Home / ಕವನ / ಕವಿತೆ / ಮೌನ ಮಾತಾಗುವ ಹೊತ್ತು

ಮೌನ ಮಾತಾಗುವ ಹೊತ್ತು

ಹೂಗಳ ಮೌನ ಮಾತಾಗುವ ಹೊತ್ತು
ನಾನು ಅರಳಬೇಕಷ್ಟೇ…
ವಿಷಾದದ ಹಗಲು
ಹಳತಾದ ರಾತ್ರಿಗಳು
ಹಳೆಯ ಕಾಗದದ ಪುಟದಂತೆ
ಅಟ್ಟಸೇರಿ ಎಷ್ಟೋದಿನ ಮೌನದಿ‌ ಮಲಗಿದಂತೆ
ರಾತ್ರಿಗಳಿಗೂ ವಯಸ್ಸಾಗುತ್ತದೆ
ಮುಪ್ಪಾಗುತ್ತದೆ ; ಚರ್ಮ ಸುಕ್ಕುಗಟ್ಟುತ್ತದೆ ಗೆಳೆಯಾ

ಬಯಲು ಬಿಕ್ಕಳಿಸುವ ಸಮಯ
ನಿನ್ನೆಗಳು ಮುಗ್ಗರಿಸಿ ಬಿದ್ದಿವೆ
ನಿನ್ನೆಗೆ ಕಂದನ ಪಾದವಾಗಿ
ವರ್ತಮಾನದ ಎದೆಗೆ ಒದೆಯುವ ಬಯಕೆ

ನಗರ ವಿಷಾದ ಹೊದ್ದು ಮಲಗುವ ಸಮಯ
ನಿನ್ನೆಗಳು ನಮ್ಮವಾಗಿದ್ದವು
ವರ್ತಮಾನ ನಮ್ಮದಲ್ಲ
ನಾಳೆಯೂ ಗೊತ್ತಿಲ್ಲ
ಗೊಂದಲದ ಬದುಕಿನಲಿ ಹಂಬಲ
ಮೊಳಕೆಗೆ ಮುನ್ನ ಸೋಲುತಿದೆ
ವರ್ತಮಾನಕೆ ಕಳೆದುದರ ಚಿಂತೆ ಹಳಹಳಿಕೆ

ನದಿ ದುಃಖಿಸುವ ಸಮಯ
ಹಾಗಿತ್ತು ಹೀಗಾಗಬೇಕಿತ್ತು ಏನಾಗಿಹೋಯಿತು ಹೀಗೆ ಬದಲಾಗಬಹುದು
ಕಷ್ಟ ; ಈ ಹಾಳು ಮನಸು ಬಂಧನಗಳ ಈ ಬಂಧನದಲ್ಲಿ
ಆ ಅದು ಸಾಧ್ಯವಿಲ್ಲ ಬಿಡು
ಕನಸು ಕಾಣಬೇಡ , ಮಾತು ಕೊಡಲಾರೆ ….

ಹಕ್ಕಿಗಳು ಗೂಡು ಸೇರುವ ಸಮಯ
ಈ ಮನುಷ್ಯರ ಗೊಣಗಾಟಗಳಲ್ಲಿ ವರ್ತಮಾನವೂ ಮುಪ್ಪಾಗಿ
ನಿನ್ನೆಯ ಹಳೆಯ ಪುಟಕ್ಕೆ ಸೇರುವ ಮುನ್ನ

ಎಲ್ಲವೂ ಶೃಂಗಾರ, ನಾನು ನೀನು
ಬೆತ್ತಲೆಯ ನದಿ ಬೆಟ್ಟ ಬಯಲು ಚಂದ್ರ ಹೂ ತಾರೆ

ನಿನ್ನೆ ಇವತ್ತು ನಾಳೆ ನಾಡಿದ್ದು
ನಾಲಿಗೆಗಳು ಶಬ್ದವಿಲ್ಲದ ಯುದ್ಧ ಮಾಡುವ ಸಮಯ
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...