Home / ಕವನ / ಕವಿತೆ / ಮೋಜ ನೋಡಿರಿ ಗಾಂಜಿಯಮಕಿನ

ಮೋಜ ನೋಡಿರಿ ಗಾಂಜಿಯಮಕಿನ

ಮೋಜ ನೋಡಿರಿ ಗಾಂಜಿಯಮಕಿನ
ತೇಜಿಯೇರಿದ್ಹಾಂಗ ಜುಲಾಸ್ತದ ಅಮಲಾ
ಈ ಜನರಿನ್ನೇನಿದು ಬಲ್ಲರು ದುರ್ಗುಣ ಮಾಡುವಂತಿರಲು
ಸಹಜವಾದ ಸದ್ಬೀಜದ ಮಹಿಜನವನದಲ್ಲು ಫಲವಾಗಿರಲು
ಶ್ರೀಜಗದೀಶನ ಪೂಜಿತ ಮುನಿಜನ ರಾಜೀವನ ಮೋಹಿಸಲು
ಸೋಜಿಗೆನಿಪ ಶುಭವಾದ ವೃಕ್ಷದಲಿ
ಜನಿಸಿದ ಈ ಮುಗುಳು ಚಿಗಿತು ಬೆಳದಿಹುದು ತೇಜಸು ಪುಷ್ಪಗೊಂಚಲ
ಗೊನಿ ಕೆಂಜಾಗಿನ ವರ್ಣದಲಿ ರಾಜಿಸುವದರಿಂದ ಕುಸುಮಾರ್ಗದ ಫಲ
ಕಾಮಿಸಿ ವ್ಯಾಳ್ಯಗಳು ರಾಜಯೋಗಿಗಳು

ನೈಜಾಮದ ಗೋದಾವರಿ ತೀರದ ಜಲದೊಳು ಮರ್ದಿಸಲು
ಶೋಭಿಪ ಸತ್ವ ರಜೋಗುಣ ತತ್ವದ
ತಪ್ಪಲ ಕೂಡಿರಲು ಗುಳಿಗಿಯಾಗಿರಲು
ಸಾಧುಸಂತರನಾದರಿಸುತ ನಿಜಬೋಧದಿ ಮುಳಗಿರಲು ||೧||

ಬೋಧಾಮೃತ ಸಾನಂದದಿ
ಸಾಧಕರು ಕೂಡಿ ಮೋದದಲಿ ನೋಡಿ
ಮೇದಿನಿ ಸ್ಥಲದಂತೆ ಆ ಕೃತಿಯನು ದಂಡಿಸಿದರು ತಿಂಡಿ
ಶೋಭಿಸಿ ಶರೀರ ಬುರುಡಿಗೆ ತನುವಿನ ಮೀರು
ಇದಕೆ ಜೋಡಿ ಜಲದಿ ಒಡಗೂಡಿ
ಶ್ರೀಧರ ಬ್ರಹ್ಮ ಸದಾಶಿವ ಮೂವರು ಆಧಾರವ ಮಾಡಿ
ಕ್ರೋಧಾದಿಗಳನ್ನು ಛೇದಿಸಿ ಜ್ಞಾನದ ಚಿಲುಮೆ-
ಯೊಳಗೆ ನೀಡಿ ಅಗ್ನಿಯನು ತೋಡಿ
ಈ ದಶವಾಯು ಬಿಗಿದು ಸುಷುಮ್ನನಾಳದೊಳಗೆ ಹೂಡಿ
ಆದಿ ಸದ್ಗುರುವಿನ ಕೈಯೊಳಗೊಪ್ಪುವ ನಾದಿನ
ಗುಡಗುಡಿ ಸೇದಿ ನಲಿದಾಡಿ
ಬಾಧಿ ದುರಿತ ಬಹು ಬಂಧನದ ಕರ್ಮವು ಶೋಧಿಸಿ ಈಡ್ಯಾಡಿ ||೨||

ಈ ಪರಿ ಮಹಿಮದ ರೂಪ ನಿರಾಲ
ಪರಂಜ್ಯೋತಿ ನಿರ್ಮಿಸಿದ ರೀತಿ
ಸ್ಥಾಪಿಸಿದನು ಶಿವನಾವ ಪರಲೋಕದ ಕಲ್ಪದ್ರುಮದ ಜಾತಿ
ಕಾಪುರುಷರು ಕುಹಕರಿಗೆ ಸಲ್ಲರು ತಾಪಸಿಯರಿಗೆ ಪ್ರೀತಿ
ತತ್ವದ ನಡತೆ ಸೋಹಂ ಪದಕೇರಿಸಿ ತಾಂ
ಪರವಸ್ತುವ ತೋರಿಕೊಡುವ ರೀತಿ
ಶಾಸ್ತ್ರ ನುಡಿತೈತಿ ಪಾಪರಹಿತ ಪಂಚಾಕ್ಷರಿ ಪಠಿಸುತ
ಜೀವ ಪವನ ಒತ್ತಿ ತ್ರಿಕೂಟದಲ್ಹತ್ತಿ
ತಾ ಚರಿಸ್ಯಾಡುತ ನೋಡಲು ಪಶ್ಚಿಮ ಚಕ್ರದೊಳಗೆ ಸುತ್ತಿ
ಭೂಪತಿ ರಾಜಗೋವಿಂದನ ಅರಮನಿ
ಹೊಳೆವ ಚಂದ್ರಕಾಂತಿ ಮೂಲ ಸಿದ್ಧಾಂತಿ
ಭಾಪುರೆ ಶಿಶುನಾಳಧೀಶನ ವರವಿಲೆ ನಾ ಪಡೆದೆನು ಮುಕ್ತಿ ||೩||

*****

 

Tagged:

Leave a Reply

Your email address will not be published. Required fields are marked *

ಸರ್‍ಕಸ್ಸು ಮುಗಿದರೂ ಅವನು ಅಲ್ಲಿಯೇ ಕುಳಿತಿದ್ದ. ಎಲ್ಲಾ ಎದ್ದು ಹೋಗಿದ್ದರು. ಎರಡನೇ ಷೋ ಆರಂಭವಾಗಲು ಕೆಲವೇ ಸಮಯ ಉಳಿದಿತ್ತು. ಅವನ ಕಣ್ಣುಗಳು ಏನನ್ನೋ ಹುಡುಕುತ್ತಿದ್ದವು. ಆ ಸರ್‍ಕಸ್ಸಿನ ಹುಡುಗಿ ಪ್ರವೇಶಿಸಿ ಓಡಿ ಬಂದು ಎರಡು ಬಾರಿ ಲಾಗಾ ಹಾಕಿ ಇವನ ಮುಂದೆಯೇ ನಿಂತಂತಾಯಿತು. ಆಕೆಯ...

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...