು ಬಹು ಕಷ್ಟವಾಯಿತು
ರತಿದೇವಿಗೆ ಬಂದಿತು ಹೊತ್ತು ||೧||

ನಾಗಲಿಂಗ ಆಲಿಂಗನ ಕೊಟ್ಟರೆ
ಈಗ ಆತು ಪದ್ಮಿನಿಗೆ ಸುಖಭೋಗ
ವಿಷಯದಾಗ ಮುಖವಿಲ್ಲದೆ ಈ
ಹಸ್ತಿನಿಕಾಲೊಳು ಆತೋ ಸುಖಾ
ಈಗ ಪುರುಷಜಾತಿಗಳು ಮೋಹಿಸಿ
ಮಾನಿನಿಯರು ನೋಡತಾರೋ ಮುಖಾ
ರೋಗ ಬಲಿದು ಏಕಾಗಿ ಅಂದದಿ
ತೆಕ್ಕಿಯೊಳಗೆ ಅಪ್ಪುವದು ಜೋಕಾ
ಸಾರಮನಸ್ಸು ಸಂಯೋಗನಿದ್ರಿ ಕುಚದಾ
ಗಿರಿಯಲಿ ಮಲಗೋದು ಠೀಕಾ
ಮ್ಯಾಗಬಿದ್ದು ಮಾತಾಡಲು ಮನ್ಮಥಾ
ದಾಗರಿಸುತ ನಗುತಿಹನ್ಯಾಕೆ

||ಇಳವು||
ಸಾಗಲಿಕ್ಕೆ ಪಶ್ಚಿಮದ ಭಾಗ
ಅಲ್ಲೇ ಇಡಬೇಕು ಕೈ ಅದರೂಳಗಾ
ಚಾಗನ ಉತ್ತರದ ಲಾಗಾ
ಇರಬೇಕು ದಕ್ಷಿಣದ ತ್ಯಾಗಾ
ಸೋಗಿತಿ ಪೂರ್ವದ ಯೋಗಾ
ತೂಗ್ಯಾಡು ಅನಕಾ ಸಂಯೋಗಾ

||ಏರು||
ಆಗ ಹಿಡಿದು ಅಧರಾಮೃತ ಸವಿಯಲು
ಶ್ರೀ ಗಿರಿಯಲಿ ಉದರಿತ ಮುತ್ತು
ಕಾಮ ಸುಟ್ಟು ಕಷ್ಟವಾಯಿತು ||೨||

ಚಿತ್ತಿನಿ ಜಾತಿಗೆ ಹಸ್ತವು ಮೇಲು
ಹತ್ತಿಪ್ಪತ್ತು ಹಿಡಿ ಹನ್ನೊಂದು ಗೆರಿ
ಹಸ್ತಿನಿ ಮುಖಮಂಡಲ ಕಪೋಲಕ
ಮಸ್ತಕದೊಳಗಿನ ನೀರ ಕೆರಿ
ಉತ್ತಮ ಪದ್ಮಿನಿ ಮತ್ತ ನೋಡಲು
ಎತ್ತಿ ಕಣ್ಣು ಕೈಬೀಸಿ ಕರಿ
ಚಿತ್ತಜನಕರ ಹಸ್ತಿನಿ ಶಂಕಿನಿ
ಮುತ್ತಿಹೊಡೆದರು ಮಾಯಮಾಡಿ
ಮುತ್ತಿಗಾಯಿತಲ್ಲಾ ಮೈಸೂರು ಸೀಮೆಗೆ
ರತ್ನ ಮೇಲೆ ಶಿಶುಪೇಚು ಗರಿ
ಕುಸ್ತಿ ಇಟ್ಟು ಕರಮಸ್ತಕ ಮುಚ್ಚಲು
ಅಳಿಸಿಹೋಯಿತು ಅತಿಲ್ಕವರಿ

||ಇಳವು||
ವಿಸ್ತರವು ಕಾಮಶಾಸ್ತ್ರದಲಿ
ಚಿತ್ತಿರಬೇಕು ಸೂರತದ ಲೀಲಿ
ಗೊತ್ತಿಟ್ಟು ಪ್ರೀತಿ ಧರ್ಮದಲಿ
ಮುತ್ತಿನ ಜ್ಯೋತಿ ರತ್ನದಲಿ

|| ಏರು||
ಸತ್ಯ ಶಿಶುನಾಳಧೀಶನ ಸೇವಕ
ಮತ್ತೆ ಹೇಳಿದ ಮಾತಿನ ಗೊತ್ತು
ಕಾಮಸುಟ್ಟು ಕಷ್ಟವಾಯಿತು
ರತಿದೇವಿಗೆ ಬಂದೀತು ಹೊತ್ತು ||೩||
*****

 

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...