Home / ಕವನ / ಕವಿತೆ / ಕೊಡು ನಿನ್ನ ದುಃಖ

ಕೊಡು ನಿನ್ನ ದುಃಖ

ನನ್ನ ಸೌಂದರ್ಯವನ್ನು
ಮೆಚ್ಚಿಕೊಂಡ ಜನ
ನನ್ನ ಸರಳತೆಯನ್ನು
ಮೆಚ್ಚಿಕೊಂಡ ಜನ
ನನ್ನ ದುಃಖ ಎಷ್ಟೆಂದು ಕೇಳಲಿಲ್ಲ.

ನನ್ನನ್ನು ಪ್ರೀತಿಸಿದ ತಂದೆ
ನನ್ನನ್ನು ಸಲಹಿದ ತಾಯಿ
ನನ್ನ ಆಸೆಗಳೇನು
ಎಂದು ಕೇಳಲಿಲ್ಲ.

ನಾನು ನೀಲಿ ನಕಾಶೆಯೊಳಗೆ
ಹೊಳೆಯುವ ಕನಸುಗಳನ್ನು
ಗುರುತಿಸುತ್ತಿರುವಾಗ
ನನ್ನ ಜೀವದ ಹುಡುಗ
‘ನೀನೆಷ್ಟು ಮುಗುದೆ’
ಎಂದು ವಿಷಾದದಿಂದ ನಕ್ಕ.

ಆವತ್ತೆ ನನಗೆ ಗೊತ್ತಾಯಿತು,
ಈ ಜಗತ್ತಿನಲ್ಲಿರುವುದು
ಕೊಳೆತ ಹೃದಯಗಳು ಮಾತ್ರ.
ಈ ಜಗತ್ತಿನಲ್ಲಿರುವುದು ಹುಳಿತ ಕಣ್ಣುಗಳು ಮಾತ್ರ.

ಅಂದಿನಿಂದಲೆ ನಾನು
ಎಲ್ಲರ ಬಳಿ ಕಣ್ಣೀರು
ಬೇಡಲು ಶುರುಮಾಡಿದೆ.
ಎಲ್ಲರ ಕನಸುಗಳನ್ನು
ಕುತೂಹಲಿಯಾಗಿ ನೋಡಿದೆ.

ನನ್ನೆದೆಯೊಳಗೆ
ಹರಳುಗಟ್ಟುತ್ತಿತ್ತು ದುಃಖ
ಬೆಟ್ಟವಾಗುತ್ತಿತ್ತು ದುಃಖ
ನಾನು ಎಲ್ಲರಿಗೂ ಕೂಗಿ ಹೇಳುತ್ತಿದ್ದೆ
ನೋಡಿ-
ಈ ಬೆಟ್ಟ ಕಣ್ಣೀರಿನದು
ನನ್ನದು ಹಾಗು ನಿಮ್ಮದು.

ಬೆಟ್ಟ ಕರಗಿ ಪ್ರವಾಹವಾಗಿ
ಹರಿಯುತ್ತಿತ್ತು ದುಃಖ.
ನಾನು ಎಲ್ಲರಿಗೂ ಕೂಗಿ ಹೇಳುತ್ತಿದ್ದೆ
ನೋಡಿ-
ಈ ಪ್ರವಾಹ ಕಣ್ಣೀರಿನದು, ನನ್ನದು ಹಾಗೂ ನಿಮ್ಮದು.

ಎಲ್ಲ ನಕ್ಕರು, ಹೊರಟೇ ಹೋದರು.
ನಾನೊಬ್ಬಳೆ ಆಗಿದ್ದೆ
ಜೊತೆಗೆ ಬೆಟ್ಟ-ಪ್ರವಾಹ.

ಕೊನೆಗೂ ನೆನಪಾಯಿತು
ಹೌದು
ಅದು ಅವನದೆ ಮುಖ.
ಅದು ಕೇಳುತ್ತಿತ್ತು
ಕೊಡು ನಿನ್ನ ದುಃಖ
ಕೊಡು ನಿನ್ನ ದುಃಖ.


Tagged:

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...