ಸಾವಸುದ್ದಿ

ಇಂದು ಒಂದು ಕರಿಕಾಗೆ ಕೆರೆ ಅಂಚಿನ ನೀರಲ್ಲಿ
ಕತ್ತುವರೆಗೆ ಮುಳುಗುವುದು, ಮೇಲೆದ್ದು ರೆಕ್ಕೆ ಬಡಿಯುವುದು,
ಮತ್ತೆ ಮುಳುಗುವುದು, ಎದ್ದೆದ್ದು ರೆಕ್ಕೆ ಬಡಿಯುವುದು ಮಾಡುತ್ತಲೇ
ಇತ್ತು.
ಪ್ರಾಯಶಃ ಚೆನ್ನಾಗಿ ಸ್ನಾನ ಮಾಡಿ ಬಿಳೀ ಬೆಳ್ಳಕ್ಕಿಯಂತಾಗಿ
ಬಿಡಬೇಕೆಂಬ ಪ್ರಯತ್ನ-
ಖಂಡಿತಾ ಆಗದ ಮಾತು, ವ್ಯರ್ಥ ಮೈ ನೋಯಿಸಿಕೊಳ್ಳಬೇಡ
ಗಾಳಿಗುದ್ದಿ:
ಎಂದದಕ್ಕೆ ಹೇಳಬೇಕೆಂದುಕೊಳ್ಳುತ್ತಾ ಮನೆಗೆ
ಬರುವಷ್ಟರಲ್ಲೊಂದು ಸಾವಸುದ್ದಿ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬೆಳ್ಳಿ ಹಾಡಿತು
Next post ಹೇಳಲೇಬೇಕಾದ ಮಾತುಗಳು

ಸಣ್ಣ ಕತೆ

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…

  • ಹುಟ್ಟು

    ಶಾದಿ ಮಹಲ್‌ನ ಒಳ ಆವರಣದಲ್ಲಿ ದೊಡ್ಡ ಹಾಲ್‌ನಲ್ಲಿ ಹೆಂಗಸರೆಲ್ಲಾ ಸೇರಿದ್ದರು. ಹೊರಗಡೆ ಹಾಕಿದ್ದ ಶಾಮಿಯಾನದಲ್ಲಿ ಗಂಡಸರು ನೆರೆದಿದ್ದರು. ಒಂದು ಕಡೆಯ ಎತ್ತರವಾದ ವೇದಿಕೆಯ ಮೇಲೆ ಮದುವೆ ಗಂಡು,… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…