Home / ಲೇಖನ / ಇತರೆ / ಜಾಣ ಕುರುಡೇ?

ಜಾಣ ಕುರುಡೇ?

ಚಿತ್ರ: ಗರ್‍ಡ್ ಆಲ್ಟ್‌ಮನ್

ಪ್ರಿಯ ಸಖಿ,

ಹೀಗೆ, ಆಶ್ರಮವೊಂದರಲ್ಲಿ ಗುರುವೊಬ್ಬನಿದ್ದ. ಮಹಾನ್ ಮಾನವತಾವಾದಿ. ಎಂತಹ ಸೂಕ್ಷ್ಮ ಮನಸ್ಸಿನವನೆಂದರೆ ತನ್ನ ಮಾತು, ಕೃತಿಗಳಿಂದ ಎಂದೂ ಇತರರನ್ನು ನೋಯಿಸಿದವನಲ್ಲ. ತನ್ನ ಶಿಷ್ಯರೊಡನೆಯೂ ಪ್ರೀತಿ ಮಮತೆಗಳಿಂದ ನಡೆದುಕೊಳ್ಳುತ್ತಿದ್ದ. ಬಿರು ಬೇಸಿಗೆಯಲ್ಲಿ ಗಿಡಗಳು ಸುಟ್ಟು ಹೋಗುತ್ತವಲ್ಲ ಎಂದೂ ಚಳಿಗಾಲದಲ್ಲಿ ಪಕ್ಷಿಗಳು ನಡುಗಿ ನೋಯುತ್ತವಲ್ಲಾ ಎಂದೂ, ಗಿಡದಿಂದ ಹೂಕಿತ್ತರೆ ಅದಕ್ಕೆ ನೋವಾಗುವುದೆಂದೂ ಪರಿತಪಿಸುತ್ತಿದ್ದ. ಇಷ್ಟೆಲ್ಲಾ ಸೂಕ್ಷ್ಮ ಮನಸ್ಸಿನ ಈ ಗುರು ಒಬ್ಬ ಮಾಂಸಾಹಾರಿಯಾಗಿದ್ದ. ಆ ತನ್ನ ತಪಸ್ಸಿನ ಶಕ್ತಿಗೆ, ಧೈರ್ಯ, ಬುದ್ಧಿವಂತಿಕೆಗೆ ತೇಜಸ್ಸಿಗೆ ತಾನು ಮಾಂಸಹಾರಿಯಾಗಿರುವುದೇ ಕಾರಣವೆಂದು ಬಲವಾಗಿ ನಂಬಿದ್ದ! ಈ ಆಶ್ರಮಕ್ಕೆ ಹೊಸ ಶಿಷ್ಯನೊಬ್ಬ ಆಗಮಿಸಿದ. ಅವನೋ ಅಪ್ಪಟ ಸಸ್ಯಾಹಾರಿ. ಜೊತೆಗೆ ಮಹಾನ್ ಬುದ್ಧಿವಂತ. ಅವನಿಗೆ ತನ್ನ ಗುರುಗಳ ಬುದ್ಧಿವಂತಿಕೆ, ಶಕ್ತಿ, ಎಲ್ಲಕ್ಕಿಂತ ಹೆಚ್ಚಾಗಿ ಅವರ ಮಾನವೀಯ ಗುಣಗಳು ಹೆಚ್ಚು ಮೆಚ್ಚುಗೆಯಾದವು. ಮಾನವೀಯತೆಯ ಕುರಿತು ಅವರು ಹೇಳುತ್ತಿದ್ದ ಕಥೆಗಳು, ಅದರಂತೆ ನಡೆಯಬೇಕೆಂದು ಅವರು ನೀಡುತ್ತಿದ್ದ ಉಪದೇಶ ಎಲ್ಲವೂ ಬಹಳ ಅಪ್ಯಾಯಮಾನವಾಗಿದ್ದವು. ಹಾಗೆಯೇ ಹೂವು, ಗಿಡ, ಮರ, ಪಕ್ಷಿಗಳ ಕುರಿತೂ ಅವರಿಗಿರುವ ಪ್ರೀತಿಯನ್ನು ಕಂಡು ಹೃದಯ ತುಂಬಿಬರುತ್ತಿತ್ತು.

