Home / ಕವನ / ಕವಿತೆ / ಹ್ಯಾಗೆ ಮಾಡಬೇಕ-ಈಕಿ ಸೋಗ ನೋಡಿ

ಹ್ಯಾಗೆ ಮಾಡಬೇಕ-ಈಕಿ ಸೋಗ ನೋಡಿ

ಹ್ಯಾಗೆ ಮಾಡಬೇಕ ಈಕಿ ಸೋಗ ನೋಡಿ ಸುಮ್ಮನೆ
ಹೋಗುವದಾಗವಲ್ಲದೈ ಸಾಂಬಾ
ಯೋಗಿ ಜನರಿಗೆ ಬಾಯ್ಗೆ
ಬೀಗ ಹಾಕಿದಳೆಂದು
ಕೂಗುತದ ವೇದಾಗಮ ತುಂಬಾ
ಬ್ಯಾಗದಿ ಶೃಂಗಾರವಾಗಿ
ಸಾಗಿ ಬಂದು ಸುಳಿದರೆ
ಮೇಘ ಮಿಂಚಿನಂತೆ ಮಾರಿಯ ಬಿಂಬಾ
ಈಗ ನೋಡುತಿರೆ ಈ
ಜಗದೊಳು ಮನುಜರ ಮನಸಿಜದೊರಿ ಭಾಗ್ಯದ ಕುಂಭಾ
ಲಾಗವಾಗಿ ಲಕ್ಷಣ ತೂಗುತದ ಯವ್ವನ
ನಾಗಲೋಕದ ಪದ್ಮಿನಿ ರಂಭಾ
ರಾಜದಿ ರಾಜೀವಮುಖಿ
ಸೋಗಿ ನೇತ್ರವನು ಕಂಡು
ಬ್ಯಾಗಿ ಹತ್ತಿತಲ್ಲೋ ಮನ್ಮಥ ಸಾಂಬಾ
ಬಗಿಬಗಿಯಲಿಂದ ಜಗಕಿಳಿದು ಜನದೊಳತಿ ಜಾಲಾ
ಒಗದಾಳೋ ವಿಟದ ಮನ ಕೀಲಾ
ಅಗಣಿತದಿ ಆದಳು ಸುಗುಣಾತ್ಮರಿಗೆ ಮೂಲಾ
ಮುಗುಳ್ನಗಿ ಮುರಕ ಮುದ್ದು ಲೀಲಾ
ಹಗಲಿರುಳು ಇವಳ ಆಳಾಪಹತ್ತಿ ಬೆಂಬಾಲಾ
ತಿರುಗಿದ ಋಷಿಗಳು ಶಿವ ಬಲ್ಲಾ
ಭೋಗ ಉಪರತಿ ಸೈ
ಯೋಗಿ ಸಂಪದ ಸುಖ
ಆಗದಾಂಗ ಆದಿತೆಂದೆದಿಗೆಂಬಾ || ೧ ||

