Home / ಕವನ / ಕವಿತೆ / ಹ್ಯಾಗೆ ಮಾಡಬೇಕ-ಈಕಿ ಸೋಗ ನೋಡಿ

ಹ್ಯಾಗೆ ಮಾಡಬೇಕ-ಈಕಿ ಸೋಗ ನೋಡಿ

ಹ್ಯಾಗೆ ಮಾಡಬೇಕ ಈಕಿ ಸೋಗ ನೋಡಿ ಸುಮ್ಮನೆ
ಹೋಗುವದಾಗವಲ್ಲದೈ ಸಾಂಬಾ
ಯೋಗಿ ಜನರಿಗೆ ಬಾಯ್ಗೆ
ಬೀಗ ಹಾಕಿದಳೆಂದು
ಕೂಗುತದ ವೇದಾಗಮ ತುಂಬಾ
ಬ್ಯಾಗದಿ ಶೃಂಗಾರವಾಗಿ
ಸಾಗಿ ಬಂದು ಸುಳಿದರೆ
ಮೇಘ ಮಿಂಚಿನಂತೆ ಮಾರಿಯ ಬಿಂಬಾ
ಈಗ ನೋಡುತಿರೆ ಈ
ಜಗದೊಳು ಮನುಜರ ಮನಸಿಜದೊರಿ ಭಾಗ್ಯದ ಕುಂಭಾ
ಲಾಗವಾಗಿ ಲಕ್ಷಣ ತೂಗುತದ ಯವ್ವನ
ನಾಗಲೋಕದ ಪದ್ಮಿನಿ ರಂಭಾ
ರಾಜದಿ ರಾಜೀವಮುಖಿ
ಸೋಗಿ ನೇತ್ರವನು ಕಂಡು
ಬ್ಯಾಗಿ ಹತ್ತಿತಲ್ಲೋ ಮನ್ಮಥ ಸಾಂಬಾ
ಬಗಿಬಗಿಯಲಿಂದ ಜಗಕಿಳಿದು ಜನದೊಳತಿ ಜಾಲಾ
ಒಗದಾಳೋ ವಿಟದ ಮನ ಕೀಲಾ
ಅಗಣಿತದಿ ಆದಳು ಸುಗುಣಾತ್ಮರಿಗೆ ಮೂಲಾ
ಮುಗುಳ್ನಗಿ ಮುರಕ ಮುದ್ದು ಲೀಲಾ
ಹಗಲಿರುಳು ಇವಳ ಆಳಾಪಹತ್ತಿ ಬೆಂಬಾಲಾ
ತಿರುಗಿದ ಋಷಿಗಳು ಶಿವ ಬಲ್ಲಾ
ಭೋಗ ಉಪರತಿ ಸೈ
ಯೋಗಿ ಸಂಪದ ಸುಖ
ಆಗದಾಂಗ ಆದಿತೆಂದೆದಿಗೆಂಬಾ || ೧ ||