ಆದರೆ ಅವನಿಗೆ ಅರ್ಥವಾಗದ್ದೊಂದೇ. ಅದು ಗುರುಗಳ ಮಾಂಸಾಹಾರ ಸೇವನೆ. ಇಷ್ಟೆಲ್ಲಾ ಪ್ರೀತಿ ತುಂಬಿದ ಹೃದಯದ ಗುರುಗಳು ಮಾಸಾಹಾರಿಗಳೇಕೆ ಎಂಬ ಪ್ರಶ್ನೆ ಅವನನ್ನು ಕಾಡುತ್ತಿತ್ತು. ಹಾಗೆಂದು ಗುರುಗಳನ್ನು ಎದುರಿಗೇ ಕೇಳಲಾದೀತೇ? ಸರಿ ಅವರ ಆಹಾರ ಕ್ರಮವನ್ನು, ಇಂಚಿಂಚೂ ಪರೀಕ್ಷಿಸತೊಡಗಿದ.

ಗುರುಗಳು ಆಹಾರದ ಸಮಯಕ್ಕೆ ಸರಿಯಾಗಿ ಭೋಜನ ಶಾಲೆಗೆ ಆಗಮಿಸುತ್ತಿದ್ದರು. ಆಹಾರ ಸೇವಿಸಿ ಹೊರಟು ಹೋಗುತ್ತಿದ್ದರು. ಆಹಾರ ತಯಾರಿ ವಿಧಾನವಾಗಲಿ, ಇವರ ಮಾಂಸಾಹಾರಕ್ಕಾಗಿ ನಡೆಯುವ ಪ್ರಾಣಿ ವಧೆಯನ್ನಾಗಲಿ ಅವರು ಕಂಡೇ ಇರಲಿಲ್ಲ.

ಈ ಹೊಸ ಶಿಷ್ಯ ಇದನ್ನೆಲ್ಲವನ್ನೂ ಅವರಿಗೆ ತೋರಿಸಲು ನಿರ್ಧರಿಸಿದ. ಒಂದು ದಿನ ಆ ವೇಳೆಯಲ್ಲಿ ಅವರನ್ನು ಪಾಕ ಶಾಲೆಗೆ ಕರೆತಂದ. ಅಲ್ಲಿ ಕೆಲ ಶಿಷ್ಯರು ಕೋಳಿಯೊಂದರ ಪುಕ್ಕ ಕಿತ್ತು, ಅದನ್ನು ಕೊಲ್ಲುವ ತಯಾರಿಯಲ್ಲಿದ್ದರು. ಇದನ್ನು ಕಂಡ ಗುರುಗಳು ಸಿಟ್ಟಿನಿಂದ ಕೂಗಾಡಿದರು. ಶಿಷ್ಯರು ತಮ್ಮ ಆಹಾರಕ್ಕಾಗಿಯೇ ಈ ಎಲ್ಲಾ ಹಿಂಸೆ ಎಂದಾಗ ಗುರುಗಳು ದಿಗ್ಭ್ರಾಂತರಾದರು!

ಪ್ರಿಯ ಸಖಿ, ಗುರುಗಳು ಮಾಂಸಾಹಾರ ತ್ಯಜಿಸಿ ಸಸ್ಯಾಹಾರಿಯಾದರೋ ಇಲ್ಲ ಇಂತಹ ಹಿಂಸೆಯನ್ನು ತಮ್ಮ ಕಣ್ಣಿಗೆ ತೋರಿಸಿದ್ದಕ್ಕಾಗಿ ಹೊಸ ಶಿಷ್ಯನನ್ನೇ ದಂಡಿಸಿದರೋ, ಮುಂದೆ ಆ ಕಥೆಯೇನಾಯ್ತೋ ನಮಗೆ ಬೇಡ. ಆದರೆ ಮೃದು ಹೃದಯದ, ಸಣ್ಣ ನೋವಿಗೂ ಸ್ಪಂದಿಸುವೆವೆಂದು ಹೇಳಿಕೊಳ್ಳುವಂತಹಾ ಈ ಗುರುವಿನಂತವರು ಇಂತಹಾ ಹಿಂಸಾಚಾರವನ್ನು ನಿತ್ಯ ತಮ್ಮ ಮನೆಗಳಲ್ಲಿ ನೋಡುತ್ತಲೇ ಇರುತ್ತಾರಲ್ಲವೇ ? ನಮ್ಮ ಕಥೆಯ ಗುರುವಿನಂತೆ ಹಿಂಸೆಯ ಅರಿವು ಅವರಿಗಿರುವುದಿಲ್ಲವೊ, ಈ ಕುರಿತು ಜಾಣ ಕುರುಡೋ. ಪ್ರಾಣಿಗಳಿರುವುದೇ ನಮ್ಮ ಆಹಾರಕ್ಕೆ ಅದರಲ್ಲೆಂತಾ ಹಿಂಸೆ ಎಂಬ ದಿವ್ಯ ಬುದ್ಧಿವಂತಿಕೆಯೋ? ಏನೆಂಬುದು ಅವರವರಿಗೇ ಗೊತ್ತಿರಬೇಕಷ್ಟೇ.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...