ಬಾಳನೇತ್ರನೊಳು ಶಕ್ತಿ ಬಾಳವಿಲಾಸದಲಿಂದ
ತಾಳಿದಳು ಶಿವ ನಿಜರೂಪಸ್ಥಳಾ
ಬಾಳಿವಂತಿ ನಾಡೀರೋಳು
ಬಾಳಮಂದಿ ಶರಣರನ್ನು ತರಬೆನೆಂದು
ತಾಳ್ತೈತಿ ನಿನ್ನ ಛಲಾ
ವಾಳೆವಾಯಿತೆಂದು ಹರನಾ
ಮ್ಯಾಳದಿಂದ ಮನೆಗೆ ಬಂದು
ಹೇಳಿ ಕಳಿವ್ಯಾಳೋ ತಾಮಸದ ಕಳಾ
ಗಾಳಿ ಸೋಂಕಲಳಿಯ ಮುನಿ ಮೃಗಗಳಕೊಲ್ಲುವಂಥಾ
ಜಾಲ ಜಗದೊಳಗಿದು ಹೆಣ್ಣುಕುಲಾ
ಬಾಲೆ ತಯಾರಾಗಿ ಸಾಗಿ
ಮೇಲು ಆಕಾಶದ ತಾರಿ
ಪೋಲ್ವ ಚನ್ನಿಗಮುಖಿ ಪದ್ಮಗಳಾ
ಕಲ್ಲು ಕದಪು ಕನ್ನಡಿಗಳಾ
ಕೋಲಮಿಂಚಿನಂತೆ ಕಣ್ಣು
ಸಾಲ ದಂತ ದಾಳಿಂಬ್ರ ತುಟಿ ಹವಳಾ
ಆ ಲಲನೆ ತಿದ್ದಿ ತಿಲ್ಕಿಟ್ಟು ಫಣಿಗೆ ಕಸ್ತೂರಿ
ಭೂಲೋಕದೊಳಗೆ ವಿಸ್ತಾರಿ
ಒಪ್ಪುವಂತ ಕರ್ಣದೊಳು ಬುಗುಡಿ ಬಾವಲಿ ಬಲು ಭಾರಿ
ಚಳತುಂಬು ವಜ್ರಗಳು ಹೇರಿ
ವಸ್ತ್ರ ಆಭರಣ ಅಲಂಕಾರ ಭಾರಿ
ಕಲಿಯಗಕೆ ಇಳಿದಳೋ ಬೀರಿ
ಕೀಲಗಡಗ ಹರಡಿ ಹಸ್ತ
ಕಾಲ ಸರಪಳಿ ರುಳಿ ತೋಳ್ಬ೦ದಿ ವಂಕಿ
ನಡುವಿನ ಡಾಬಾ ಬಾಳಿ ಸುಳಿ ನಳಿನಾಭಿ
ತೋಳ್ಗಳ ಬೀಸುತ
ಸೂಳ್ಗೇರಿಯೊಳು ಸುಳಿದಳೋ ಜಂಬಾ || ೨ ||

ಧಾರುಣಿಗೆ ಮೀರಿ ಮಾಯ ಅವತಾರ
ಸಾರಿ ಹೊರಟು ಬರುತದ ದೂರದಿಂದ ಬರಬರಾ
ದಾರಿಯೊಳು ಲಂಕಾಪುರ
ವೀರದಾನ್ನವರ ಸುಟ್ಟುಬಿಟ್ಟಿತು
ಕುಂಭಕರ್ಣ ರಾವಣಾಸುರಾ
ಭಾರತದೀ ಧೀರ ಕ್ಷತ್ರಿಯರನ್ನು ಮುರಿದೊತ್ತಿ
ಸೂರೆಮಾಡಿದಳು ಗಮಕಿಲೆ ಪೂರಾ
ಹರಿ ಹರ ಬ್ರಹ್ಮರನು ಸುರಮುನಿ ಜನರನು
ಜಾರತನದಲಿ ಮೆಚ್ಚಿಸಿ ಪಾರಾ
ಪರಿಪರಿಯಲಿಂದ ಸಂಚರಿಸಿ ಬಂದು
ಶಿಶುನಾಳಾ ಪ್ರಭುವರನ ಕಂಡು ಕಳವಳಾ
ತೋರಲ್ಕೆ ಕೆಟ್ಟಿತು ಮಾಯದಿಂದ
ಮಾಡಿದಳಾಕಿ ಮ್ಯಾಳಾ
ತಿಳಿದಷ್ಟು ಹೇಳುವೆ ಕುಶಲಗಳಾ
ನಾರಿಯರ ವಾಸಗೂಡಿ
ಮೂರು ನುಡಿ ಪದ ಹಾಡಿ
ಪಾರಗಾಂಬುದು ಪರಮಾಲಂಬಾ ||೩||
*****

 

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...