ಬಾಳನೇತ್ರನೊಳು ಶಕ್ತಿ ಬಾಳವಿಲಾಸದಲಿಂದ
ತಾಳಿದಳು ಶಿವ ನಿಜರೂಪಸ್ಥಳಾ
ಬಾಳಿವಂತಿ ನಾಡೀರೋಳು
ಬಾಳಮಂದಿ ಶರಣರನ್ನು ತರಬೆನೆಂದು
ತಾಳ್ತೈತಿ ನಿನ್ನ ಛಲಾ
ವಾಳೆವಾಯಿತೆಂದು ಹರನಾ
ಮ್ಯಾಳದಿಂದ ಮನೆಗೆ ಬಂದು
ಹೇಳಿ ಕಳಿವ್ಯಾಳೋ ತಾಮಸದ ಕಳಾ
ಗಾಳಿ ಸೋಂಕಲಳಿಯ ಮುನಿ ಮೃಗಗಳಕೊಲ್ಲುವಂಥಾ
ಜಾಲ ಜಗದೊಳಗಿದು ಹೆಣ್ಣುಕುಲಾ
ಬಾಲೆ ತಯಾರಾಗಿ ಸಾಗಿ
ಮೇಲು ಆಕಾಶದ ತಾರಿ
ಪೋಲ್ವ ಚನ್ನಿಗಮುಖಿ ಪದ್ಮಗಳಾ
ಕಲ್ಲು ಕದಪು ಕನ್ನಡಿಗಳಾ
ಕೋಲಮಿಂಚಿನಂತೆ ಕಣ್ಣು
ಸಾಲ ದಂತ ದಾಳಿಂಬ್ರ ತುಟಿ ಹವಳಾ
ಆ ಲಲನೆ ತಿದ್ದಿ ತಿಲ್ಕಿಟ್ಟು ಫಣಿಗೆ ಕಸ್ತೂರಿ
ಭೂಲೋಕದೊಳಗೆ ವಿಸ್ತಾರಿ
ಒಪ್ಪುವಂತ ಕರ್ಣದೊಳು ಬುಗುಡಿ ಬಾವಲಿ ಬಲು ಭಾರಿ
ಚಳತುಂಬು ವಜ್ರಗಳು ಹೇರಿ
ವಸ್ತ್ರ ಆಭರಣ ಅಲಂಕಾರ ಭಾರಿ
ಕಲಿಯಗಕೆ ಇಳಿದಳೋ ಬೀರಿ
ಕೀಲಗಡಗ ಹರಡಿ ಹಸ್ತ
ಕಾಲ ಸರಪಳಿ ರುಳಿ ತೋಳ್ಬ೦ದಿ ವಂಕಿ
ನಡುವಿನ ಡಾಬಾ ಬಾಳಿ ಸುಳಿ ನಳಿನಾಭಿ
ತೋಳ್ಗಳ ಬೀಸುತ
ಸೂಳ್ಗೇರಿಯೊಳು ಸುಳಿದಳೋ ಜಂಬಾ || ೨ ||

ಧಾರುಣಿಗೆ ಮೀರಿ ಮಾಯ ಅವತಾರ
ಸಾರಿ ಹೊರಟು ಬರುತದ ದೂರದಿಂದ ಬರಬರಾ
ದಾರಿಯೊಳು ಲಂಕಾಪುರ
ವೀರದಾನ್ನವರ ಸುಟ್ಟುಬಿಟ್ಟಿತು
ಕುಂಭಕರ್ಣ ರಾವಣಾಸುರಾ
ಭಾರತದೀ ಧೀರ ಕ್ಷತ್ರಿಯರನ್ನು ಮುರಿದೊತ್ತಿ
ಸೂರೆಮಾಡಿದಳು ಗಮಕಿಲೆ ಪೂರಾ
ಹರಿ ಹರ ಬ್ರಹ್ಮರನು ಸುರಮುನಿ ಜನರನು
ಜಾರತನದಲಿ ಮೆಚ್ಚಿಸಿ ಪಾರಾ
ಪರಿಪರಿಯಲಿಂದ ಸಂಚರಿಸಿ ಬಂದು
ಶಿಶುನಾಳಾ ಪ್ರಭುವರನ ಕಂಡು ಕಳವಳಾ
ತೋರಲ್ಕೆ ಕೆಟ್ಟಿತು ಮಾಯದಿಂದ
ಮಾಡಿದಳಾಕಿ ಮ್ಯಾಳಾ
ತಿಳಿದಷ್ಟು ಹೇಳುವೆ ಕುಶಲಗಳಾ
ನಾರಿಯರ ವಾಸಗೂಡಿ
ಮೂರು ನುಡಿ ಪದ ಹಾಡಿ
ಪಾರಗಾಂಬುದು ಪರಮಾಲಂಬಾ ||೩||
*****

 

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...